ಮನೆ ಶೋಧಿಸಿದ ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ..! ಹೈಕೋರ್ಟ್‌ ಮೊರೆ ಹೋದ ನಟ ಜಗ್ಗೇಶ್‌

Tiger nail pendant : ಮನೆ ಶೋಧ ಹಿನ್ನೆಲೆ ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸುವಂತೆ ಮನವಿಸಲ್ಲಿದ್ದಾರೆ.

Written by - Krishna N K | Last Updated : Oct 26, 2023, 01:10 PM IST
  • ಹುಲಿ ಉಗುರಿಗಾಗಿ ನಟ ಜಗ್ಗೇಶ್‌ ಮನೆ ಶೋಧ
  • ಅರಣ್ಯಾಧಿಕಾರಿಗಳ ವಿರುದ್ಧ ಹೈಕೋರ್ಟ್‌ ಮೊರೆ ಹೋದ ರಾಜ್ಯಸಭಾ ಸದಸ್ಯ
  • ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸುವಂತೆ ಮನವಿ
ಮನೆ ಶೋಧಿಸಿದ ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ..! ಹೈಕೋರ್ಟ್‌ ಮೊರೆ ಹೋದ ನಟ ಜಗ್ಗೇಶ್‌ title=

Jaggesh tige claw case : ಹುಲಿ ಉಗುರಿಗಾಗಿ ಮನೆ ಶೋಧ ನಡೆಸಿದ ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ ಎಂದು ಘೋಷಿಸುವಂತೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್‌ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಹುಲಿ ಉಗುರಿಗಾಗಿ ಮನೆ ಶೋಧ ಹಿನ್ನೆಲೆ ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸುವಂತೆ ಮನವಿಸಲ್ಲಿದ್ದಾರೆ. ಅಲ್ಲದೆ ತಮಗೆ ನೀಡಿರುವ ನೋಟಿಸ್ ರದ್ದುಪಡಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: ನಟ ದರ್ಶನ್ ಮನೆಯಲ್ಲಿ 8 ಹುಲಿ ಉಗುರಿನ ಪೆಂಡೆಂಟ್ ಪತ್ತೆ..! ಅಸಲಿ ಅಥವಾ ನಕಲಿ..?

ಇನ್ನು ನೋಟಿಸ್‌ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಎಲ್ಲಾ ಆರೋಪಗಳು ಸುಳ್ಳೆಂದು ಸ್ಪಷ್ಟನೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ನಟ ಜಗ್ಗೇಶ್ ಪರ ವಕೀಲರು ಉಲ್ಲೇಖಿಸಿದ್ದಾರೆ. 

ಇನ್ನು ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ ಬಂಧನದಿಂದ ಪ್ರಾರಂಭವಾದ ಹುಲಿ ಉಗುರಿನ ಪ್ರಕರಣ ಸಧ್ಯ ಜಗ್ಗೇಶ್‌ಗೆ ಮುಳುವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಸ್ವತಃ ತಾವು ಧರಿಸಿದ್ದ ಪೆಂಡೆಂಟ್‌ ಹುಲಿ ಉಗುರಿನದ್ದು, ಹುಲಿಯಂತೆ ಇರು ಅಂತ ಅವರ ಅಜ್ಜಿ ನೀಡಿದ್ದಾಗಿ ಸ್ವತಃ ಜಗ್ಗೇಶ್‌ ಹೇಳಿಕೊಂಡಿದ್ದರು.

ಇದನ್ನೂ ಓದಿ: 'ಕ್ಯಾಪ್ಚರ್'ನಲ್ಲಿ ಪ್ರಿಯಾಂಕಾ ಮಗಳಾಗಿ ಕಾಣಿಸಿಕೊಳ್ಳಲಿದ್ದಾರೆ ನಟಿ ಮಾನ್ವಿತಾ

ಇನ್ನು ನಿನ್ನೆ ನಾಲ್ಕು ತಂಡವಾಗಿ ಅರಣ್ಯಾಧಿಕಾರಿಗಳು ಹುಲಿ ಉಗುರಿಗಾಗಿ ಶೋಧ ಕಾರ್ಯ ನಡೆಸಿದ್ದರು. ದರ್ಶನ್‌, ಜಗ್ಗೇಶ್‌, ನಿಖಿಲ್‌ ಕುಮಾರಸ್ವಾಮಿ, ರಾಕ್‌ಲೈನ್‌ ವೆಂಕಟೇಶ್‌ ಮನೆಯಲ್ಲಿ ಸರ್ಚ್‌ ಮಾಡಿದ್ದರು. ಡಿಬಾಸ್‌ ಮನೆಯಲ್ಲಿ 8 ಹುಲಿ ಉಗುರು ಪೆಂಡೆಂಟ್‌ ಪತ್ತೆಯಾಗಿದ್ದು, ಅವು ನಕಲಿ ಎಂದು ಹೇಳಲಾಗಿದೆ.

ಸಧ್ಯ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಮೇಲೆ ನೆಟ್ಟಿಗರು ಕೆಂಡ ಕಾರುತ್ತಿದ್ದಾರೆ. ತಾವಾಗಿಯೇ ಅದು ಹುಲಿ ಉಗುರು ಎಂದು ಕೇಳಿಕೊಂಡಿದ್ದರು ಅವರನ್ನು ಇದೂವರೆಗೂ ಬಂಧಿಸಿಲ್ಲ, ಇದು ಜನಸಾಮಾನ್ಯರಿಗೂ ಮತ್ತು ಸೆಲೆಬ್ರೆಟಿಗಳಿಗೂ ಇರುವ ಕಾನೂನಿಯ ವ್ಯತ್ಯಾಸ ಎಂದು ಸೋಷಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News