ಅಬುದಾಬಿಯಲ್ಲಿ "ಕರಟಕ ದಮನಕ" ಚಿತ್ರದ "ಡೀಗ ಡಿಗರಿ" ಹಾಡು ಬಿಡುಗಡೆ

Written by - YASHODHA POOJARI | Edited by - Manjunath N | Last Updated : Feb 14, 2024, 04:34 PM IST
  • ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ
  • ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ
  • ಇನ್ನು ಪ್ರಭುದೇವ ಅವರ ಜೊತೆ ಮೊದಲ ಬಾರಿ ನಟಿಸಿರುವುದು ಖುಷಿಯಾಗಿದೆ ಎಂದು ಶಿವರಾಜಕುಮಾರ್ ತಿಳಿಸಿದರು
ಅಬುದಾಬಿಯಲ್ಲಿ "ಕರಟಕ ದಮನಕ" ಚಿತ್ರದ "ಡೀಗ ಡಿಗರಿ" ಹಾಡು ಬಿಡುಗಡೆ title=

ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ "ಕರಟಕ ದಮನಕ" ಚಿತ್ರದ ಎರಡನೇ ಗೀತೆ "ಡೀಗ ಡಿಗರಿ" ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಶಿವರಾಜಕುಮಾರ್, ಪ್ರಭುದೇವ, ಯೋಗರಾಜ್ ಭಟ್, ರಾಕ್ ಲೈನ್ ವೆಂಕಟೇಶ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಸಹಸ್ರಾರು ಕನ್ನಡಿಗರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಹಾಡು ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಕೋರ್ಟ್ ಕೂಡ ಹೇಳುತ್ತಿದೆ..!

 "ಕರಟಕ ದಮನಕ" ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇಬ್ಬರನ್ನು ಹೆಚ್ಚು ಸಲ ನೋಡಿದಾಗ ಅವರನ್ನು "ಕರಟಕ ದಮನಕ" ಎನ್ನುತ್ತಾರೆ. ಅಬುದಾಬಿಯಲ್ಲಿ ನಮ್ಮ ಚಿತ್ರಕ್ಕಾಗಿ ನಾನೇ ಬರೆದಿರುವ ಎರಡನೇ ಹಾಡು   "ಡೀಗ ಡಿಗರಿ" ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ಇದು  ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ ಎಂದರು ನಿರ್ದೇಶಕ ಯೋಗರಾಜ್ ಭಟ್. 

ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?

ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಇನ್ನು  ಪ್ರಭುದೇವ ಅವರ ಜೊತೆ ಮೊದಲ ಬಾರಿ ನಟಿಸಿರುವುದು ಖುಷಿಯಾಗಿದೆ ಎಂದು ಶಿವರಾಜಕುಮಾರ್ ತಿಳಿಸಿದರು.

ಚಿತ್ರ ಹಾಗೂ ಹಾಡುಗಳು ಚೆನ್ನಾಗಿದೆ. ಶಿವರಾಜಕುಮಾರ್ ಅವರೊಟ್ಟಿಗೆ ನಟಿಸಿರುವುದು ತುಂಬಾ ಸಂತೋಷ ತಂದಿದೆ. ರಾಕ್ ಲೈನ್ ವೆಂಕಟೇಶ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಯೋಗರಾಜ್ ಭಟ್ ಅವರ ನಿರ್ದೇಶನ ಕೂಡ ಉತ್ತಮವಾಗಿದೆ ಎಂದು ಪ್ರಭುದೇವ ತಿಳಿಸಿದರು. ಚಿತ್ರತಂಡದ ಸಹಕಾರದಿಂದ "ಕರಟಕ ದಮನಕ" ಚೆನ್ನಾಗಿ ಬಂದಿದೆ. ಶಿವರಾತ್ರಿ ಹಬ್ಬಕ್ಕೆ ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್. ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ಡೀಗ ಡಿಗರಿ" ಹಾಡಿಗೆ ಶಿವರಾಜಕುಮಾರ್ ಹಾಗೂ ಪ್ರಭುದೇವ ಅವರು ಒಟ್ಟಿಗೆ ಹೆಜ್ಜೆ ಹಾಕಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News