ಬೆಂಗಳೂರು: ಗಣೇಶನ ಹಬ್ಬ, ರಾಜ್ಯೋತ್ಸವ ಮುಂತಾದ ಸಂದರ್ಭಗಳಲ್ಲಿ ಎಲ್ಲಾ ಕಡೆ "ಆರ್ಕೇಸ್ಟ್ರಾ"ಗಳದ್ದೇ ಕಾರುಬಾರು. ಇಂತಹ "ಆರ್ಕೇಸ್ಟ್ರಾ" ಆರಂಭವಾಗಿದ್ದು ಮೈಸೂರಿನಲ್ಲೇ ಎನ್ನುತ್ತಾರೆ. ‘ಆರ್ಕೇಸ್ಟ್ರಾ’ದ ಕಥೆ ಆಧರಿಸಿರುವ "ಆರ್ಕೇಸ್ಟ್ರಾ ಮೈಸೂರು" ಸಿಬಿಮಾ ಜನವರಿ 12ರಂದು ತೆರೆಗೆ ಬರುತ್ತಿದೆ‌. ಇತ್ತೀಚೆಗೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ  ಕುತೂಹಲ ಹೆಚ್ಚಿಸಿದೆ.


COMMERCIAL BREAK
SCROLL TO CONTINUE READING

ಮೂಲತಃ ಮೈಸೂರಿನವರಾದ ಡಾಲಿ ಧನಂಜಯ್ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾ ಇದು. ಅದರಲ್ಲೂ ಡಾಲಿ ಅವರೇ ಈ ಚಿತ್ರದ ಎಲ್ಲಾ ಹಾಡುಗಳನ್ನು ಬರೆದಿರುವುದು ವಿಶೇಷ. ಟ್ರೈಲರ್ ಬಿಡುಗಡೆ ಮಾಡಿದ ಡಾಲಿ ಧನಂಜಯ್ ಈ ಚಿತ್ರದ ಕುರಿತು ಭಾವನಾತ್ಮಕವಾಗಿ ಮಾತನಾಡಿದರು. ‘ನಮ್ಮ ಮೈಸೂರಿನ ಅನೇಕ ಸ್ನೇಹಿತರು ಸೇರಿ ಮಾಡಿರುವ ಚಿತ್ರವಿದು. ಸುನೀಲ್ ಮೈಸೂರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪೂರ್ಣಚಂದ್ರ ನಾಯಕನಾಗಿ ನಟಿಸಿದ್ದಾರೆ‌. ನಾನು ಈ ಚಿತ್ರದ ಎಲ್ಲಾ ಹಾಡುಗಳನ್ನು ಬರೆದಿದ್ದೇನೆ.‌ ನಾನು ಡಾಲಿ ಆಗುವುದಕ್ಕೆ ಮುಂಚಿತವಾಗಿ ಈ ಚಿತ್ರದ ಹಾಡುಗಳನ್ನು ಬರೆದಿದ್ದೇನೆ’ ಎಂದು ಹೇಳಿದರು.‌


ನಿರ್ದೇಶಕ ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ


‘2015 ರಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ ಎಂಬ ಹಾಡನ್ನು ನಾವೆಲ್ಲಾ ಗೆಳೆಯರು ಸೇರಿ ಮಾಡಿದ್ದೆವು. ಮೈಸೂರಿನಲ್ಲೇ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಈ ಹಾಡಿಗೆ ಸಿಕ್ಕ ಜನ ಬೆಂಬಲ ನಾವು ಚಿತ್ರ ನಿರ್ಮಾಣ ಮಾಡಲು ಸ್ಫೂರ್ತಿಯಾಯಿತು. ಆನಂತರ ನಮ್ಮ "ಆರ್ಕೇಸ್ಟ್ರಾ ಮೈಸೂರು" ಚಿತ್ರ ಆರಂಭವಾಯಿತು. "ಆರ್ಕೇಸ್ಟ್ರಾ"ದಲ್ಲಿ ಹಾಡಬೇಕೆಂದು ಆಸೆ ಹೊತ್ತ ಹುಡುಗನ ಕನಸು ನನಸಾಗುವುದಾ? ಎಂಬುದೇ ಚಿತ್ರದ ಮೂಲ ಕಥೆ. ಬೆಂಗಳೂರಿನ ಹಾಗೆ ಮೈಸೂರಿನಲ್ಲೂ ಒಂದು ಗಾಂಧಿನಗರವಿದೆ. ಅಲ್ಲಿ ಸಾಕಷ್ಟು ಆರ್ಕೇಸ್ಟ್ರಾ ಕಂಪನಿಗಳೂ ಇವೆ. ಈ ರೀತಿ "ಆರ್ಕೇಸ್ಟ್ರಾ" ದೊಂದಿಗೆ ನಮ್ಮ ಚಿತ್ರದ ಕಥೆ ಸಾಗುತ್ತದೆ’ ಎಂದು ನಿರ್ದೇಶಕ ಸುನೀಲ್ ಮೈಸೂರು ತಿಳಿಸಿದರು.


Mr Bachelor: ನಾಳೆ ‘MR ಬ್ಯಾಚುಲರ್’ ಆಗಮನ…


ಚಿತ್ರದ ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಮತ್ತೊಬ್ಬ ನಿರ್ಮಾಪಕ ಅಶ್ವಿನ್ ವಿಜಯ್ ಕುಮಾರ್, ನಾಯಕಿ ರಾಜಲಕ್ಷ್ಮೀ, ಸಹ ನಿರ್ದೇಶಕ ಮಹದೇವ್, ಛಾಯಾಗ್ರಾಹಕ ಹಾಗೂ ಸಂಕಲನಕಾರ ಜೋಸೆಫ್ ಕೆ ರಾಜ, ನಟ ನಾಗಭೂಷಣ ಹಾಗೂ ಕೆ.ಆರ್.ಜಿ ಸ್ಟುಡಿಯೋಸ್ ನ ಯೋಗಿ ಚಿತ್ರದ ಕುರಿತು ಇದೇ ವೇಳೆ ಮಾತನಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.