Latest news on Jayaprada arrest: ಮಾಜಿ ನಾಯಕಿ ಜಯಪ್ರದಾ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ... ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾಗ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತೊಡಕುಗಳನ್ನು ಬಹೆಹರಿಸಿಕೊಂಡಿರಲಿಲ್ಲ... ಜಯಪ್ರದಾ ಅವರಿಗೆ ಹಲವು ಬಾರಿ ನೋಟಿಸ್ ನೀಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆಯಂತೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-ನಟಿ ಅನುಷ್ಕಾ ಶರ್ಮಾ ಪ್ರೆಗ್ನೆನ್ಸಿಯಲ್ಲಿ ಕಾಡ್ತಿದ್ಯಾ ಈ ಸಮಸ್ಯೆ? ಕೊಹ್ಲಿ ಬ್ರೇಕ್‌ ಪಡೆಯಲು ಇದೇನಾ ಅಸಲಿ ಕಾರಣ?


ಜಯಪ್ರದಾ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಅಭ್ಯರ್ಥಿಯಾಗಿ ರಾಂಪುರದಿಂದ ಸ್ಪರ್ಧಿಸಿದ್ದರು. ಈ ವೇಳೆ ಅವರ ವಿರುದ್ಧ ಚುನಾವಣಾ ನಿಯಮ ಉಲ್ಲಂಘಿಸಿದ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳು ಕೌಮಾರಿ ಮತ್ತು ಸ್ವರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಜಯಪ್ರದಾ ಅವರಿಗೆ ಎಷ್ಟು ಬಾರಿ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 


ಇದನ್ನೂ ಓದಿ-Pushpa 2 ಸೆಟ್‌ನಿಂದ ರಶ್ಮಿಕಾ ಮಂದಣ್ಣ ಶೇರ್ ಮಾಡಿದ ಫೋಟೋ ಫುಲ್ ವೈರಲ್


ಸದ್ಯ ನ್ಯಾಯಾಲಯ ಆಕೆಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಈ ಹಿಂದೆ ನ್ಯಾಯಾಲಯ ಕೂಡ ಜಾಮೀನು ರಹಿತ ವಾರೆಂಟ್ ಹೊರಡಿಸಿ ಜಯಪ್ರದಾ ಬಂಧನಕ್ಕೆ ಆದೇಶಿಸಿತ್ತು. ಏಳು ಬಾರಿ ವಾರಂಟ್ ಜಾರಿ ಮಾಡಿದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಎಂದು ಸರ್ಕಾರಿ ವಕೀಲರು ತಿಳಿಸಿದ್ದು.. ಕೂಡಲೇ ಅವರನ್ನು ಬಂಧಿಸುವಂತೆ ಆದೇಶಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.