ದರ್ಶನ್ ಅಸಭ್ಯವಾಗಿ ಮಧ್ಯದ ಬೆರಳು ತೋರಿಸಿಲ್ಲ..! ಅದು ಒಂದು ವಿಶೇಷವಾದ ʼಯೋಗ ಮುದ್ರೆʼ.. ವಿಡಿಯೋ ವೈರಲ್‌

Darshan viral video : ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ ಮಧ್ಯದ ಬೆರಳು ತೋರಿಸಿದ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಕೆಲವರು ಅಸಭ್ಯ ವರ್ತನೆ ಎನ್ನುತ್ತಿದ್ದರೆ, ಇನ್ನೂ ಕೆಲವರು ಇಲ್ಲ ಅವರು ಹಾಗೆ ಮಾಡಲು ಸಾಧ್ಯವಿಲ್ಲ ಅಂತ ಸಮರ್ಥನೆ ಮಾಡುತ್ತಿದ್ದಾರೆ.. ಇದೇ ಬೆನ್ನಲ್ಲೆ ದಾಸ ಮಾಡಿದ್ದು ಮುದ್ರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ.

Written by - Krishna N K | Last Updated : Sep 13, 2024, 06:15 PM IST
    • ಆರೋಪಿ ದರ್ಶನ್‌ ಮಧ್ಯದ ಬೆರಳು ತೋರಿಸಿದ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌
    • ಕೆಲವರು ನಟ ದರ್ಶನ್‌ ಹಾಗೆ ಮಾಡಲು ಸಾಧ್ಯವಿಲ್ಲ ಅಂತ ಸಮರ್ಥನೆ ಮಾಡುತ್ತಿದ್ದಾರೆ..
    • ಇದೇ ಬೆನ್ನಲ್ಲೆ ದಾಸ ಮಾಡಿದ್ದು ಮುದ್ರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ.
ದರ್ಶನ್ ಅಸಭ್ಯವಾಗಿ ಮಧ್ಯದ ಬೆರಳು ತೋರಿಸಿಲ್ಲ..! ಅದು ಒಂದು ವಿಶೇಷವಾದ ʼಯೋಗ ಮುದ್ರೆʼ.. ವಿಡಿಯೋ ವೈರಲ್‌ title=

Darshan shows middle finger : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಲ್ಲಿ ಕಂಬಿ ಎಣಿಸುತ್ತಿದ್ದಾನೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಆರೋಪಿ ದಾಸ ಇತ್ತೀಚಿಗೆ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮರಾಗಳನ್ನು ನೋಡಿ ಅಸಭ್ಯ ವರ್ತನೆಯನ್ನು ದರ್ಶನ್ ತೋರಿಸಿದ್ದ. ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದ, ಈ ಕುರಿತ ವಿಡಿಯೋ ವೈರಲ್‌ ಆಗಿದೆ.

ಜೈಲಿನಲ್ಲಿರುವ ದರ್ಶನ್ ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಏನೆಲ್ಲಾ ವರದಿಗಳು ಪ್ರಸಾರ ಆಗುತ್ತಿವೆ ಎಂಬುದನ್ನು ತಿಳಿದುಕೊಂಡಿದ್ದಾನೆ ಎನ್ನಲಾಗಿದೆ. ತನ್ನ ವಿರುದ್ಧ ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಕಂಡು ಪುನಃ ಕೆರಳಿ ಈ ರೀತಿ ವರ್ತಿಸಿದ್ದಾನೆ ಎಂದು ಕೆಲ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಬಾತ್‌ರೂಮ್‌ನಲ್ಲಿ ಒದ್ದೆ ಮೈಯಲ್ಲಿ ಫೋಟೋ ಕ್ಲಿಕ್ಕಿಸಿದ ಚೆಲುವೆ..! ಫೊಟೋಸ್‌ ವೈರಲ್‌

ಇನ್ನು ಗುರುವಾರ ಬೆಳಗ್ಗೆ ಆತನ ಪತ್ನಿ ವಿಜಯಲಕ್ಷ್ಮಿ ಬಂದಾಗ ಫುಲ್ ಸಾಫ್ಟ್ ಆಗಿ ನಡೆದುಕೊಂಡಿದ್ದ ಕರಿಯ, ಮಧ್ಯಾಹ್ನದ ವೇಲೆ ವಕೀಲರು ಭೇಟಿಯಾಗಲು ಜೈಲಿನಿಂದ ಸಂದರ್ಶಕರ ಕೊಠಡಿಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಮಿಡಲ್ ಫಿಂಗರ್ ತೋರಿಸಿ ಅಸಭ್ಯ ವರ್ತನೆ ತೋರಿದ್ದಾನೆ. 

ವಿಡಿಯೋಗಾಗಿ ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ : ವೈರಲ್‌ ವಿಡಿಯೋ

ಈ ಕುರಿತು ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಕೆಲವು ನಟ ನಟಿಯರು ಇದನ್ನ ಸಮರ್ಥನೆ ಮಾಡಿಕೊಂಡಿದ್ದಾರೆ. ಅಲ್ಲದೆ, ಡೆವಿಲ್‌ ಫ್ಯಾನ್ಸ್‌ ಸೂಪರ್‌ ಗುರು ಅಂತ ತಮ್ಮ ನಟ ಮಾಡಿದ್ದೇಲ್ಲ ಗ್ರೇಟ್‌ ಎನ್ನುತ್ತಿದ್ದಾರೆ.. ಇದೇ ವೇಳೆ ವಿಡಿಯೋ ಕೆಂಚನ ಅಭಿಮಾನಿಗಳು ವಿಡಿಯೋ ಒಂದನ್ನು ಶೇರ್‌ ಮಾಡಿ ಮೀಡಿಯಾ ವಿರುದ್ಧ ಹರಿಹಾಯ್ದಿದ್ದಾರೆ..

ಇದನ್ನೂ ಓದಿ:ಜೈಲಲ್ಲಿ ಕಂಬಿ ಎಣಿಸುತ್ತಿದ್ದರೂ ಕರಗದ ಕೊಬ್ಬು: ಮಾಧ್ಯಮಗಳಿಗೆ ಕೈ ಮಧ್ಯದ ಬೆರಳು ತೋರಿಸಿದ ಡೆವಿಲ್

ವೈರಲ್‌ ವಿಡಿಯೋದಲ್ಲಿ ಖಾಸಗಿ ವಾಹಿನಿಯಲ್ಲಿ ನಡೆದ ಜೋಷಿಯೊಬ್ಬರ ಸಂದರ್ಶನ ವಿದೆ. ಅದರಲ್ಲಿ ಅವರು ವಿಘ್ನಹರ ಮುದ್ರೆಯ ಬಗ್ಗೆ ತಿಳಿಸಿದ್ದಾರೆ. ಮಧ್ಯದ ಬೆರಳು ಶನಿ ದೇವನನ್ನು ಸೂಚಿಸುತ್ತಿದ್ದು, ಉಳಿದ ಬೆರಳುಗಳನ್ನು ಮಡಿಚಿ ಮಧ್ಯದ ಬೆರಳತ್ತು ಎತ್ತಿ ಶನಿ ಜಪ ಮಾಡಿದರೆ ಕಷ್ಟಗಳು ದೂರವಾಗುತ್ತವೆ ಎಂದು ತಿಳಿಸಿದ್ದಾರೆ.. ಇದೀಗ ಈ ವಿಡಿಯೋ ಇಟ್ಕೊಂಡು ದರ್ಶನ್‌ ಫ್ಯಾನ್ಸ್‌ ಮೀಡಿಯಾ ವಿರುದ್ಧ ವ್ಯಂಗ್ಯವಾಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News