Sandalwood News : ನಿರ್ದೇಶಕ ಮಂಜುನಾಥ್ ಬಿ ನಾಗಬಾ,  ಜನಪ್ರಿಯ "ಕಾಂತಾರ" ಚಿತ್ರ ಸೇರಿದಂತೆ ಹದಿನೆಂಟು ಚಿತ್ರಗಳಿಗೆ ಆನ್ ಲೈನ್ ಎಡಿಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ‌.


COMMERCIAL BREAK
SCROLL TO CONTINUE READING

ಮನುಷ್ಯನಿಗೆ ಪಾಪ - ಪುಣ್ಯಕ್ಕೆ ಅನುಗುಣವಾಗಿ ಮೇಲೆ ಯಾವಯಾವ ಶಿಕ್ಷೆಯಿದೆ ಎಂದು ತಿಳಿಸುವ ಪುರಾಣವೇ "ಗರುಡ ಪುರಾಣ". ಚಿತ್ರದ ಒಂದು ಭಾಗಕ್ಕೆ  ಗರುಡ ಪುರಾಣದ ಕೆಲವು ಅಂಶಗಳು ಹೊಂದಿಕೆಯಾಗುತ್ತದೆ. ಹಾಗಾಗಿ " ಗರುಡ ಪುರಾಣ " ಶೀರ್ಷಿಕೆ ಇಟ್ಟಿದ್ದೇವೆ. 


ಇದನ್ನೂ ಓದಿ-ನಟಿ ವಿಜಯಲಕ್ಷ್ಮಿಗೆ 7 ಬಾರಿ ಗರ್ಭಪಾತ ಆರೋಪ, ಈ ನಟನಿಗೆ ಪೊಲೀಸ್‌ ನೋಟಿಸ್​


ಇದು ಮಧ್ಯಮ‌‌ ಕುಟುಂಬವೊಂದರಲ್ಲಿ(ಮಿಡಲ್ ಕ್ಲಾಸ್) ನಡೆಯುವ ಕಥೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಎನ್ನಬಹುದು. ಸದ್ಯ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, "ಗರುಡ ಪುರಾಣ" ತೆರೆಗೆ ಬರಲು ಸಿದ್ದವಾಗಿದೆ ಎಂದು ನಿರ್ದೇಶಕ ಮಂಜುನಾಥ್ ಬಿ ನಾಗಬಾ ಚಿತ್ರದ ಕುರಿತು ಮಾಹಿತಿ ನೀಡಿದರು.


ಮಂಜುನಾಥ್ ಬಿ ನಾಗಬಾ ಚಿತ್ರದ ನಾಯಕನಾಗಿಯೂ ನಟಿಸಿದ್ದು, ದಿಶಾ ಶೆಟ್ಟಿ  ನಾಯಕಿಯಾಗಿ ಅಭಿನಯಿಸಿದ್ದಾರೆ. "ಭಜರಂಗಿ" ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. 


ಪುನೀತ್ ಆರ್ಯ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ರಾಕೇಶ್ ಆಚಾರ್ಯ ಸಂಗೀತ ನೀಡಿದ್ದಾರೆ. ಸುನೀಲ್ ನರಸಿಂಹಮೂರ್ತಿ "ಗರುಡ ಪುರಾಣ" ಚಿತ್ರದ ಛಾಯಾಗ್ರಾಹಕರು.


ಇದನ್ನೂ ಓದಿ-Jawan: ಶಾರುಕ್‌ ನ್ಯೂ ಸಿನಿಮಾ ಹಿಟ್ or ಫ್ಲಾಪ್‌...? ಇಲ್ಲಿದೆ ಬಜೆಟ್ ಮತ್ತು ಕಲೆಕ್ಷನ್‌ ಡಿಟೇಲ್ಸ್‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾ