ಅಪ್ಪು 2ನೇ ಪುಣ್ಯಸ್ಮರಣೆ: ಸವಿನೆನಪುಗಳನ್ನು ಸ್ಮರಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

Puneeth Rajkumar 2nd Death Anniversary: ರಾಘವೇಂದ್ರ ರಾಜ್‌ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

Written by - Puttaraj K Alur | Last Updated : Oct 29, 2023, 02:08 PM IST
  • ನಗುಮುಖದ ಮಾಣಿಕ್ಯ, ಕರುನಾಡ ರಾಜಕುಮಾರ ಪುನೀತ್ ರಾಜಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ
  • ಬೆಂಗಳೂರಿನ ಕಂಠಿರವ ಸ್ಟೂಡಿಯೋಗೆ ಆಗಮಿಸಿ ಅಪ್ಪು ಸಮಾಧಿ ದರ್ಶನ ಪಡೆದುಕೊಂಡ ಅಭಿಮಾನಿಗಳು
  • ‘ಅಪ್ಪು’ವಿನ ನಲ್ಮೆಯ ನಗುವನ್ನು ಸಂಭ್ರಮಿಸೋಣವೆಂದ ಅಶ್ವಿನಿ ಪುನೀತ್ ರಾಜಕುಮಾರ್
ಅಪ್ಪು 2ನೇ ಪುಣ್ಯಸ್ಮರಣೆ: ಸವಿನೆನಪುಗಳನ್ನು ಸ್ಮರಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್ title=
ಪುನೀತ್ ರಾಜಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ

ಬೆಂಗಳೂರು: ನಗುಮುಖದ ಮಾಣಿಕ್ಯ, ಕರುನಾಡ ರಾಜಕುಮಾರ, ಪವರ್ ಸ್ಟಾರ್ ಖ್ಯಾತಿಯ ಡಾ.ಪುನೀತ್ ರಾಜ್‍ಕುಮಾರ್ ನಮ್ಮನಗಲಿ ಇಂದಿಗೆ(ಅ.29) ಭರ್ತಿ 2 ವರ್ಷ. ಅಪ್ಪು ನಮ್ಮನ್ನು ದೈಹಿಕವಾಗಿ ಅಗಲಿ 2 ವರ್ಷಗಳಾದರೂ ಇನ್ನೂ ಸಹ ಕರುನಾಡು ದುಃಖದಲ್ಲಿದೆ. ಪುನೀತ್ ಅಭಿಮಾನಿಗಳು ಕಂಠಿರವ ಸ್ಟೂಡಿಯೋಗೆ ಬರುವುದು ಕಡಿಮೆಯಾಗಿಲ್ಲ. ಪ್ರತಿದಿನ ಸಾವಿರಾರು ಮಂದಿ ಭೇಟಿ ನೀಡುತ್ತಲೇ ಇದ್ದಾರೆ. ಅಪ್ಪು ಅವರ 2ನೇ ವರ್ಷದ ಪುಣ್ಯತಿಥಿಯಂದು ಸಾವಿರಾರು ಸಂಖ್ಯೆಯ ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರ 2ನೇ ವರ್ಷದ ಪುಣ್ಯತಿಥಿಗೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸಿರುವ ಅಭಿಮಾನಿಗಳು ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿರುವ ಪುನೀತ್ ಸಮಾಧಿ ಬಳಿ ಭಾನುವಾರ ಪುಣ್ಯತಿಥಿ ಕಾರ್ಯಕ್ರಮ ನಡೆದಿದೆ. ಅಪ್ಪು ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದ್ದಾರೆ. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವನಮನ ಸಲ್ಲಿಸಿದ್ದಾರೆ.

ಇದನ್ನೂ ಓದಿ: TRP ರಾಮ ಸಿನಿಮಾದಿಂದ ಮತ್ತೊಂದು ಸಾಂಗ್‌: ನ.3ಕ್ಕೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ ರಿಲೀಸ್

ರಾಘವೇಂದ್ರ ರಾಜ್‌ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಸಹ ಪ್ರೀತಿಯ ಅಪ್ಪುವನ್ನು ಸ್ಮರಿಸಿಕೊಂಡಿದ್ದಾರೆ.

ನಲ್ಮೆಯ ನಗುವನ್ನು ಸಂಭ್ರಮಿಸೋಣ!

ಅಪ್ಪುವಿನ 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್‍ ರಾಜ್‍ಕುಮಾರ್ ಅವರು, ‘ನೆನಪಿನ ಆಳದಲ್ಲಿ ಎರಡು ವರ್ಷಗಳು...’ ಎಂದು ಸ್ಮರಿಸಿದ್ದಾರೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪವರ್ ಸ್ಟಾರ್ ಅವರ ಜೊತೆಗಿನ ಸವಿ ನೆನಪುಗಳನ್ನು ಮೆಲಕು ಹಾಕಿದ್ದಾರೆ.

ಇದನ್ನೂ ಓದಿ: ವರುಣ್ ತೇಜ್-ಲಾವಣ್ಯ ಲಗ್ನಪತ್ರಿಕೆ ಬೆಲೆ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ!

‘2ನೇ ವರ್ಷದ ಸವಿನೆನಪು… ನಮ್ಮೆಲ್ಲರ ಸತ್ಕಾರ್ಯಗಳಿಗೆ ಮಾರ್ಗದರ್ಶಿಯಾಗಿ ನಿಂತಿರುವ ಅಪ್ಪು ಅವರ ಅನನ್ಯ ಚೇತನಕ್ಕೆ ಕಾಲವೇ ಸಾಕ್ಷಿಯಾಗಿದೆ. ಅಪ್ಪು ಅವರ ಮೇಲೆ ಸದಾ ತಮ್ಮ ಅಭಿಮಾನ ಮತ್ತು ಪ್ರೀತಿಯನ್ನು ತೋರುವ ಎಲ್ಲಾ ಬಂಧು ಮಿಂತ್ರರು ಹಾಗೂ ಅಭಿಮಾನಿಗಳಿಗೆ ನಮ್ಮ ಗೌರವಪೂರ್ಣ ವಂದನೆಗಳು. ನಾವೆಲ್ಲರೂ ಸದಾ ಅಪ್ಪು ಅವರ ನೆನಪುಗಳನ್ನು ಸ್ಮರಿಸುತ್ತಾ ಹಾಗೂ ಅವರ ನಲ್ಮೆಯ ನಗುವನ್ನು ಸಂಭ್ರಮಿಸೋಣ’ವೆಂದು ಅಶ್ವಿನಿ ಪುನೀತ್ ರಾಜ್‍ಕುಮಾರ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News