ನವರಾತ್ರಿಗೆ ಬರ್ತಿದ್ದಾನೆ ʼಗೋಪಿಲೋಲʼ: ಶುಭಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜನಾಥ ಸ್ವಾಮಿ ದರ್ಶನ ಪಡೆದುಕೊಂಡರು. ‌ಆ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು "ಗೋಪಿಲೋಲ" ಚಿತ್ರದ ಪೋಸ್ಟರ್ ಹಾಗೂ ಹಾಡೊಂದನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.    

Written by - YASHODHA POOJARI | Last Updated : Oct 1, 2024, 08:20 PM IST
    • ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಆರ್ ರವೀಂದ್ರ ನಿರ್ದೇಶನದ "ಗೋಪಿಲೋಲ" ಚಿತ್ರ
    • ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜನಾಥ ಸ್ವಾಮಿ ದರ್ಶನ ಪಡೆದುಕೊಂಡರು.
    • ಶುಭಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
ನವರಾತ್ರಿಗೆ ಬರ್ತಿದ್ದಾನೆ ʼಗೋಪಿಲೋಲʼ: ಶುಭಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ  title=
File Photo

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ "ಗೋಪಿಲೋಲ" ಚಿತ್ರ ನವರಾತ್ರಿಯ ಶುಭ ಸಂದರ್ಭದಲ್ಲಿ ಅಕ್ಟೋಬರ್ 4 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಚೈತ್ರ ಕುಂದಾಪುರ್ ಗೆ ಕಾನೂನು ಸಂಕಷ್ಟ !ಬಿಗ್ ಬಾಸ್ ಮನೆಯಿಂದ ಫೈರ್ ಬ್ರಾಂಡ್ ಔಟ್ ? 

ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜನಾಥ ಸ್ವಾಮಿ ದರ್ಶನ ಪಡೆದುಕೊಂಡರು. ‌ಆ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು "ಗೋಪಿಲೋಲ" ಚಿತ್ರದ ಪೋಸ್ಟರ್ ಹಾಗೂ ಹಾಡೊಂದನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.  

ನೈಸರ್ಗಿಕ ಕೃಷಿಯೇ ಶ್ರೇಷ್ಠ ಎಂಬ ಮುಖ್ಯ ಕಥಾಹಂದರವುಳ್ಳ ಈ ಚಿತ್ರದಲ್ಲಿ ಲವ್, ಆಕ್ಷನ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ನೋಡುಗರ ಮನ ಗೆದ್ದಿದೆ.

ಇದನ್ನೂ ಓದಿ: ಶಿಶಿರ್‌ ಶಾಸ್ತ್ರಿ ಗೆ ಅಂಥದ್ದೇನಂದ್ರು ಯಮುನಾ! ಬಿಗ್‌ ಬಾಸ್‌ ನಲ್ಲಿ ಸ್ವರ್ಗವೂ ನರಕವಾಗಿದ್ದೇಕೆ?

 "ಗೋಪಿಲೋಲ" ಚಿತ್ರಕ್ಕೆ ನಿರ್ಮಾಪಕ ಎಸ್ ಆರ್ ಸನತ್ ಕುಮಾರ್ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೇಶವಚಂದ್ರ ಅವರದು. ಸೂರ್ಯಕಾಂತ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ಮಿಥುನ್ ಅಶೋಕನ್ ಚೆನ್ನೈ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ರಾಕೇಶ್ ಆಚಾರ್ಯ ಅವರದು. ಸಹ ನಿರ್ಮಾಪಕರಾಗಿರುವ ಮಂಜುನಾಥ್ ಅವರೆ ನಾಯಕರಾಗಿ ನಟಿಸಿದ್ದು, ನಾಯಕಿಯಾಗಿ ನಿಮಿಷ ಕೆ ಚಂದ್ರ ಅಭಿನಯಿಸಿದ್ದಾರೆ. ಎಸ್ ನಾರಾಯಣ್, ಸಪ್ತಗಿರಿ(ತೆಲುಗು, ತಮಿಳು ಖ್ಯಾತ ನಟ), ಜಾಹ್ನವಿ, ಜೋಸೈಮನ್, ನಾಗೇಶ್ ಯಾದವ್, ಪದ್ಮಾ ವಾಸಂತಿ, ಸ್ವಾತಿ, ಹನುಮಂತೇ ಗೌಡ, ಡಿಂಗ್ರಿ ನಾಗರಾಜ್, ಕೆಂಪೇಗೌಡ, ಸಚಿನ್, ರಾಧ ರಾಮಚಂದ್ರ, ರೇಖಾದಾಸ್, ಸತೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News