Kichcha Sudeepa: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಸುದೀಪ್ ಸೆಪ್ಟೆಂಬರ್ 2 ರಂದು 51ನೇ ವಸಂತಕ್ಕೆ ಕಾಲಿಡಲಿದ್ದಾರೆ. 50ನೇ ವರ್ಷದ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದ ಕಿಚ್ಚ ಈ ಬಾರಿಯ ಹುಟ್ಟು ಹಬ್ಬದ ಆಚರಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹೆಸರಾಂತ ನಟ ಬೆಂಗಳೂರಿನ ಜಯನಗರದ ಖಾಸಗಿ ಹೊಟೇಲ್ʼ​​ನಲ್ಲಿ​ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.


COMMERCIAL BREAK
SCROLL TO CONTINUE READING

''ವರ್ಷಗಳುರುಳಿದಂತೆ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ. ಅದು ಬಹಳ ಖುಷಿಯ ವಿಷಯ. ಕಳೆದ ವರ್ಷದ ಸೆಲೆಬ್ರೇಶನ್​​ನಲ್ಲಿ ಸ್ವಲ್ಪ ಗೊಂದಲವಾಯ್ತು, ತೊಂದರೆಗಳಾಗಿದ್ದವು. ಪೊಲೀಸರು ಮತ್ತು ಅಕ್ಕಪಕ್ಕ‌ದ ಮನೆಯವರು ವಿನಂತಿ ಮಾಡಿದ್ದರು. ನನ್ನಿಂದ ಯಾರಿಗೂ ತೊಂದರೆ ಆಗುವುದು ನನಗಿಷ್ಟವಿಲ್ಲ. ಈ ಬಾರಿ ಜಯನಗರದ ಎಂಇಎಸ್ ಗ್ರೌಂಡ್ʼ​​​ನಲ್ಲಿ ಸಿಗೋಣ. ಅಲ್ಲಿಯೂ ಸಮಯಾವಕಾಶವಿದೆ. ಬೆಳಗ್ಗೆ 11.30ರವರೆಗೂ ಅಲ್ಲೇ ಇರಲಿದ್ದೇನೆ'' ಎಂದು ತಿಳಿಸಿದರು.


ಇದನ್ನೂ ಓದಿ: ರೋಹಿತ್‌-ಹಾರ್ದಿಕ್‌ ನಡುವಿನ ಮುನಿಸು-ಮನಸ್ತಾಪ ದೂರವಾಗಲು ಕಾರಣ ಟೀಂ ಇಂಡಿಯಾದ ಈ ಇಬ್ಬರು


ಕಳೆದ ವರ್ಷ 30,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಆದರೆ, ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಪರಿಸ್ಥಿತಿ ನಿಭಾಯಿಸೋದು ನನ್ನ ಗೆಳೆಯರು ಮತ್ತು ಪೊಲೀಸರಿಗೆ ಕೊಂಚ ಕಷ್ಟವಾಯಿತು. ಹಾಗಾಗಿ ಈ ಬಾರಿ ಎಂಇಎಸ್ ಮೈದಾನದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುತ್ತೇನೆ. ಸಿನಿರಂಗದಲ್ಲಿನ ನನ್ನ ಪಯಣದ 30 ವರ್ಷಕ್ಕೆ ಇನ್ನೊಂದು ವರ್ಷ ಬಾಕಿ ಇದೆ. ವರ್ಷಕ್ಕೆ ಎರಡ್ಮೂರು ಸಿನಿಮಾ ಮಾಡಬೇಕೆನ್ನೋದು ನನ್ನ ಆಸೆ. ಆದ್ರೆ ಕಾರಣಾಂತರಗಳಿಂದ ವಿಳಂಬಗಳನ್ನು ಎದುರಿಸಬೇಕಾಗುತ್ತಿದೆ. ನನ್ನನ್ನು ನಟನಿಗಿಂತ ಹೆಚ್ಚಾಗಿ ಕ್ರಿಕೆಟರ್​ʼನಂತೆ ನೋಡ್ತಿದ್ದಾರೆ. ಜವಾಬ್ದಾರಿಗಳು ಹೆಚ್ಚಿವೆ. ಮ್ಯಾಕ್ಸ್ ಶೀಘ್ರ ಬಿಡುಗಡೆಯಾಗಬೇಕೆಂಬುದು ನನಗೂ ಆಸೆ" ಎಂದರು.


"ಕೊಂಚ ತಡವಾಗಿದೆ ನಿಜ. ಆದರೆ ಸಿನಿಮಾ ಬಹುತೇಕ ಪೂರ್ಣಗೊಂಡಿದೆ. ಸೆಪ್ಟೆಂಬರ್​ನಲ್ಲೇ ಮಾಹಿತಿ ಸಿಗುವ ಸಾಧ್ಯತೆಯಿದೆ. ಮಾರ್ಕೆಟಿಂಗ್ ಇರುತ್ತದೆ. ಹೆಚ್ಚಿನ ಸಂಖ್ಯೆಯ ಜನರು ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಡಿಮೆಯಾಗುತ್ತಿದೆ. ಡಿಜಿಟಲ್ ಹಾಗೂ ಟಿವಿ ರೈಟ್ಸ್ ಅಂದಾಗ ವ್ಯಾಪಾರದ ದೃಷ್ಠಿಯಿಂದ ಸಿನಿಮಾ ಬ್ಯುಸಿನೆಸ್ ಕೂಡ ಬದಲಾಗಿದೆ" ಎಂದು ತಿಳಿಸಿದರು.


ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮವನ್ನು ಸುದೀಪ್ ಅವರು ನಡೆಸೋದು ಅನುಮಾನ ಎಂದು ಹೇಳಲಾಗಿತ್ತಿದೆ. ಈ ಸೀಸನ್​ಗೆ ಬೇರೆ ಆ್ಯಂಕರ್​ಗಾಗಿ ಹುಡುಕಾಟ ನಡೆಯುತ್ತಿದೆ ಎನ್ನುವ ಸುದ್ದಿ ಇದೆ. ಆದರೆ ಈ ಪ್ರಶ್ನೆಗೆ ನಟನಿಂದ ಸ್ಪಷ್ಟ ಉತ್ತರ ಸಿಗಲಿಲ್ಲ. ಬಿಗ್ ಬಾಸ್ ಬಗ್ಗೆ ನನಗೆ ಕ್ಲ್ಯಾರಿಟಿ ಇಲ್ಲ. ಪ್ರೋಟೋಕಾಲ್ ಇರುತ್ತದೆ. ಅವರದ್ದೇ ಆದ ಒಂದು ಪ್ಲ್ಯಾನಿಂಗ್ ಇರುತ್ತದೆ ಎಂದು ತಿಳಿಸಿದರು.


ಆಮೇಲೆ ನೋಡೋಣ:
 ಇನ್ನೂ ಡಾಕ್ಟರೇಟ್ ತೆಗೆದುಕೊಳ್ಳುವಂಥ ಕೆಲಸ ನಾನೇನೂ ಮಾಡಿಲ್ಲ. ಸಿನಿಮಾ ಮಾಡಿದ್ದೇನಷ್ಟೇ. ಸಾಧನೆ ಮಾಡಿದ್ದೇನೆಂದನಿಸಿದಾಗ ನಾನೇ ಪತ್ರ ಬರೆದು ಕೇಳಿಕೊಳ್ಳುತ್ತೇನೆ. ನಾನು ಮಾಡಬೇಕಿರುವುದು ಇನ್ನೂ ಬಹಳಷ್ಟಿದೆ. ಆಮೇಲೆ ನೋಡೋಣ ಎಂದು ತಿಳಿಸಿದರು.


ಹೊಸ ಸಿನಿಮಾ ನಟರಿಗಾಗಿ ತಮ್ಮ ಮ್ಯಾಕ್ಸ್ ಸಿನಿಮಾ ಬಿಡುಗಡೆ ಮುಂದೂಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಮಾತನಾಡಿದ ಸುದೀಪ್, ಕಾಂಪ್ರೊಮೈಸ್​​ ಅನ್ನೋದು ನನ್ನ ಜೀವನದಲ್ಲೇ ಇಲ್ಲ. ಬೆಂಬಲ, ಮಾನವೀಯತೆ ಇದೆ. ನಾನು ನನ್ನ ಮನೆಯಲ್ಲೇ ಕಾಂಪ್ರೊಮೈಸ್​​ ಆಗಲ್ಲ. ಅದು ಕಾಂಪ್ರೊಮೈಸ್​​ ಅಲ್ಲ, ಸಪೋರ್ಟ್ ಅಷ್ಟೇ. ಸೋಷಿಯಲ್​ ಮೀಡಿಯಾಗಳಲ್ಲಿ ಇಂಥ ಮಾತುಗಳು ಇರುತ್ತವೆ. ಎಂಟರ್​ಟೈನ್ಮೆಂಟ್​​ ಇರಲಿ ಬಿಡಿ. ಓಟಿಟಿಯಲ್ಲಿ ಬರುತ್ತೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಿಲ್ಲ ಎಂದರೆ ಓಟಿಟಿಗೂ ಹೋಗಲು ಆಗಲ್ಲ. ಥಿಯೇಟರ್ ಅನುಭವವನ್ನು ಯಾರೂ ಮಿಸ್ ಮಾಡಿಕೊಳ್ಳೋಕೆ ರೆಡಿ ಇಲ್ಲ. ಇದೆಲ್ಲವೂ ಮಾರ್ಕೆಟಿಂಗ್ ಬಿಡಿ ಎಂದರು.


ಮ್ಯಾಕ್ಸ್ ಆದ್ಮೇಲೆ ಕೆಲ ಸಿನಿಮಾಗಳು ಲೈನ್ʼ​ನಲ್ಲಿವೆ. ಆದ್ರೆ ಯಾವ ಸಿನಿಮಾ ಶುರು ಮಾಡ್ತೇನೆಂಬುದು ಗೊತ್ತಿಲ್ಲ. ನಂಬರ್ಸ್ ಹಾಕ್ಕೊಂಡು ಹೋಗೋದು ಬೇಡ. ಸದ್ಯಕ್ಕೆ ಅದು ಕರೆಕ್ಟ್ ಆಗಲ್ಲ. ಸ್ಕೇಲ್, ವರ್ಕ್ ಎಲ್ಲವೂ ಡಿಸೈಡ್ ಮಾಡಲಿದೆ. ಬಿಲ್ಲ ರಂಗ ಭಾಷ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಅದಕ್ಕೆ ಸೂಕ್ತ ತಯಾರಿ ಆಗಬೇಕಿದೆ ಎಂದು ತಿಳಿಸಿದರು.


ಇದನ್ನೂ ಓದಿ: ವಿದೇಶದಲ್ಲಿ ನೆಲೆಸಿದ್ರೂ ವಿರಾಟ್‌ʼಗೆ ತಪ್ಪುತ್ತಿಲ್ಲ ಕಾಟ: ಕೊಹ್ಲಿ ಹಿಂದೆ ಇವರು ಬಿದ್ದಿರೋದ್ಯಾಕೆ?


ಮಾತನಾಡಿ ನೋವು ಕೊಡುವುದು ಬೇಡ:
ನಟ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ ಅಭಿಮಾನಿಗಳಿದ್ದಾರೆ. ಕುಟುಂಬವಿದೆ. ನಾವು ಮಾತನಾಡಿ ನೋವು ಕೊಡೋದು ಬೇಡ. ರಾಜಕೀಯವಾಗಿ ಮಾತನಾಡುತ್ತಿದ್ದೇನೆ ಎಂದುಕೊಳ್ಳಬೇಡಿ. ಕಾನೂನನ್ನು ನಂಬಬೇಕಿದೆ. ನಾವು ಮಾಧ್ಯಮಗಳನ್ನು ನೋಡಿ ವಿಷಯ ತಿಳಿದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.