Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?

Darshan Statement murder case : ದರ್ಶನ್‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ. ಕೊಲೆಯಾದಾಗ ಆ ಜಾಗದಲ್ಲಿ ಇರಲಿಲ್ಲ ಎಂದ ದರ್ಶನ್ ಪೊಲೀಸರ ಬಳಿ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Written by - Chetana Devarmani | Last Updated : Jun 12, 2024, 07:35 AM IST
  • ರೇಣುಕಾಸ್ವಾಮಿ ಕೊಲೆ ಪ್ರಕರಣ
  • ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?
  • ತಮ್ಮ ಹೇಳಿಕೆಯನ್ನೇ ಬದಲಿಸಿದ ದರ್ಶನ್‌ !
Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !? title=

ಬೆಂಗಳೂರು : ಪವಿತ್ರಾ ಗೌಡಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ನ್ಯಾಯಾಲಯ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ಇದಕ್ಕೂ ಮುನ್ನ ತಮಗೂ ಈ ಕೊಲೆಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ನಟ ದರ್ಶನ್‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ. ಕೊಲೆಯಾದಾಗ ಆ ಜಾಗದಲ್ಲಿ ಇರಲಿಲ್ಲ ಎಂದ ದರ್ಶನ್ ಪೊಲೀಸರ ಬಳಿ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ನಾನು ಆ ಶೆಡ್ ಗೆ ಹೋಗಿದ್ದೆ ಅದು ನಿಜ. ರೇಣುಕಾಸ್ವಾಮಿಗೆ ಇನ್ಮುಂದೆ ಮಾಡಬೇಡ ಎಂದು ವಾರ್ನಿಂಗ್‌ ಮಾಡಿದ್ದೆ ಅಷ್ಟೇ. ಆತನನ್ನು ಕೊಲೆ ಮಾಡುವ ಉದ್ದೇಶ ನನಗಿಲ್ಲ ಎಂದು ದರ್ಶನ್‌ ಹೇಳಿದ್ದಾರಂತೆ ಎನ್ನಲಾಗಿದೆ. 

ವಾರ್ನಿಂಗ್‌ ಮಾಡಿ ಊಟ ಕೊಟ್ಟು ಕಳಿಸಿ ಎಂದು ಹೇಳಿದೆ. ಇಷ್ಟು ಹೇಳಿ ನಾನು ಅಲ್ಲಿಂದ ಹೊರಟು ಹೋದೆ. ನಂತರ ಅಲ್ಲಿ ಏನೆಲ್ಲ ಆಯಿತು ಅಂತ ಗೊತ್ತಿಲ್ಲ ಎಂದು ಪೊಲೀಸರ ಮುಂದೆ ಹೇಳಿಕೆ ನಟ ದರ್ಶನ್‌ ಹೇಳಿಕೆ ನೀಡಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ನಟ ದರ್ಶನ್ ಈ ರೀತಿ ಹೇಳಿಕೆ ನೀಡಿದ್ದಾರಂತೆ ಎಂದು ಹೇಳಲಾಗಿದೆ.  

ಇದನ್ನೂ ಓದಿ: Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !? 

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರದಂತೆ ಒಟ್ಟು 13 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದರ್ಶನ್​ ಮತ್ತು ಉಳಿದ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. 

ಕೊಲೆ ಪ್ರಕರಣದಲ್ಲಿ ಬಂಧಿತರು ಯಾರೆಲ್ಲ?

ನಟ ದರ್ಶನ್​, ಪವಿತ್ರಾ ಗೌಡ, ವಿ.ವಿನಯ್, ಕಾರ್ತಿಕ್​, ನಿಖಿಲ್ ನಾಯಕ್​, ಆರ್.ನಾಗರಾಜು, ಎಂ.ಲಕ್ಷ್ಮಣ್​, ದೀಪಕ್‌ ಕುಮಾರ್, ಕೇಶವಮೂರ್ತಿ, ಎಸ್​.ಪ್ರದೋಶ್​, ಕೆ.ಪವನ್, ನಂದೀಶ್​, ರಾಘವೇಂದ್ರ ಅಲಿಯಾಸ್​ ರಾಘು ಎಂಬುವವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  

ಕೊಲೆ ನಡೆದಿದ್ದು ಯಾಕೆ? 

ಕೊಲೆಯಾದ ರೇಣುಕಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಮೇಸೆಜ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ (33) ಅವರಿಗೆ ಈ ಬಗ್ಗೆ ವಾರ್ನ್‌ ಮಾಡಲು ಕರೆಸಿದ್ದರು ಎನ್ನಲಾಗಿದೆ.  

ರೇಣುಕಾಸ್ವಾಮಿ ಕೂಡ ದರ್ಶನ್ ಅವರ ಅಭಿಮಾನಿ. ಪವಿತ್ರಾ ಗೌಡ ಕಾರಣಕ್ಕೆ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಹಾಳಾಗುತ್ತಿದೆ ಎಂದು ಸಿಟ್ಟಾಗಿದ್ದರಂತೆ. ಇದೇ ಕೋಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದರಂತೆ. ಇದೇ ಕಾರಣಕ್ಕೆ ರೇಣುಕಾಸ್ವಾಮಿಗೆ ಬುದ್ಧಿಕಲಿಸಲು ಅಭಿಮಾನಿ ಬಳಗದ ನೆರವಿನಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿದ್ದರು ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ: ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News