ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅರೆಸ್ಟ್

Jani Master arrested: ಗೋವಾದಲ್ಲಿ ಸೈಬರಾಬಾದ್ ಪೊಲೀಸರು ಜಾನಿ ಮಾಸ್ಟರ್ ಅವರನ್ನು ಬಂಧಿಸಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Written by - Chetana Devarmani | Last Updated : Sep 20, 2024, 10:28 AM IST
    • ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ
    • ಜಾನಿ ಮಾಸ್ಟರ್ ಅರೆಸ್ಟ್‌ ಮಾಡಿದ ಪೊಲೀಸರು
    • ನೃತ್ಯ ಸಂಯೋಜಕ ಜಾನಿ ಮಾಸ್ಟರ್
ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅರೆಸ್ಟ್  title=

ಬೆಂಗಳೂರು: ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಜೊತೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪದ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ನನ್ನು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ನಿಜವಾದ ಹೆಸರು ಶೇಖ್ ಜಾನಿ. ಗೋವಾದಲ್ಲಿ ಸೈಬರಾಬಾದ್ ಪೊಲೀಸರು ಜಾನಿ ಮಾಸ್ಟರ್ ಅವರನ್ನು ಬಂಧಿಸಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ನ್ಯಾಯಾಲಯದಿಂದ ‘ಟ್ರಾನ್ಸಿಟ್ ವಾರಂಟ್’ ಪಡೆದು ಹೈದರಾಬಾದ್‌ಗೆ ಕರೆತರಲಾಗುವುದು. ಹೊರಾಂಗಣ ಶೂಟಿಂಗ್ ವೇಳೆ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳೆ ದೂರು ದಾಖಲಿಸಿದ್ದರು.  

ಇದನ್ನೂ ಓದಿ: ಸಲ್ಮಾನ್‌ ಖಾನ್‌ ಎದೆಯಲ್ಲಿ ಮತ್ತಷ್ಟು ನಡುಕ ಹುಟ್ಟಿಸಿದ ಅಪ್ರಾಪ್ತ ಮಹಿಳೆಯ ಹೇಳಿಕೆ! ಲಾರೆನ್ಸ್ ಬಿಷ್ಣೋಯ್ ಅವರನ್ನು ಕರೆಸುವುದಾಗಿ ನಟನ ತಂದೆಗೆ ಬೆದರಿಕೆ ಹಾಕಿದ್ದು ಯಾರು?

ಬಂಧನ ಭೀತಿಯಿಂದ ಗೋವಾಗೆ ಹಾರಿದ್ದ ಜಾನಿ ಮಾಸ್ಟರ್, ಹೋಟೆಲ್‌ನಲ್ಲಿ ತಂಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಾನಿ ಮಾಸ್ಟರ್‌ನನ್ನು ಪೊಲೀಸರು ಬಂಧಿಸಿದ್ದು, ಶುಕ್ರವಾರ ಹೈದರಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಜಾನಿ ಮಾಸ್ಟರ್ ಅವರ ಪತ್ನಿ ಸುಮಲತಾ ಅಲಿಯಾಸ್ ಆಯೇಶಾ,  ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ. ನನ್ನ ಪತಿ ವಿರುದ್ಧದ ದೂರಿನ ಹಿಂದೆ "ದೊಡ್ಡ ಪಿತೂರಿ" ಇದೆ ಎಂದು ಹೇಳಿದ್ದಾರೆ. 

ಆರೋಪಿಗಳ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ಕುರಿತು 'ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ' ರಚಿಸಿರುವ ಸಮಿತಿಯು ತನಿಖೆಯನ್ನು ಪ್ರಾರಂಭಿಸಿದೆ. ಸಮಿತಿ ಸದಸ್ಯ ತಮ್ಮಾರೆಡ್ಡಿ ಭಾರದ್ವಾಜ್ ಮಾತನಾಡಿ, ಸಂತ್ರಸ್ತರಿಂದ ದೂರು ಸ್ವೀಕರಿಸಿದ ದಿನಾಂಕದಿಂದ 90 ದಿನಗಳಲ್ಲಿ ಸಮಿತಿಯು ಸಮಸ್ಯೆಯ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದಿದ್ದಾರೆ.

ಫಿಲಂ ಚೇಂಬರ್ ರಚಿಸಿರುವ ಲೈಂಗಿಕ ಕಿರುಕುಳ ತಡೆ ಸಮಿತಿಯ ಮುಖ್ಯಸ್ಥ ದಾಮೋದರ್ ಪ್ರಸಾದ್, ತೆಲುಗು ಚಲನಚಿತ್ರ ಮತ್ತು ಕಿರುತೆರೆ ಡ್ಯಾನ್ಸರ್ಸ್ ಮತ್ತು ಡ್ಯಾನ್ಸ್ ಡೈರೆಕ್ಟರ್ಸ್ ಅಸೋಸಿಯೇಷನ್'ಗೆ ಪತ್ರ ಕಳುಹಿಸಲಾಗಿದೆ. ಎಲ್ಲ ಆರೋಪಗಳಿಂದ ಖುಲಾಸೆಯಾಗುವವರೆಗೆ ಜಾನಿ ಮಾಸ್ಟರ್‌ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಲಾಗಿದೆ ಎಂದರು. 

ಇದನ್ನೂ ಓದಿ: ಮದುವೆ ದಿನಾಂಕ ಘೋಷಿಸಿದ ಅನುಶ್ರೀ !ಕೊನೆಗೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಿರೂಪಕಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News