ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿ ನಿರ್ಮಾಣ ಮಾಡ್ತಿರುವ ಜುಗಲ್ ಬಂದಿ (Jugal Bandi) ಸಿನಿಮಾ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಸುದ್ದಿ ಮಾಡುತ್ತಿದೆ. ರಿಲೀಸ್ ಗೂ ಮೊದಲೇ ಭಾರೀ ಮೊತ್ತಕ್ಕೆ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡಿ ಗಮನಸೆಳೆದಿದ್ದ ಜುಗಲ್ ಬಂದಿ ಸಿನಿಮಾ ಅಂಗಳದಿಂದ ಮನಮುಟ್ಟುವ ಮೊದಲ ಹಾಡು ಬಿಡುಗಡೆಯಾಗಿದ್ದು, ಸಂಗೀತ ಪ್ರಿಯರ ಮೆಚ್ಚುಗೆ ಪಡೆದುಕೊಂಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: James: 'ಜೇಮ್ಸ್' ಬಂದ್ರು.. 'ಜೇಮ್ಸ್'..! ಕರುನಾಡ ಅಪ್ಪು.. ಕನ್ನಡಿಗರ ಹೆಮ್ಮೆ..!


ಇಂಥವರ ಸಂತಾನ ಭಾಗ್ಯ ಎಂದು ಶುರುವಾಗುವ ಅದ್ಭುತ ಸಾಹಿತ್ಯ ಎಂತಹ ಕಲ್ಲು ಮನಸನ್ನು ಕರಗಿಸುವಂತಿದೆ. ನಿರ್ದೇಶಕ ದಿವಾಕರ್ ಅವರು ಪೋಣಿಸಿರುವ ಅರ್ಥಪೂರ್ಣ ಸಾಲುಗಳಿಗೆ ಪ್ರದ್ಯೋತನ್ ಸಂಗೀತದ ಕಿಕ್ ಇದೆ. 


ಮಾನಸಿ ಸುಧೀರ್ (Manasi Sudheer) ಅವರ ಅಭಿನಯದ ಮ್ಯಾಜಿಕ್. ಎಸ್ ಕೆ ರಾವ್ ಕ್ಯಾಮೆರಾ ವರ್ಕ್. ಡಾ.ವೈಕಂ ವಿಜಯಲಕ್ಷ್ಮೀ ಗಾಯನ ಎಲ್ಲವೂ ಅತ್ಯಧ್ಬುತವಾಗಿ ಮೂಡಿ ಬಂದಿದೆ. ತಾಯಿ ಹೃದಯವನ್ನು ವರ್ಣಿಸುವ ಈ ಹಾಡಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿರುವ ಅಲ್ಲು ರಘು ಸುಪುತ್ರಿ ಆರು ತಿಂಗಳ ಮಗು ಯುಕ್ತ ನಟಿಸಿದ್ದು, ಮನಸಿ ಸುಧೀರ್ ಅವರ ಮನೋಜ್ಞ ಅಭಿನಯ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. 


'ಸೂಜಿದಾರ', 'ಸಲಗ', 'ಏಕ್ ಲವ್‌ ಯಾ' (Ek Love Ya) ಮುಂತಾದ ಸಿನಿಮಾಗಳಲ್ಲಿ ನಟಿಸಿ ಗಮನಸೆಳೆದಿರುವ ಯಶ್ ಶೆಟ್ಟಿ (Yash Shetty) ಹೀರೋ ಆಗಿ ಕಾಣಿಸಿಕೊಳ್ಳಲಿದ್ದು ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ. ಉಳಿದಂತೆ ಅಶ್ವಿನ್ ರಾವ್ ಪಲ್ಲಕ್ಕಿ,  ಸಂತೋಷ್ ಆಶ್ರಯ್ ನಟಿಸಿದ್ದಾರೆ. ಈ ಹಿಂದೆ ಹಲವು ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ ಡಿಂಡಿಮ ಜುಗಲ್ ಬಂದಿ ಸಿನಿಮಾ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ.


ಇದನ್ನೂ ಓದಿ: Ram Chandra Raju : ಒಂದು ಕಾಲದಲ್ಲಿ 'ಯಶ್ ಬಾಡಿಗಾರ್ಡ್' ಆಗಿದ್ದ ಕೆಜಿಎಫ್ ವಿಲನ್ ಗರುಡ!


ಉಳಿದಂತೆ ಕೋ ಡೈರೆಕ್ಟರ್ ಆಗಿ ಬಾಲಕೃಷ್ಣ ಯಾದವ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಸಂತೋಷ್, ಶ್ರೀನಿವಾಸ್,ಕೆಲಸ ನಿರ್ವಹಿಸಲಿದ್ದಾರೆ. ಡಿಂಡಿಮ ಕ್ರಿಯೇಷನ್ ನಡಿ ನಿರ್ಮಾಣವಾಗ್ತಿರುವ ಜುಗಲ್ ಬಂದಿ ಸಿನಿಮಾಗೆ  ದಿವಾಕರ್ ಡಿಂಡಮ ನಿರ್ದೇಶನದ ಜೊತೆ ಬಂಡವಾಳ ಕೂಡ ಹಾಕಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.