Rohit Shetty Injured : ಶೂಟಿಂಗ್‌ ವೇಳೆ ನಿರ್ದೇಶಕ ರೋಹಿತ್ ಶೆಟ್ಟಿಗೆ ತೀವ್ರ ಗಾಯ.. ಆಸ್ಪತ್ರೆಗೆ ದಾಖಲು..!

ಹೈದರಾಬಾದ್‌ನ ರಾಮೋಜಿ ಫಿಲ್ಮ್‌ ಸಿಟಿಯಲ್ಲಿ ಭಾರತೀಯ ಪೊಲೀಸ್ ಪಡೆಯ ವೆಬ್ ಸಿರೀಸ್ ಶೂಟಿಂಗ್ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಬಾಲಿವುಡ್‌ ಸ್ಟಾರ್‌ ನಿರ್ದೇಶಕ ರೋಹಿತ್ ಶೆಟ್ಟಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಎಲ್‌. ಬಿ. ನಗರದ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Written by - Krishna N K | Last Updated : Jan 7, 2023, 04:37 PM IST
  • ಶೂಟಿಂಗ್ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ತೀವ್ರವಾಗಿ ಗಾಯಗೊಂಡಿದ್ದಾರೆ.
  • ವೆಬ್‌ ಸರಣಿಯನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಿಸುತ್ತಿದ್ದರು.
  • ಸದ್ಯ ಅವರನ್ನು ಎಲ್‌. ಬಿ. ನಗರದ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
Rohit Shetty Injured : ಶೂಟಿಂಗ್‌ ವೇಳೆ ನಿರ್ದೇಶಕ ರೋಹಿತ್ ಶೆಟ್ಟಿಗೆ ತೀವ್ರ ಗಾಯ.. ಆಸ್ಪತ್ರೆಗೆ ದಾಖಲು..! title=

Rohit Shetty hospitalized : ಹೈದರಾಬಾದ್‌ನ ರಾಮೋಜಿ ಫಿಲ್ಮ್‌ ಸಿಟಿಯಲ್ಲಿ ಭಾರತೀಯ ಪೊಲೀಸ್ ಪಡೆಯ ವೆಬ್ ಸಿರೀಸ್ ಶೂಟಿಂಗ್ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಬಾಲಿವುಡ್‌ ಸ್ಟಾರ್‌ ನಿರ್ದೇಶಕ ರೋಹಿತ್ ಶೆಟ್ಟಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಎಲ್‌. ಬಿ. ನಗರದ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಾಲಿವುಡ್‌ನಲ್ಲಿ ಹಲವು ಸೂಪರ್ ಹಿಟ್ ಆಕ್ಷನ್‌ ಥ್ರಿಲ್ಲರ್‌ ಸಿನಿಮಾಗಳನ್ನು ರೋಹಿತ್ ಶೆಟ್ಟಿ ನಿರ್ದೇಶಿಸಿದ್ದರು. ಸದ್ಯ ಅವರು ಇಂಡಿಯನ್‌ ಪೊಲೀಸ್‌ ಫೋರ್ಸ್‌ ಎಂಬ ವೆಬ್‌ ಸರಣಿಯನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಿಸುತ್ತಿದ್ದಾರೆ. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಗಲಿರುವ ಈ ವೆಬ್ ಸಿರೀಸ್‌ನಲ್ಲಿ ಎಸ್. ಪಿ. ಕಬೀರ್ ಮಲಿಕ್ ಪಾತ್ರವನ್ನು ಸಿದ್ಧಾರ್ಥ್ ಮಲ್ಹೋತ್ರಾ ನಿರ್ವಹಿಸಿದ್ದಾರೆ. ಅಲ್ಲದೆ, ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಮತ್ತು ನೆಹರು ಅವರನ್ನೂ ಕೂಡಾ ವಿರೋಧಿಸಬೇಕು : ಚೇತನ್‌ ಅಹಿಂಸಾ

ಅಲ್ಲದೆ, ಈ ಸರಣಿಯಲ್ಲಿ ವಿವೇಕ್ ಒಬೆರಾಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೆಬ್ ಸರಣಿಯ ಚಿತ್ರೀಕರಣ ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಚೇಸ್ ದೃಶ್ಯದ ಶೂಟಿಂಗ್‌ ವೇಳೆ ರೋಹಿತ್‌ ಶೆಟ್ಟಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಡಲೇ ರೋಹಿತ್ ಶೆಟ್ಟಿಯನ್ನು ಎಲ್. ಬಿ. ನಗರದ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.

ರೋಹಿತ್ ಶೆಟ್ಟಿ ಬಾಲಿವುಡ್‌ನ ಪ್ರಸಿದ್ಧ ಸಾಹಸ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಜಮೀನ್ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ ರೋಹಿತ್‌, ಗೋಲ್ಮಾಲ್, ಗೋಲ್ಮಾಲ್ ರಿಟರ್ನ್ಸ್, ಗೋಲ್ಮಾಲ್ 3, ಚೆನ್ನೈ ಎಕ್ಸ್‌ಪ್ರೆಸ್, ಸಿಂಗಂ, ಸಿಂಗಂ ರಿಟರ್ನ್ಸ್, ದಿಲ್ವಾಲೆ, ಗೋಲ್ಮಾಲ್ ಎಗೇನ್, ಸಿಂಬಾ, ಸೂರ್ಯವಂಶಿ ಮುಂತಾದ ಕೆಲವು ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಇತ್ತೀಚೆಗೆ ಅವರ ನಿರ್ದೇಶನದ ಸರ್ಕಸ್ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ರಣವೀರ್ ಸಿಂಗ್, ವರುಣ್ ಶರ್ಮಾ ಮತ್ತು ಪೂಜಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News