Gold Smuggling Case: ನ್ಯಾಯಾಧೀಶರ ಮುಂದೆ ಕಣ್ಣೀರು ಸುರಿಸುತ್ತಾ ಅಳಲು ಪ್ರಾರಂಭಿಸಿದ ನಟಿ ರನ್ಯಾ ರಾವ್!!

ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಲು ನಟಿ ಸ್ವಲ್ಪ ಚಿನ್ನವನ್ನು ಧರಿಸಿ ಉಳಿದದ್ದನ್ನು ತನ್ನ ಬಟ್ಟೆಯಲ್ಲಿ ಬಚ್ಚಿಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ರನ್ಯಾರನ್ನ ಬಂಧಿಸಿದ ನಂತರ ತನಿಖಾಧಿಕಾರಿಗಳು ಅವರ ಮನೆ ಮೇಲೆ ದಾಳಿ ನಡೆಸಿ 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದರು. ಸದ್ಯ ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

Written by - Puttaraj K Alur | Last Updated : Mar 10, 2025, 08:58 PM IST
  • ದುಬೈನಿಂದ ಅಕ್ರಮವಾಗಿ 14.56 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣ
  • ಮಾರ್ಚ್ 24ರವರೆಗೆ ನಟಿ ರನ್ಯಾ ರಾವ್‌ರನ್ನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಕೋರ್ಟ್‌
  • ನ್ಯಾಯಾಧೀಶರ ಮುಂದೆ ಕಣ್ಣೀರು ಸುರಿಸುತ್ತಾ ಅಳಲು ಪ್ರಾರಂಭಿಸಿದ ನಟಿ ರನ್ಯಾ ರಾವ್!!
Gold Smuggling Case: ನ್ಯಾಯಾಧೀಶರ ಮುಂದೆ ಕಣ್ಣೀರು ಸುರಿಸುತ್ತಾ ಅಳಲು ಪ್ರಾರಂಭಿಸಿದ ನಟಿ ರನ್ಯಾ ರಾವ್!!
ನ್ಯಾಯಾಧೀಶರ ಮುಂದೆ ಕಣ್ಣೀರು ಸುರಿಸಿದ ನಟಿ!

Gold Smuggling Case: ಕಳೆದ ವಾರ ದುಬೈನಿಂದ ಅಕ್ರಮವಾಗಿ 14.56 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) 3 ದಿನಗಳ ಕಸ್ಟಡಿ ಅವಧಿ ಮುಗಿದ ನಂತರ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ರನ್ಯಾ ರಾವ್ ಅವರನ್ನು ಮಾರ್ಚ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ನ್ಯಾಯಾಧೀಶರ ಮುಂದೆ ನಟಿ ರನ್ಯಾ ರಾವ್ ಕಣ್ಣೀರು ಸುರಿಸುತ್ತಾ ಅಳಲು ಪ್ರಾರಂಭಿಸಿದ್ದಾರೆಂದು ವರದಿಯಾಗಿದೆ.

Add Zee News as a Preferred Source

ನನಗೆ ಆಘಾತವಾಗಿದೆ ಎಂದ ನಟಿ!

ನಿಮಗೆ ಯಾವುದೇ ರೀತಿಯ ದೈಹಿಕ ಹಿಂಸೆ ನೀಡಲಾಗಿದೆಯೇ ಎಂದು ನ್ಯಾಯಾಲಯ ಕೇಳಿತು. ಇದಕ್ಕೆ ಉತ್ತರಿಸಿದ ನಟಿ ರನ್ಯಾ, ʼನನಗೆ ಯಾವುದೇ ದೈಹಿಕ ಹಿಂಸೆ ನಡೆದಿಲ್ಲ, ಆದರೆ ಮಾನಸಿಕ ಮತ್ತು ಮೌಖಿಕ ಹಿಂಸೆ ನಡೆದಿದೆ' ಎಂದು ನ್ಯಾಯಾಲಯಕ್ಕೆ ತಿಳಿಸಿದರು. ʼನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬೆದರಿಕೆಗಳನ್ನೂ ನೀಡಲಾಗಿದೆ. ಇದರಿಂದ ನಾನು ಆಘಾತಕ್ಕೊಳಗಾಗಿದ್ದು, ಭಾವನಾತ್ಮಕವಾಗಿ ಕುಸಿದುಹೋಗಿದ್ದೇನೆʼ ಅಂತಾ ಅಳಲು ತೋಡಿಕೊಂಡಿದ್ದಾರೆ.   

ಇದನ್ನೂ ಓದಿ: ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣಗೆ ಜೊತೆಯಾದ ಕೊಡವ ಸಮುದಾಯ: ಬಿಗಿ ಭದ್ರತೆ ಒದಗಿಸುವಂತೆ ಒತ್ತಾಯ...

ಇಡೀ ಪ್ರಕ್ರಿಯೆಯು ಸಿಸಿಟಿವಿಯಲ್ಲಿ ದಾಖಲು

ನಟಿ ರನ್ಯಾ ರಾವ್‌ ಪ್ರಕರಣದ ಇಡೀ ಪ್ರಕ್ರಿಯೆಯು ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ವಕೀಲರು ಹೇಳಿದ್ದಾರೆ. ಈ ಕುರಿತು ನ್ಯಾಯಾಲಯವು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕೇಳಿದೆ. ಈ ಪ್ರಕರಣದಲ್ಲಿ ರನ್ಯಾ ಅವರ ಆಪ್ತ ರಾಜ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ ಎಂದು ಡಿಆರ್‌ಐ ನ್ಯಾಯಾಲಯಕ್ಕೆ ತಿಳಿಸಿದೆ. ರನ್ಯಾ ರಾವ್ ಅವರನ್ನು ಜೈಲಿಗೆ ಕಳುಹಿಸುವುದರ ಜೊತೆಗೆ, ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ (ಮಂಗಳವಾರ) ಪ್ರಾರಂಭಿಸುವುದಾಗಿ ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ: ನ್ನಡದ ಪ್ರಖ್ಯಾತ ನಟ ಅಚ್ಯುತ್ ಕುಮಾರ್ ಪತ್ನಿ ಯಾರು ಗೊತ್ತೇ? ಅವರೂ ಸಖತ್‌ ಫೇಮಸ್‌ ನಟಿ..

ರನ್ಯಾ ರಾವ್ ಯಾರು?

ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲಮಗಳಾದ ನಟಿ ರನ್ಯಾ ರಾವ್‌, ಮಾರ್ಚ್ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದ ನಂತರ 14.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನದ ಗಟ್ಟಿಗಳನ್ನು ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದರು. 2014ರಲ್ಲಿ ಕಿಚ್ಚ ಸುದೀಪ್‌ ಅಭಿನಯದ ʼಮಾಣಿಕ್ಯʼ ಚಿತ್ರದ ಮೂಲಕ ರನ್ಯಾ ರಾವ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಕೇವಲ 15 ದಿನಗಳಲ್ಲಿ ನಾಲ್ಕನೇ ಬಾರಿಗೆ ದುಬೈಗೆ ಭೇಟಿ ನೀಡಿದ ನಂತರ ಡಿಆರ್‌ಐ ಅಧಿಕಾರಿಗಳು ನಟಿಯ ಮೇಲೆ ಹದ್ದಿನ ಕಣ್ಣಿರಿಸಿದ್ದರು. ಕಳೆದ ವರ್ಷ ಅವರು ದುಬೈಗೆ 27 ಪ್ರವಾಸಗಳನ್ನು ಮಾಡಿದ್ದರು ಎಂದು ಈ ಹಿಂದೆ ಬಹಿರಂಗವಾಗಿತ್ತು.

ಕೋಟ್ಯಂತರ ರೂ. ನಗದು ಮತ್ತು ಚಿನ್ನ ಪತ್ತೆ!

ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಲು ನಟಿ ಸ್ವಲ್ಪ ಚಿನ್ನವನ್ನು ಧರಿಸಿ ಉಳಿದದ್ದನ್ನು ತನ್ನ ಬಟ್ಟೆಯಲ್ಲಿ ಬಚ್ಚಿಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ರನ್ಯಾರನ್ನ ಬಂಧಿಸಿದ ನಂತರ ತನಿಖಾಧಿಕಾರಿಗಳು ಅವರ ಮನೆ ಮೇಲೆ ದಾಳಿ ನಡೆಸಿ 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದರು. ಸದ್ಯ ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News