ಮತ್ತೆ ಸ್ಟಾರ್ಟ್ ಆಗಲಿದೆ Big Boss ಸೀಸನ್ 8 : ಎರಡನೇ ಇನ್ನಿಂಗ್ಸ್ ನಲ್ಲಿ 12 ಸ್ಪರ್ಧಿಗಳು!

ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ

Last Updated : Jun 16, 2021, 01:43 PM IST
  • ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್
  • ಬಿಗ್ ಬಾಸ್ ಇದೀಗ ಮತ್ತೆ ಆರಂಭವಾಗಲಿದೆ
  • ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ
ಮತ್ತೆ ಸ್ಟಾರ್ಟ್ ಆಗಲಿದೆ Big Boss ಸೀಸನ್ 8 : ಎರಡನೇ ಇನ್ನಿಂಗ್ಸ್ ನಲ್ಲಿ 12 ಸ್ಪರ್ಧಿಗಳು! title=

ಬೆಂಗಳೂರು : ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಇದೀಗ ಮತ್ತೆ ಆರಂಭವಾಗಲಿದೆ. ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ರಿಯಾಲಿಟಿ ಶೋ ಇದೀಗ ಮತ್ತೆ ಮುಂದುವರಿಯಲಿದೆ ಎಂದು ಕಲರ್ಸ್ ಕನ್ನಡದ ಪರಮೇಶ್ವರ್ ಗುಂಡ್ಕಲ್ ತಿಳಿಸಿದ್ದಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ನೂರು ದಿನವಾಗದೆ ಮನೆಗೆ ಬೀಗ ಹಾಕಲಾಗಿದೆ. ಕೋವಿಡ್(Covid-19) ಕಾರಣದಿಂದ ಮನೆಯಲ್ಲಿ ಹತ್ತು ಮಂದಿ ಸ್ಪರ್ಧಿಗಳಿರುವಂತೆ ಶೋವನ್ನು ಸ್ಥಗಿತ ಮಾಡಲಾಗಿತ್ತು.

ಇದನ್ನೂ ಓದಿ : "ನಾನು ಗರ್ಭಿಣಿಯಾಗಿದ್ದಾಗ ಸತೀಶ್ ಕೌಶಿಕ್ ನನಗೆ ಮದುವೆ ಪ್ರಸ್ತಾಪ ಇಟ್ಟಿದ್ದರು"

ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪರಮೇಶ್ವರ್ ಗುಂಡ್ಕಲ್(Parameshwar Gundkal), ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.

ಇದನ್ನೂ ಓದಿ : US Embassy : ನಟ ಸಂಚಾರಿ ವಿಜಯ್ ನಿಧನಕ್ಕೆ 'ಅಮೆರಿಕ ರಾಯಭಾರ ಕಚೇರಿ'ಯಿಂದ ಕನ್ನಡದಲ್ಲೇ ಸಂತಾಪ

ಇದೊಂಥರಾ ಎರಡನೇ ಇನಿಂಗ್ಸ್.(Second Innings) ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್‍ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.

ಇದನ್ನೂ ಓದಿ : Sanchari Vijay Passes Away : ಸಂಚಾರ ಮುಗಿಸಿದ ಸಂಚಾರಿ ವಿಜಯ್!

ಜೂನ್(June) ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ ಎಂದು ಬರೆದು ಫೋಟೋ ಒಂದನ್ನ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : Sanchari Vijay Health Condition : 'ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ'

ವಾಹಿನಿಯು ಸಾಮಾಜಿಕ ಜಾಲತಾಣಗಳಲ್ಲಿ ಇಂದು ಹೊಸ ಫೋಟೊವನ್ನು ಅಪ್ಲೋಡ್ ಮಾಡಿದೆ. ಅದರಲ್ಲಿ 12 ಸೂಟ್ ಕೇಸ್ ಗಳಿವೆ. ಇದು ಹೊಸ ಚರ್ಚೆಗೆ ಕಾರಣವಾಗಿದೆ. ಬಿಗ್ ಬಾಸ್(Bigg Boss Season 8) ಸ್ಥಗಿತವಾದಾಗ ಮನೆಯಲ್ಲಿ 10 ಮಂದಿ ಇದ್ದರು. ದಿವ್ಯ ಉರುಡುಗ ಅವರು ಅನಾರೋಗ್ಯದಿಂದ ಮನೆಯಿಂದ ಹೊರಹೋಗಿದ್ದರು. ಇದೀಗ ಮತ್ತೊಂದು ಹೆಚ್ಚುವರಿ ಸೂಟ್ ಕೇಸ್ ಇದ್ದು, ಯಾರಾದರೂ ಹೊಸ ಸ್ಪರ್ಧಿ ಮನೆಗೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಇದನ್ನೂ ಓದಿ : NYIFF 2021: ಕನ್ನಡ ಸಿನಿಮಾಗೆ ಒಲಿದು ಬಂದ ಅಂತರಾಷ್ಟ್ರೀಯ ಪ್ರಶಸ್ತಿ

ಬಿಗ್ ಬಾಸ್ ನಿಂತಾಗ ಅರವಿಂದ್.ಕೆ.ಪಿ, ಮಂಜು ಪಾವಗಡ, ಶಮಂತ್​ ಗೌಡ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ(Vaishnavi Gowda), ದಿವ್ಯಾ ಸುರೇಶ್​, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ ಮತ್ತೆ ಮನೆಯೊಳಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ದಿವ್ಯ ಉರುಡುಗ ಕೂಡಾ ಮತ್ತೆ ದೊಡ್ಡ ಮನೆಯೊಳಗೆ ಬರಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News