ನಾನು ರಾಜಕೀಯ ಪ್ರವೇಶಿಸುವುದಿಲ್ಲ-ರಜನಿಕಾಂತ್

     

Last Updated : Nov 23, 2017, 07:06 PM IST
ನಾನು ರಾಜಕೀಯ ಪ್ರವೇಶಿಸುವುದಿಲ್ಲ-ರಜನಿಕಾಂತ್ title=

ಚೆನ್ನೈ: ಶೀಘ್ರದಲ್ಲೇ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ನಟ ರಜನಿಕಾಂತ್ ಹೇಳಿದ್ದಾರೆ. 

ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಭಾಗ್ಯ ಪಡೆದು ಚೆನ್ನೈಗೆ ಹಿಂತಿರುಗಿದ ಬಳಿಕ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಜನಿಕಾಂತ್, ಈ ಹೇಳಿಕೆ ನೀಡಿದ್ದಾರೆ. 

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶದ ಕುರಿತು ಹರಿದಾಡುತ್ತಿದ್ದ ವದಂತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು,  ಈಗಾಗಲೇ ನನ್ನ ಸಹೋದರ ಸತ್ಯಾನಾರಾಯಣ ರಾವ್ ರಜನಿ ರಾಜಕಾರಣದಲ್ಲಿದ್ದಾರೆ. ಹಾಗಾಗಿ ನಾನು ಈಗ ರಾಜಕೀಯಕ್ಕೆ ಪ್ರವೇಶಿಸುವ ಅವಸರ ಏನೂ ಇಲ್ಲ, ಎಂದು ಹೇಳಿಕೆ ಎಂದು ಹೇಳುವ ಮೂಲಕ ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. 

ಡಿಸೆಂಬರ್ 12ರಂದು ರಜನಿಕಾಂತ್ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಆ ದಿನ ರಾಜಕೀಯ ಪ್ರವೇಶದ ಬಗ್ಗೆ ಮುಖ್ಯವಾದ ಪ್ರಕಟಣೆ ಮಾಡುವ ಸಾಧ್ಯತೆಗಳಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ರಜನಿ ಮಾತ್ರ ತನ್ನ ಹುಟ್ಟುಹಬ್ಬದ ಬಳಿಕ ಮತ್ತೊಮ್ಮೆ ಅಭಿಮಾನಿಗಳನ್ನು ಭೇಟಿಯಾಗುತ್ತೇನೆಂದು ಮಾತ್ರ ಹೇಳಿರುವ ರಜನಿಕಾಂತ್ ಅವರು, ರಾಜಕೀಯ ಪ್ರವೇಶದ ಎಲ್ಲಾ ವದಂತಿಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ. 

Trending News