ಪಸಂದ್‌ ಆಗಿದೆ ʼದಿಲ್ ಪಸಂದ್ʼ ಟೀಸರ್ : ನ.11ಕ್ಕೆ ತೆರೆಗೆ ಬರಲಿದೆ ಕೃಷ್ಣನಾಟ..!

ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ ʼದಿಲ್ ಪಸಂದ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. 

Written by - YASHODHA POOJARI | Edited by - Krishna N K | Last Updated : Oct 5, 2022, 01:08 PM IST
  • ಡಾರ್ಲಿಂಗ್ ಕೃಷ್ಣ ನಟನೆಯ ʼದಿಲ್ ಪಸಂದ್ʼ ಚಿತ್ರದ ಟೀಸರ್ ಬಿಡುಗಡೆ
  • ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರಲಿದೆ
  • ಲವ್ ಸ್ಟೋರಿಯಳ್ಳ ಚಿತ್ರದಲ್ಲಿ ಕೃಷ್ಣನಿಗೆ ಜೊತೆಯಾಗಿ ನಿಶ್ವಿಕಾ, ಮೇಘಾ ನಟನೆ
ಪಸಂದ್‌ ಆಗಿದೆ ʼದಿಲ್ ಪಸಂದ್ʼ ಟೀಸರ್ : ನ.11ಕ್ಕೆ ತೆರೆಗೆ ಬರಲಿದೆ ಕೃಷ್ಣನಾಟ..! title=

ಬೆಂಗಳೂರು : ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ ʼದಿಲ್ ಪಸಂದ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. 

ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ ʼದಿಲ್ ಪಸಂದ್ʼ ನಷ್ಟೇ ಸಿಹಿಯಾಗಿದೆ . ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ ಕ್ರಾಂತಿ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶಿವತೇಜಸ್.

ಇ‌ದನ್ನೂ ಓದಿ: viral Video: ರಸ್ತೆಯಲ್ಲಿ ಕಾರು ತಡೆದು ಬೋನೆಟ್ ಮೇಲೇರಿದ ಗಜರಾಜ.!

ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಎಮೋಷನ್ ಹುಡುಗಿ ನಾನು. ಲವ್ ಟ್ರ್ಯಾಕ್ ಇರುವ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಕಂಪ್ಲೀಟ್ ಲವ್ ಸ್ಟೋರಿಯಳ್ಳ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ನಾನು ನಟಿಸಿರುವ ಪೂರ್ಣ ಪ್ರೇಮಕಥೆಯುಳ್ಳ ಮೊದಲ ಚಿತ್ರ  ʼದಿಲ್ ಪಸಂದ್ʼ ಎಂದು ನಿಶ್ವಿಕಾ ನಾಯ್ಡು ತಿಳಿಸಿದರು. ಈ ಚಿತ್ರದಲ್ಲಿ ಮುಗ್ದ ಹುಡುಗಿಯ ಪಾತ್ರ ನನ್ನದು. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ ʼದಿಲ್ ಪಸಂದ್ʼ. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎಂದರು ನಟಿ ಮೇಘಾ ಶೆಟ್ಟಿ.

ನಾನು ಕಥೆ ಕೇಳಬೇಕಾದರೆ ಸಾಕಷ್ಟು ಖುಷಿ ಪಟ್ಟಿದೆ. ಸಾಕಷ್ಟು ಎಂಜಾಯ್ ಮಾಡಿಕೊಂಡು ಡಬ್ಬಿಂಗ್ ಮಾಡಿದ್ದೇನೆ. ಉತ್ತಮ ಮನೋರಂಜನೆಯಿರುವ ʼದಿಲ್ ಪಸಂದ್ʼ ಎಲ್ಲರಿಗೂ ಪ್ರಿಯವಾಗಲಿದೆ. ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.

ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕೆಲವರು ಕಥೆ ಹೇಳುವುದೆ ಬೇರೆ. ಚಿತ್ರ ಮಾಡುವುದೇ ಬೇರೆ. ನಾನು ಇತ್ತೀಚೆಗೆ ಚಿತ್ರ ನೋಡಿದೆ. ಶಿವತೇಜಸ್ ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ. ನಮ್ಮ ʼದಿಲ್ ಪಸಂದ್ʼ ಚಿತ್ರ ಚೆನ್ನಾಗಿದೆ. ನವೆಂಬರ್ 11 ತೆರೆಗೆ ಬರುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ಸುಮಂತ್ ಕ್ರಾಂತಿ. ಕಾರ್ಯಕಾರಿ ನಿರ್ಮಾಪಕ ರಂಗಸ್ವಾಮಿ ಹಾಗೂ ಸಹ ನಿರ್ದೇಶಕ, ಮಾರ್ಕೆಟಿಂಗ್ ಹೆಡ್ ಹರೀಶ್ ದೇವಿತ್ ʼದಿಲ್ ಪಸಂದ್ʼ ಕುರಿತು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News