ತುಮಕೂರು : ಮಾತನಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಸಚಿವ ಉದಯನಿಧಿ ಸನಾತನ ಧರ್ಮ ನಿರ್ಮೂಲನೆ ಅನ್ನೋದನ್ನು ಯಾವ ವ್ಯಾಪ್ತಿಯಲ್ಲಿ ಹೇಳಿದ್ದಾರೆ ಅನ್ನೋದನ್ನು ನೋಡಬೇಕು ಎಂದು ನಟ, ಹೋರಾಟಗಾರ ಚೇತನ ಅಹಿಂಸಾ ಹೇಳಿದರು.


COMMERCIAL BREAK
SCROLL TO CONTINUE READING

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಮಾತನಾಡುವ ಹಕ್ಕು ಎಲ್ಲರಿಗೂ ಇದೆ, ಆದರೆ ಸನಾತನ ಧರ್ಮ ಅನ್ನೋದನ್ನು ಅವರು ಯಾವ ವ್ಯಾಪ್ತಿಯಲ್ಲಿ ಹೇಳಿದ್ದಾರೆ ಅನ್ನೋದನ್ನು ನೋಡಬೇಕು, ನಾನು ಸನಾತನ ಧರ್ಮದ ವಿರೋಧಿಯಲ್ಲ, ಆದರೆ, ನಾನು ಸನಾತನ ಧರ್ಮದಲ್ಲಿನ ಅಸಮಾನತೆಯ ವಿರೋಧಿ ಎಂದರು. ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಈ ಮೂರೂ ಧರ್ಮದಲ್ಲೂ ಅಸಮಾನತೆ ಇದೆ ಎಂದು ಹೇಳಿದರು.


ಇದನ್ನೂ ಓದಿ: ಮಾಸ್‌ ಅವರತಾರದಲ್ಲಿ ಚಾಕೋಲೆಟ್‌ ಹಿರೋ...'ಅಗ್ನಿಸಾಕ್ಷಿ' ವಿಜಯ್ ಸೂರ್ಯ ಈಗ ʼವೀರಪುತ್ರʼ


ಕೇಂದ್ರ ಸರ್ಕಾರ ತರಲು ಹೊರಟಿರುವ ಏಕರೂಪ ನಾಗರಿಕ ಸಂಹಿತೆಗೆ ನನ್ನ ಸಹಮತ ಇದೆ. ಅದು ಸಮ ಸಮಾಜದ ಸಿವಿಲ್ ಕೋಡ್ ಆಗಿರಬೇಕು. ಕಮ್ಯೂನಿಸ್ಟ್‌ ರು ಅದನ್ನು ವಿರೋಧಿಸಬಹುದು, ಆದರೆ ಈ ವಿಚಾರದಲ್ಲಿ ನಮ್ಮ ಬೆಂಬಲ ಇದೆ ಎಂದು ಚೇತನ್‌ ಸ್ಪಷ್ಟ ಪಡಿಸಿದರು.


ಕಾಂಗ್ರೆಸ್‌ನವರು ತಂದಿರುವ ಐದು ಗ್ಯಾರಂಟಿ ತೇಪೆ ಹೆಚ್ಚುವ ಕೆಲಸ, ಅದನ್ನು ದೇವರಾಜ್ ಅರಸರ ಆಡಳಿತಕ್ಕೆ ಹೋಲಿಸಬೇಡಿ, ಎಸ್ಸಿ ಎಸ್ಟಿಗಳ ಅನುದಾನ ಗ್ಯಾರಂಟಿಗೆ ಬಳಸಿಕೊಂಡು ಮೋಸ ಮಾಡಿದ್ದಾರೆ, ಸಿದ್ದರಾಮಯ್ಯ ರೈತರ ಭೂಮಿಯನ್ನು ಮೈನಿಂಗೆ ಕೊಟ್ಟಿದ್ದಾರೆ, ಮೈನಿಂಗ್ ವಿರುದ್ದವೇ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ರು ಅಂತ ಚೇತನ್‌ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.