Janhvi Kapoor in Ramayana movie: 'ಆದಿಪುರುಷ' ವಿವಾದದ ನಂತರ ಕಳೆದ ವರ್ಷ ನಿರ್ದೇಶಕ ನಿತೇಶ್ ತಿವಾರಿ ಅವರು 'ರಾಮಾಯಣ' ಚಿತ್ರವನ್ನು ಘೋಷಿಸಿದ್ದರು. ಅಂದಿನಿಂದ, ನಿತೇಶ್ ತಿವಾರಿ ಅವರ 'ರಾಮಾಯಣ' ಕಾಸ್ಟಿಂಗ್‌ಗೆ ಸಂಬಂಧಿಸಿದಂತೆ ಮುಖ್ಯಾಂಶಗಳಲ್ಲಿದೆ. ವರದಿಗಳ ಪ್ರಕಾರ, ಚಿತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಜಾನಕಿ ಪಾತ್ರಕ್ಕೆ ದಕ್ಷಿಣದ ನಟಿ ಸಾಯಿ ಪಲ್ಲವಿ ಆಯ್ಕೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಈಗ ರಾಮಾಯಣದಿಂದ ಸಾಯಿ ಪಲ್ಲವಿ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಹೊಸ ನಟಿ ಬರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.


COMMERCIAL BREAK
SCROLL TO CONTINUE READING

ವರದಿಯ ಪ್ರಕಾರ, ನಿತೇಶ್ ತಿವಾರಿ ಅವರ 'ರಾಮಾಯಣ'ದಲ್ಲಿ ಸಾಯಿ ಪಲ್ಲವಿ ಬದಲಿಗೆ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎನ್ನಲಾಗ್ತಿದೆ. 'ರಾಮಾಯಣ'ಕ್ಕೆ ಸಂಬಂಧಿಸಿದ ಈ ಸುದ್ದಿ ಸಾಯಿ ಪಲ್ಲವಿ ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಜಾನ್ವಿ ಕಪೂರ್‌ ಅಭಿಮಾನಿಗಳಲ್ಲಿ ಸಂತೋಷ ತಂದಿದೆ. 


ಇದನ್ನೂ ಓದಿ: ಖ್ಯಾತ ಕ್ರಿಕೆಟರ್ ಜೊತೆ ಲತಾ ಮಂಗೇಶ್ಕರ್‌ ಪ್ರೀತಿ.. ನೇಮ್‌ ಫೇಮ್‌ ಇದ್ರೂ ಮದುವೆಯಾಗದೇ ಇದ್ದದ್ದು ಇದೇ ಕಾರಣಕ್ಕೆ!! 


ಸೀತಾಮಾತೆಯ ಪಾತ್ರಕ್ಕೆ ಜಾನ್ವಿ ಕಪೂರ್ ಪರ್ಫೆಕ್ಟ್‌ ಎಂದು ನಿರ್ಮಾಪಕರು ಭಾವಿಸಿದ್ದಾರೆ ಎನ್ನಲಾಗಿದೆ. ಅದಕ್ಕಾಗಿಯೇ ಅವರು ಜಾನ್ವಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಯಿ ಪಲ್ಲವಿ ನಿರ್ಗಮನ ಮತ್ತು ಜಾನ್ವಿ ಕಪೂರ್ ಪ್ರವೇಶದ ಬಗ್ಗೆ ನಿರ್ಮಾಪಕರು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. 


ರಾಮನ ಪಾತ್ರಕ್ಕೆ ರಣಬೀರ್ ಕಪೂರ್, ವಿಭೀಷಣನ ಪಾತ್ರದಲ್ಲಿ ವಿಜಯ್ ಸೇತುಪತಿ ಮತ್ತು ಹನುಮಾನ್ ಪಾತ್ರಕ್ಕೆ ಸನ್ನಿ ಡಿಯೋಲ್ ಹೆಸರನ್ನು ಚಿತ್ರ ನಿರ್ಮಾಪಕರು ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಯಿ ಪಲ್ಲವಿ ಮೊದಲು ಸೀತೆಯ ಪಾತ್ರಕ್ಕೆ ಆಲಿಯಾ ಭಟ್ ಹೆಸರು ಕೇಳಿ ಬರುತ್ತಿತ್ತು. ರಾವಣನಾಗಿ ಯಶ್‌ ನಟಿಸಬಹುದು ಎನ್ನಲಾಗುತ್ತಿದೆ.


ಇದನ್ನೂ ಓದಿ: ಹೇಮಾ ಮಾಲಿನಿ ಪುತ್ರಿ ದಾಂಪತ್ಯ ಅಂತ್ಯ, ಇಶಾ ಡಿಯೋಲ್-ಭರತ್ ತಖ್ತಾನಿ ಡಿವೋರ್ಸ್!‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.