ಏಳುಮಲೆ ಟ್ರೇಲರ್ ರಿಲೀಸ್ : ಚಿತ್ರಕ್ಕೆ ಡಾಲಿ-ನವೀನ್ ಶಂಕರ್ ಹಾಗೂ ಶರಣ್ ಸಾಥ್‌

Elumale Kannada movie : ಕರ್ನಾಟಕ - ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್ ರಿಲೀಸ್ ಮಾಡಲಾಯಿತು. ಕಾರ್ಯಕ್ರಮಕ್ಕೆ ನಟರಾದ ಡಾಲಿ ಧನಂಜಯ್, ನವೀನ್ ಶಂಕರ್ ಹಾಗೂ ಶರಣ್ ವಿಶೇಷ ಮೆರುಗು ನೀಡಿದರು. 

Written by - Krishna N K | Last Updated : Aug 31, 2025, 04:31 PM IST
    • ಕರ್ನಾಟಕ - ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ
    • ಏಳುಮಲೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.
    • ಚಿತ್ರಕ್ಕೆ ಡಾಲಿ ಧನಂಜಯ್, ನವೀನ್ ಶಂಕರ್ ಹಾಗೂ ಶರಣ್ ಸಾಥ್‌
ಏಳುಮಲೆ ಟ್ರೇಲರ್ ರಿಲೀಸ್ : ಚಿತ್ರಕ್ಕೆ ಡಾಲಿ-ನವೀನ್ ಶಂಕರ್ ಹಾಗೂ ಶರಣ್ ಸಾಥ್‌

Elumale movie trailer : ಟ್ರೇಲರ್ ಬಿಡುಗಡೆ ಬಳಿಕ ನಟ ಶರಣ್ ಮಾತನಾಡಿ, ಕನ್ನಡದ ಇವೆಂಟ್ ಇಷ್ಟು ಜನರ ಮುಂದೆ ನಡೆಯುತ್ತಿದೆ ಎನ್ನುವುದು ಈ ಚಿತ್ರದ ನಿಜವಾದ ಗೆಲುವು ಇಲ್ಲಿಂದ ಶುರುವಾಗಿದೆ. ಈ ಚಿತ್ರದ ರಿಯಲ್ ಹೀರೋ ತರುಣ್. ಅವರು ಒಂದು ಸಿನಿಮಾದ ಆಯ್ಕೆ ಹೇಗಿದೆ ಅನ್ನೋದಕ್ಕೆ ನನ್ನ ಜರ್ನಿ ಸಾಕ್ಷಿ. ಅವರು ನನ್ನ ಸಿನಿಮಾಗಳ ಕಥೆ ಆಯ್ಕೆ ಮಾಡುತ್ತಾರೆ. ಏಳುಮಲೆ ಟ್ರೇಲರ್ ನೋಡಿದರೆ ಸಿನಿಮಾ ನೋಡ್ಲೇಬೇಕು ಎನಿಸುತ್ತದೆ. ಇದು ಕಂಟೆಂಟ್ ಸಿನಿಮಾ. ಈ ಚಿತ್ರ ದೊಡ್ಡ ಹಿಟ್ ಆಗಲಿದೆ ಎಂಬ ನಂಬಿಕೆ ಇದೆ ಎಂದರು. 

Add Zee News as a Preferred Source

ನಟ ಡಾಲಿ ಧನಂಜಯ್ ಮಾತನಾಡಿ, ಏಳುಮಲೆ ಟೀಸರ್ ನೋಡಿದಾಗಿನಿಂದಲೂ ಬಹಳ ಖುಷಿ ಇದೆ. ತರುಣ್, ರಾಣಾಗೆ ಮೆಸೇಜ್ ಮಾಡಿ ಬಹಳ‌ ಎನರ್ಜಿ ಇದೆ ಎಂದಿದ್ದೆ. ತುಂಬಾ ದಿನ ಆಯ್ತು ಈ ರೀತಿ ಲವ್ ಸ್ಟೋರಿ ನೋಡದೆ. ಸಿನಿಮಾವನ್ನು ತುಂಬಾ ಫ್ಯಾಷನೆಟೆಡ್ ಆಗಿ ಮಾಡಿದ ಯಾವ ಪ್ರಯತ್ನ ಕೂಡ ಇಲ್ಲಿವರೆಗೂ ಸೋತಿಲ್ಲ. ಈ ತಂಡದಲ್ಲಿ ಪ್ರಾಮಾಣಿಕತೆ ಎದ್ದು ಕಾಣಿಸುತ್ತಿದೆ. ಆ ಪ್ರಾಮಾಣಿಕತೆಯೇ ಈ ಸಿನಿಮಾ ಗೆಲ್ಲಿಸುತ್ತದೆ ಎಂಬ ನಂಬಿಕೆ ಇದೆ. ನಂದು ತರುಣ್ ಅವರದ್ದು ಬ್ರದರ್ಸ್ ಸಂಬಂಧ. ಸಿನಿಮಾವನ್ನೇ ನಂಬಿಕೆಕೊಂಡು ಸಿನಿಮಾದಿಂದ ದುಡಿದು ಮತ್ತೆ ಸಿನಿಮಾ ಮಾಡುವುದು ಸವಾಲು. ಸಿನಿಮಾದಲ್ಲಿ ಕನಸು ಮಾತ್ರ ತೋರಿಸಲಾಗುತ್ತದೆ. ಅದಕ್ಕಾಗಿ ಫ್ಯಾಷನ್, ರಿಸ್ಕ್ ತೆಗೆದುಕೊಳ್ಳಬೇಕು. ಅದನ್ನು ತರುಣ್ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಇದನ್ನೂ ಓದಿ:ಮೊನಾಲಿಸಾಗೆ ಒಲಿದು ಬಂತು ಸೂಪರ್‌ ಆಫರ್‌..! ಇನ್ನು ಮುಂದೆ ಈಕೆಯನ್ನ ಟಚ್‌ ಮಾಡೋಕೂ ನಿಮ್ಮ ಕೈಯಲ್ಲಿ ಆಗಲ್ಲ

ನಟ ನವೀನ್ ಶಂಕರ್ ಮಾತನಾಡಿ, ಟ್ರೇಲರ್ ಬಹಳ ಚೆಂದ ಇದೆ. ಪೋಸ್ಟರ್, ಟೀಸರ್ ನೋಡಿದಲೂ ಇಷ್ಟವಾಗಿತ್ತು. ಇಂಟೆನ್ಸ್ ಎಮೋಷನ್, ಮುದ್ದಾದ ಜೋಡಿ, ಹೋರಾಟದ ಜರ್ನಿ, ಒಳ್ಳೊಳ್ಳೆ ನಟರು, ಒಳ್ಳೆ ಮ್ಯೂಸಿಕ್ ಇದೆ. ನಮ್ಮ ಟೂರಿಸ್ಟ್ ನ ಟ್ಯಾಗ್ ಲೈನ್ ಒಂದು ರಾಜ್ಯ , ಹಲವು ಜಗತ್ತು. ಈ ಸಿನಿಮಾದಲ್ಲಿ ನೀವು ಇನ್ನೊಂದು ಜಗತ್ತು ನೋಡುತ್ತೀರಾ. ಎಲ್ಲಾ ಭಾಗದ ಕಥೆಗಳು ತೆರೆಗೆ ಬರಬೇಕು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ಚಿತ್ರದ ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ಒಬ್ಬ ನಿರ್ದೇಶಕನಾಗಿ ನನಗೆ ಏನೂ ದುಡಿಮೆ ಬರುತ್ತದೆ ಅದನ್ನು ಇಟ್ಕೊಂಡು ಸಿನಿಮಾ ಮಾಡುತ್ತೇನೆ. ಅದಕ್ಕೆ ಅಟ್ಲಾಂಟಾ ನಾಗೇಂದ್ರ ಅವರು ನೈತಿಕ ಬೆಂಬಲವಾಗಿ ನಿಲ್ಲುತ್ತಾರೆ.‌ ತುಂಬಾ ಶ್ರಮ ಹಾಕಿ ಸಿನಿಮಾ ಮಾಡಿದ್ದೇವೆ. ಎಲ್ಲರೂ ಪ್ರೀತಿಯಿಂದ ಈ ಚಿತ್ರ ಮಾಡಿದ್ದಾರೆ. ಇದು ಪುನೀತ್ ಸಿನಿಮಾ. ಇದು ಅವನ ಪ್ರಾಮಾಣಿಕತೆ. ಏಳುಮಲೆ ಪ್ರೀತಿಯೇ ಪರಮ ಶ್ರೇಷ್ಠ ಎಂದು ಹೇಳುತ್ತದೆ. ಇದನ್ನು ನಾವು ಥ್ರಿಲ್ಲರ್ ಮೂಲಕ ಹೇಳುತ್ತಿದ್ದೇವೆ. ಇದು ನಿಮ್ಮನ್ನು ನಿರಾಶೆ ಮಾಡುವುದಿಲ್ಲ ಎಂದರು.

ಇದನ್ನೂ ಓದಿ:65ನೇ ವಯಸ್ಸಿನಲ್ಲಿ ಮಾಧುರಿ ದೀಕ್ಷಿತ್‌ ಜೊತೆ 4ನೇ ಮದುವೆಯಾಗ್ತಾರಂತೆ ಈ ಖ್ಯಾತ ನಟ! ಯಾರೀತ ಗೊತ್ತೇ?

ಏಳುಮಲೆ ಸಿನಿಮಾ ಇದೇ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಟಿ ರಕ್ಷಿತಾ ಸಹೋದರ ರಾಣಾ ನಾಯಕನಾಗಿ, ಮಹಾನಟಿ ಖ್ಯಾತಿಯ ಪ್ರಿಯಾಂಕಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಏಳುಮಲೆಯ ಭಾಗವಾಗಿದ್ದಾರೆ.

ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯನ್ನು ಹೊಂದಿರುವ ಈ ಪ್ರಾಜೆಕ್ಟ್ ಗೆ ತರುಣ್ ಕಿಶೋರ್ ಸುಧೀರ್ ಅವರು ಬಂಡವಾಳ ಹೂಡಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಸಹ ನಿರ್ಮಾಪಕರಾಗಿ ಜೊತೆಯಾಗಿ ನಿಂತಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ನಾಗಾರ್ಜುನ ಶರ್ಮಾ ಸಾಹಿತ್ಯ ಹಾಗೂ ಪುನೀತ್‌ ರಂಗಸ್ವಾಮಿ ಸಂಭಾಷಣೆ, ಡಿ.ಇಮ್ಮಾನ್ ಸಂಗೀತ ಈ ಸಿನಿಮಾಗಿದೆ.

ಹೇಗಿದೆ ಟ್ರೇಲರ್? : ಏಳುಮಲೆ ಟ್ರೇಲರ್ ಸಖತ್ ಪ್ರಾಮಿಸಿಂಗ್ ಆಗಿದೆ. ಆಕ್ಷನ್, ಎಮೋಷನ್, ಒಂದೊಳ್ಳೆ ಲವ್ ಸ್ಟೋರಿ ಜೊತೆಗೆ ಥ್ರಿಲ್ಲಿಂಗ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಒಂದೊಳ್ಳೆ ಕಥೆಯನ್ನು ಚಿತ್ರತಂಡ ಪ್ರೇಕ್ಷಕರಿಗೆ ಉಣಬಡಿಸುವ ಕಾತರದಲ್ಲಿದೆ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News