ʻಕರಾವಳಿʼಯಿಂದ ದರ್ಶನ್‌ ಕೈ ಬಿಟ್ಟ ವಿಚಾರಕ್ಕೆ ಸ್ಪಷ್ಟನೆ ಕೊಟ್ಟ ಚಿತ್ರತಂಡ!

Karavali Kannada Movie: ಪ್ರಜ್ವಲ್ ದೇವರಾಜ್ ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನಿಮಾ 'ಕರಾವಳಿ' ಚಿತ್ರದ ಬಗ್ಗೆ ಸುದ್ದಿಯೊಂದು ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. 

Written by - Chetana Devarmani | Last Updated : Jul 7, 2024, 01:44 PM IST
  • ಪ್ರಜ್ವಲ್ ದೇವರಾಜ್ ಸಿನಿಮಾ ಕರಾವಳಿ
  • ಪ್ರಜ್ವಲ್ ಸಿನಿಮಾದಲ್ಲಿ ದರ್ಶನ್?
  • ಸ್ಪಷ್ಟನೆ ಕೊಟ್ಟ ಕರಾವಳಿ ಚಿತ್ರತಂಡ
ʻಕರಾವಳಿʼಯಿಂದ ದರ್ಶನ್‌ ಕೈ ಬಿಟ್ಟ ವಿಚಾರಕ್ಕೆ ಸ್ಪಷ್ಟನೆ ಕೊಟ್ಟ ಚಿತ್ರತಂಡ!  title=

Prajwal Devaraj Movie Karavali: 'ಕರಾವಳಿ' ಸ್ಯಾಂಡಲ್ ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತದೆ. ಕರಾವಳಿ ಈಗಾಗಲೇ ಫಸ್ಟ್ ಲುಕ್ ಮತ್ತು ಪೋಸ್ಟರ್ ಮೂಲಕ ಬಾರಿ ಕುತೂಹಲ ಮೂಡಿಸಿದೆ.  

ಪ್ರಜ್ವಲ್ ದೇವರಾಜ್ ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನಿಮಾ 'ಕರಾವಳಿ' ಚಿತ್ರದ ಬಗ್ಗೆ ಸುದ್ದಿಯೊಂದು ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಈ ಸಿನಿಮಾದಲ್ಲಿ ದರ್ಶನ್‌ ನಟಿಸಬೇಕಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣ ಅವರನ್ನು ಸಿನಿಮಾದಿಂದ ಕೈ ಬಿಡಲಾಗಿದೆ ಎಂದು ಹೇಳಲಾಗಿದೆ ಎಂಬ ವದಂತಿಯೊಂದು ಹರಿದಾಡುತ್ತಿತ್ತು. 

ಇದನ್ನೂ ಓದಿ: ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್‌ ಗೂ ಗೊತ್ತಿತ್ತು ಈ ವಿಚಾರ!!

ಕರಾವಳಿ ಸಿನಿಮಾ ತಂಡ ಈ ಬಗ್ಗೆ ಇದೀಗ ಸ್ಪಷ್ಟನೆ ನೀಡಿದೆ. "ನಿನ್ನೆಯಿಂದ ಮಾಧ್ಯಮಗಳಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ನಟ ದರ್ಶನ ತೂಗುದೀಪ ಅವರನ್ನು ಪ್ರಜ್ವಲ್ ದೇವರಾಜ್ ಅಭಿನಯದ, ಗುರುದತ್ತ ಗಾಣಿಗ ನಿರ್ದೇಶನದ 'ಕರಾವಳಿ' ಚಿತ್ರದಿಂದ ಕೈಬಿಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸತ್ಯಕ್ಕೆ ದೂರವಾಗಿದೆ." ಎಂದು ನಿರ್ದೇಶಕ ಗುರುದತ್ ಗಾಣಿಗ ತಿಳಿಸಿದ್ದಾರೆ. 

Karavali

"ಕರಾವಳಿ ಸಿನಿಮಾದ 'ಮಹಾವೀರ' ಎನ್ನುವ ವಿಶೇಷ ಪಾತ್ರವನ್ನು ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ದರ್ಶನ ತೂಗುದೀಪ ಅವರಂತಹ ಜನಪ್ರಿಯ ನಟರು ಅಭಿನಯಿಸಬೇಕು ಎನ್ನುವುದು ಚಿತ್ರತಂಡದ ಖಾಸಗಿ ಚರ್ಚೆಗಾಗಿತ್ತು. ಆದರೆ ಈ ವಿಚಾರ ಕಿಡಿಗೇಡಿಗಳಿಂದ ಹೊರಬಿದ್ದು ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಪ್ರಸಾರಗೊಂಡಿರುವುದು ಚಿತ್ರತಂಡಕ್ಕೆ ಬೇಸರತಂದಿದೆ. 'ಮಹಾವೀರ' ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವ ವಿಚಾರವನ್ನು ಅಧಿಕೃತವಾಗಿ ಸಿನಿಮಾತಂಡವೇ ತಿಳಿಸಲಿದೆ ಎಂದು ನಿರ್ದೇಶಕ ಗುರುದತ್ ಗಾಣಿಗ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿಯ ಮೊಮ್ಮಗಳು.. 12 ಜನರ ಜೊತೆ ಡೇಟಿಂಗ್.. 52 ವರ್ಷವಾದರೂ ಒಂಟಿತನ ತಾಳದೇ ಗೆಳೆಯನ ಹುಡುಕಾಟದಲ್ಲಿರುವ ಸ್ಟಾರ್​ ನಟಿ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News