)
Anurag Kashyap controversy post about brahmins: ಬಾಲಿವುಡ್ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬ್ರಾಹ್ಮಣರ ಬಗ್ಗೆ ಅನುರಾಗ್ ಕಶ್ಯಪ್ ಮಾತನಾಡಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಇತ್ತೀಚೆಗಿನ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಸಿಬಿಎಫ್ಸಿ ಮತ್ತು ಬ್ರಾಹ್ಮಣ ಸಮುದಾಯದ ಮೇಲೆ ಅನುರಾಗ್ ಕಶ್ಯಪ್ ವಿವಾದಾತ್ಮಕ ಪದಗಳನ್ನು ಬಳಸಿದ್ದರು.
ಜೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಜೀವನ ಆಧಾರಿತ ‘ಫುಲೆ’ ಸಿನಿಮಾಗೆ ಬ್ರಾಹ್ಮಣ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಲು ವಿಳಂಬ ಆಗುತ್ತಿದೆ. ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ತಿಳಿಸಿದೆ. ಇದೇ ಕಾರಣಕ್ಕೆ ಅನುರಾಗ್ ಕಶ್ಯಪ್ ಸಿಟ್ಟಾಗಿದ್ದು ಸಿಬಿಎಫ್ಸಿ ವಿರುದ್ಧ ಪೋಸ್ಟ್ ಒಂದನ್ನು ಮಾಡಿದ್ದರು.
"ಧಡಕ್ 2, ತೀಸ್, ಪಂಜಾಬ್ 95 ಆಯ್ತು. ಈಗ ಫುಲೆ ಸಿನಿಮಾ... ಒಂದರ ಹಿಂದೊಂದು ಸಿನಿಮಾಗಳಿಗೆ ತಡೆ ಒಡ್ಡಲಾಗುತ್ತಿದೆ. ಜಾತೀವಾದಿ, ಧರ್ಮವಾದಿ, ಜನಾಂಗೀಯವಾದಿ ಸರ್ಕಾರ ಇದಾಗಿದೆ. ತನ್ನ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲು ಈ ಸರ್ಕಾರ ಹೆದರುತ್ತಿದೆ. ಅವರ ಸಮಸ್ಯೆ ಏನು ಎಂದು ಬಹಿರಂಗವಾಗಿ ಹೇಳಲು ಸಾಧ್ಯವಾಗುತ್ತಿಲ್ಲ" ಎಂದು ಅನುರಾಗ್ ಕಶ್ಯಪ್ ಪೋಸ್ಟ್ ಮಾಡಿದ್ದರು.
ಪ್ರಧಾನಿ ಮೋದಿ ಅವರು ಹೇಳಿರುವಂತೆ ಭಾರತದಲ್ಲಿ ಜಾತಿ ವ್ಯವಸ್ಥೆ ಇಲ್ಲ ಎಂದಾದಮೇಲೆ ನಿಮಗೇಕೆ ಉರಿಯುತ್ತಿದೆ ಎಂದು ‘ಫುಲೆ’ ಸಿನಿಮಾ ವಿರೋಧಿಸಿದ್ದ ಬ್ರಾಹ್ಮಣ ಸಮುದಾಯವನ್ನು ಡೈರೆಕ್ಟರ್ ಅನುರಾಗ್ ಕಶ್ಯಪ್ ಪ್ರಶ್ನೆ ಮಾಡಿದ್ದರು.
ಅಲ್ಲದೆ ‘ಫುಲೆ’ ಸಿನಿಮಾ ಬಿಡುಗಡೆಯೇ ಆಗಿಲ್ಲ. ಅದಕ್ಕೂ ಮುಂಚೆಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಅವರೆಲ್ಲ ಸಿನಿಮಾ ನೋಡಿದ್ದು ಹೇಗೆ? ಸಿಬಿಎಫ್ಸಿ ಯವರೇ ಸಿನಿಮಾ ಲೀಕ್ ಮಾಡಿದ್ದಾರಾ ಎಂದು ಅನುರಾಗ್ ಪ್ರಶ್ನೆ ಮಾಡಿದ್ದರು.
ಅನುರಾಗ್ ಕಶ್ಯಪ್ ಅವರ ಈ ಪೋಸ್ಟ್ಗೆ ಕಾಮೆಂಟ್ ಒಂದು ಬಂದಿತ್ತು. ಇದು ಬ್ರಾಹ್ಮಣರ ಪರವಾಗಿ ಮಾಡಿದ ಕಾಮೆಂಟ್ ಆಗಿತ್ತು. ಇದಕ್ಕೆ ರಿಯಾಕ್ಟ್ ಮಾಡಿದ್ದ ಅನುರಾಗ್ ಕಶ್ಯಪ್, ‘ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೀನಿ’ ಎಂದು ಕಾಮೆಂಟ್ ನೀಡಿದ್ದರು. ಈ ಒಂದು ಪದದ ಬಳಕೆ ಅನುರಾಗ್ ಕಶ್ಯಪ್ ವಿರುದ್ಧ ಆಕ್ರೋಶ ಭುಗಿಲೇಳುವಂತೆ ಮಾಡಿತು. ಅನುರಾಗ್ ಕಶ್ಯಪ್ ಪೋಸ್ಟ್ ಭಾರಿ ವಿವಾದ ಸೃಷ್ಟಿಸಿತ್ತು.
ಇದೀಗ ವಿವಾದದ ಬೆನ್ನಲ್ಲೇ ಅನುರಾಗ್ ಕಶ್ಯಪ್ ಮತ್ತೊಂದು ಪೋಸ್ಟ್ ಮಾಡಿ ಕ್ಷಮಾಪಣೆ ಕೇಳಿದ್ದಾರೆ. ಆದರೆ ಈ ಪೋಸ್ಟ್ ಮತ್ತೊಂದು ಹೊಸ ವಿವಾದಕ್ಕೆ ನಾಂದಿ ಹಾಡುವಂತಿದೆ.
ತಮ್ಮ ಹೇಳಿಕೆಯಿಂದ ಉಂಟಾದ ವಿವಾದದ ನಂತರ, ನಿರ್ದೇಶಕ ಅನುರಾಗ್ ಕಶ್ಯಪ್ ನಿನ್ನೆ ರಾತ್ರಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ಕ್ಷಮೆಯಾಚಿಸಿದ್ದಾರೆ. ನೀವು ನಿಂದಿಸಲು ಬಯಸಿದರೆ, ನನ್ನನ್ನು ಮಾತ್ರ ನಿಂದಿಸಿ, ಕುಟುಂಬವನ್ನಲ್ಲ ಎಂದು ಅವರು ಹೇಳಿದ್ದಾರೆ.
"ಇದು ನನ್ನ ಕ್ಷಮಾಪಣೆ... ಇದನ್ನು ಕೇಳುತ್ತಿರುವುದು ನಾನು ಹೇಳಿದ ಮಾತುಗಳಿಗೆ ಅಲ್ಲ. ನನ್ನ ಪೋಸ್ಟ್ನಲ್ಲಿರುವ ಒಂದು ಸಾಲನ್ನು ಮಾತ್ರ ಎತ್ತಿಕೊಂಡು ಅದನ್ನು ದ್ವೇಷವಾಗಿ ಬಳಸಿಕೊಳ್ಳುತ್ತಿರುವ ಕಾರಣಕ್ಕೆ. ಭಾರಿ ಸಂಸ್ಕಾರವಂತರು ಎನಿಸಿಕೊಂಡ ಸಮುದಾಯದವರು ನನ್ನ ಹೆಂಡತಿ, ಮಗಳು, ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಅತ್ಯಾಚಾರ, ಕೊಲೆಯ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಯಾವ ಹೇಳಿಕೆಯೂ ಈ ರೀತಿಯ ಬೆದರಿಕೆಗಳಿಗೆ ಅರ್ಹವಾಗಿಲ್ಲ. ಹೇಳಿರುವ ಮಾತುಗಳನ್ನು ವಾಪಸ್ ಪಡೆಯಲು ಸಾಧ್ಯವೂ ಇಲ್ಲ. ಅದನ್ನು ನಾನು ವಾಫಸ್ ಪಡೆಯುವುದೂ ಇಲ್ಲ" ಅನುರಾಗ್ ಕಶ್ಯಪ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.
"‘ನಾನು ಆಡಿದ ಮಾತಿಗೆ ನನ್ನನ್ನು ಬೇಕಿದ್ರೆ ಬೈಯ್ಯಿರಿ. ಕುಟುಂಬದವರನ್ನು ಏಕೆ ಇದರ ಮಧ್ಯೆ ಎಳೆದು ತರುತ್ತೀರಿ. ಬ್ರಾಹ್ಮಣರೇ, ಪಾಪ ಮಹಿಳೆಯರನ್ನು ಬಿಟ್ಟುಬಿಡಿ. ಇಷ್ಟು ಸಂಸ್ಕಾರ ಶಾಸ್ತ್ರಗಳಲ್ಲಿ ಕೂಡ ಇದೆ ಅಲ್ವ. ಕೇವಲ ಮನುವಾದದಲ್ಲಿ ಇಲ್ಲ ಅಷ್ಟೆ. ನೀವು ಎಂಥ ಬ್ರಾಹ್ಮಣರು ನೀವೇ ನಿರ್ಧರಿಸಿಕೊಳ್ಳಿ. ಉಳಿದಂತೆ ನನ್ನ ಕಡೆಯಿಂದ ಕ್ಷಮೆ ಇರಲಿ" ಎಂದು ಅನುರಾಗ್ ಕಶ್ಯಪ್ ಪೋಸ್ಟ್ ಮಾಡಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.