Rishab Shetty : ಇತ್ತೀಚೆಗೆ ರಿಷಬ್‌ ಶೆಟ್ಟಿ ಮಗಳು ರಾದ್ಯಾ ಒಂದು ವರ್ಷ ಪೂರೈಸಿದ್ದರ ಬಗ್ಗೆ ರಿಷಬ್ ಶೆಟ್ಟಿ ಪೋಸ್ಟ್ ಮಾಡಿ ತಿಳಿಸಿದ್ದರು. ರಾದ್ಯಾಳ ಮುದ್ದಾದ ಫೋಟೊಶೂಟ್ ಮಾಡಿಸುವ ಮೂಲಕ ಆ ವಿಡಿಯೊವನ್ನು ಹಂಚಿಕೊಂಡು "ರಾದ್ಯಾಳ ಮೊದಲ ಹುಟ್ಟುಹಬ್ಬಕ್ಕೆ ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಇರಲಿ" ಎಂದು ಬರೆದುಕೊಂಡಿದ್ದರು.


COMMERCIAL BREAK
SCROLL TO CONTINUE READING

ಹಳದಿ, ಬಿಳಿ ಹಾಗೂ ಹಸಿರು ಡ್ರೆಸ್‌ನಲ್ಲಿ ಸಖರ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದ ರಾದ್ಯಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಳು. ಇನ್ನು ಕೇವಲ ರಾದ್ಯಾಳ ಫೋಟೊಶೂಟ್‌ನ ವಿಡಿಯೊವನ್ನು ಮಾತ್ರ ಹಂಚಿಕೊಂಡಿದ್ದ ರಿಷಬ್ ಶೆಟ್ಟಿ ಹುಟ್ಟುಹಬ್ಬದ ಕಾರ್ಯಕ್ರಮ ಹೇಗೆ ನಡೆಯಿತು, ಯಾರೆಲ್ಲಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಎಂಬ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ. 


ಆದರೀಗ ರಾದ್ಯಾ ಹುಟ್ಟುಹಬ್ಬ ಕಾರ್ಯಕ್ರಮದ ಫೋಟೊ ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿವೆ. ಹೆಚ್ಚಾಗಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾದ್ಯಾ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಟರಾದ ಅಭಿ‍ಷೇಕ್ ಅಂಬರೀಶ್, ಝೈದ್ ಖಾನ್ ಜತೆ ಈ ಕಾರ್ಯಕ್ರಮಕ್ಕೆ ದರ್ಶನ್ ಹಾಜರಾಗಿದ್ದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕಪ್ಪು ಬಣ್ಣದ ಡ್ರೆಸ್ ಧರಿಸಿ ಕಾರ್ಯಕ್ರಮಕ್ಕೆ ಆಗಮಿಸಿದ ದರ್ಶನ್ ರಿಷಬ್ ಶೆಟ್ಟಿ ದಂಪತಿ ಜತೆ ಸಂತಸದಿಂದ ಮಾತನಾಡಿದ್ದಾರೆ. 


ಇದನ್ನೂ ಓದಿ-Ragini Dwivedi : "ಬಿಂಗೋ" ಚಿತ್ರೀಕರಣ ಬೆಂಗಳೂರಿನಲ್ಲಿ...! 


ರಿಷಬ್ ಶೆಟ್ಟಿ ಮೊದಲ ಮಗನನ್ನು ಎತ್ತಿಕೊಂಡು ಮುದ್ದು ಮಾಡಿದ್ದಾರೆ. ರಾದ್ಯಾಳ ಕೆನ್ನೆ ಗಿಂಡಿ ಮುದ್ದು ಮಾಡುತ್ತಿರುವ ದರ್ಶನ್ ಅವರ ಈ ವಿಡಿಯೊಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ. ಇನ್ನು ವಿಡಿಯೊದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಿಷಬ್ ಶೆಟ್ಟಿ ತುಂಬಾ ಆತ್ಮೀಯತೆಯಿಂದ ಮಾತನಾಡಿದ್ದನ್ನು ಕಂಡಿರುವ ದರ್ಶನ್ ಅಭಿಮಾನಿಗಳು ರಿಷಬ್ ಶೆಟ್ಟಿ ನಮ್ಮ ಬಾಸ್‌ಗೆ ಒಂದು ಸಿನಿಮಾ ನಿರ್ದೇಶಿಸಿದ್ರೆ ಎಷ್ಟು ಚೆನ್ನಾಗಿರುತ್ತೆ ಎಂದು ಕಾಮೆಂಟ್ ಮಾಡಿದ್ದಾರೆ. ರಾದ್ಯಾಳ ಆಗಮನವಾದ ಬಳಿಕ ರಿಷಬ್ ಶೆಟ್ಟಿ ಲಕ್ ಬದಲಾಗಿ ಹೋಯ್ತು ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದು, ಕಾಂತಾರ 2 ಚಿತ್ರ ಬೇಗನೆ ಬರಲಿ ಎಂದು ಕಾತರತೆ ವ್ಯಕ್ತಪಡಿಸಿದ್ದಾರೆ. ಸದ್ಯ ಕಾಂತಾರ ಎರಡನೇ ಭಾಗದ ಕಥೆ ಬರೆಯುವಲ್ಲಿ ನಿರತರಾಗಿರುವ ರಿಷಬ್ ಶೆಟ್ಟಿ ಇದಕ್ಕಾಗಿ ಬ್ಯಾಚುಲರ್ ಪಾರ್ಟಿ ಚಿತ್ರದಿಂದ ಹೊರಬಂದಿದ್ದಾರೆ.


ಕಾಂತಾರ ಚಿತ್ರದಲ್ಲಿ ಕಾಡುಬೆಟ್ಟು ಶಿವನ ಕಥೆಯನ್ನು ಹೇಳಿದ್ದ ರಿಷಬ್ ಶೆಟ್ಟಿ ಕಾಂತಾರ 2 ಚಿತ್ರದಲ್ಲಿ ಕಾಡುಬೆಟ್ಟು ಶಿವನ ಅಪ್ಪನ ಕಥೆಯನ್ನು ಹೇಳಲಿದ್ದಾರೆ. ಕಾಂತಾರ ಶತದಿನೋತ್ಸವ ಆಚರಣೆ ಕಾರ್ಯಕ್ರಮದಲ್ಲಿಯೂ ಸಹ ಇದರ ಕುರಿತು ಹೇಳಿಕೆ ನೀಡಿದ್ದ ರಿಷಬ್ ಶೆಟ್ಟಿ ಈಗ ನೀವು ನೋಡಿರುವುದು ಕಾಂತಾರ ಎರಡನೇ ಭಾಗ, ಮುಂದೆ ಒಂದನೇ ಭಾಗ ಬರಲಿದೆ ಎಂದು ಹೇಳಿಕೆ ನೀಡಿ ಕುತೂಹಲವನ್ನು ಹೆಚ್ಚಿಸಿದ್ದರು.


​ಇದನ್ನೂ ಓದಿ-ರಾಕಿ ಭಾಯ್‌ ʼನೀಚ್‌__ ಕುತ್ತೆʼ. ಎಂದ ತೆಲುಗು ಡೈರೆಕ್ಟರ್‌..! ನೊಂದಿಲ್ಲ, ಕ್ಷಮೆನೂ ಕೇಳಿಲ್ಲ


 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.