ʻಕಾಟೇರʼ ಡೈಲಾಗ್‌ಗೆ ತಕರಾರು:ʻKGFʼಗೆ ಯಾಕೆ ಪ್ರಶ್ನಿಸಿಲ್ಲವೆಂದ ಫ್ಯಾನ್ಸ್!

Kaatera: ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ 'ಕಾಟೇರ' ಚಿತ್ರದ ಟ್ರೇಲರ್‌ನಲ್ಲಿರುವ ಸಂಭಾಷಣೆ ಬಗ್ಗೆ ವನ್ಯಜೀವಿ ಸಂರಕ್ಷಣಾ ಒಕ್ಕೂಟ ಬೇಸರ ವ್ಯಕ್ತಪಡಿಸಿ, ಕೂಡಲೇ ಆ ಡೈಲಾಗ್ ತೆಗೆಯುವಂತೆ ಸಿಎಂ ಹಾಗೂ ರಾಜ್ಯಪಾಲರಿಗೆ  ಮನವಿ ಮಾಡಿದ್ದಾರೆ. ಸದ್ಯ ಡಿ-ಬಾಸ್‌ ಫ್ಯಾನ್ಸ್‌ ಇದರ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Written by - Zee Kannada News Desk | Last Updated : Dec 19, 2023, 11:45 AM IST
  • ಕಾಟೇರ' ಚಿತ್ರದ ಟ್ರೇಲರ್‌ ಈಗಾಗಲೇ ರಿಲೀಸ್‌ ಆಗಿದ್ದು, ಇದರಲ್ಲಿರುವ ಡೈಲಾಗ್ಸ್ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.
  • ಟ್ರೇಲರ್‌ನಲ್ಲಿ "ಇವ್ರೆಲ್ಲ ಹಾವುಗಳಿದ್ದಂಗೆ. ವಿಷ ಇಲ್ಲ ಅಂದ್ರೆ ಹಿಡಿಬೇಕು. ವಿಷ ಇದ್ರೆ ಹೊಡಿಬೇಕು" ಡೈಲಾಗ್ ಬಗ್ಗೆ ಈಗ ಚರ್ಚೆ ನಡೀತಿದೆ.
  • ಇದೇ ವಿಚಾರದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಪತ್ರ ಬರೆದು ಮನವಿ ಮಾಡಲಾಗಿದೆ.
ʻಕಾಟೇರʼ ಡೈಲಾಗ್‌ಗೆ ತಕರಾರು:ʻKGFʼಗೆ ಯಾಕೆ ಪ್ರಶ್ನಿಸಿಲ್ಲವೆಂದ ಫ್ಯಾನ್ಸ್! title=

Kaatera Dialogue Issue: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಡೈರೆಕ್ಟರ್‌ ತರುಣ್ ಸುಧೀರ್ ಕಾಂಬೋದ 'ಕಾಟೇರ' ಚಿತ್ರದ ಟ್ರೇಲರ್‌ ಈಗಾಗಲೇ ರಿಲೀಸ್‌ ಆಗಿದ್ದು, ಇದರಲ್ಲಿರುವ ಡೈಲಾಗ್ಸ್ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಸಿನಿಮಾದ ಟ್ರೇಲರ್‌ನಲ್ಲಿ "ಇವ್ರೆಲ್ಲ ಹಾವುಗಳಿದ್ದಂಗೆ. ವಿಷ ಇಲ್ಲ ಅಂದ್ರೆ ಹಿಡಿಬೇಕು. ವಿಷ ಇದ್ರೆ ಹೊಡಿಬೇಕು" ಡೈಲಾಗ್ ಸಂಭಾಷಣೆಗಾರ ಮಾಸ್ತಿ ಉಪ್ಪಾರಳ್ಳಿ ರಚಿಸಿದ್ದು, ಇದೀಗ ಈ ಸಾಲುಗಳ ಬಗ್ಗೆ ಈಗ ಚರ್ಚೆ ನಡೀತಿದೆ. ಹಾವುಗಳನ್ನು ಹೊಡೆದು ಸಾಯಿಸಬೇಕು ಎನ್ನುವ ಡೈಲಾಗ್ ಕೆಟ್ಟ ಸಂದೇಶ ರವಾನೆ ಮಾಡುತ್ತದೆ ಎಂದು ಹೇಳಲಾಗುತ್ತಿದ್ದು, ವನ್ಯಜೀವಿ ಸಂರಕ್ಷಣಾ ಒಕ್ಕೂಟ ತಕ್ಷಣ,  ಆ ಡೈಲಾಗ್ ತೆಗೆಯುವಂತೆ ಸಿಎಂ ಹಾಗೂ ರಾಜ್ಯಪಾಲರಿಗೆ ಮೇಲ್ ಮೂಲಕ ಮನವಿ  ಮಾಡಿದ್ದಾರೆ.

ನಿಕಟಪೂರ್ವ ವನ್ಯಜೀವಿ ಪರಿಪಾಲಕ ಪ್ರಸನ್ನ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ "ಅಳಿವಿನ ಅಂಚಿನಲ್ಲಿರುವ ವಿಷಕಾರಿ ಹಾವುಗಳ ಸಂರಕ್ಷಣೆಗೆ 2021ರಲ್ಲಿ ಕಾನೂನು ರೂಪಿಸಲಾಗಿದೆ. ವಿಷಕಾರಿ ಹಾವುಗಳನ್ನು ಉಳಿಸಿಕೊಂಡು ಹೋಗಬೇಕೇ ಹೊರತು ಹೊಡೆದು, ಕೊಲ್ಲೋಕೆ ಪ್ರಚೋದನೆ ನೀಡಬಾರದು. ಈ ಹೇಳಿಕೆ ಸಿನಿಮಾ ನೋಡುವವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸೆನ್ಸಾರ್ ಮಂಡಳಿ ಈ ಬಗ್ಗೆ ಗಮನ ಹರಿಸಬೇಕಿತ್ತು" ಎಂದು ಹೇಳಿದ್ದಾರೆ. 

ಇದನ್ನೂ ಓದಿ: Prashanth Neel: ʼನನಗೆ ಆ ಸಮಸ್ಯೆ ಇದೆ..ʼ ನಿರ್ದೇಶಕ ಪ್ರಶಾಂತ್‌ ನೀಲ್‌ ಕತ್ತಲಲ್ಲಿ ಸಿನಿಮಾ ಮಾಡೋಕೆ ಕಾರಣ ಇದೆ!

ಇದೇ ವಿಚಾರದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಪತ್ರ ಬರೆದು ಮನವಿ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಒಕ್ಕೂಟದ ಈ ವಾದವನ್ನು ದರ್ಶನ್ ಅಭಿಮಾನಿಗಳು ಒಪ್ಪಲು ಸಿದ್ಧರಿಲ್ಲ. ಈಗಾಗಲೇ ಚಿತ್ರಕ್ಕೆ ಸೆನ್ಸಾರ್ ಆಗಿದ್ದು, ಸಿನಿಮಾದಲ್ಲಿ ಯಾವುದೇ ಪ್ರಾಣಿ ಹಿಂಸೆ ಮಾಡಿರುವುದಿಲ್ಲ. ಅಂತಹ ಸನ್ನಿವೇಶ ಇದ್ದರೆ ಗ್ರಾಫಿಕ್ಸ್ ಮಾಡಿರುತ್ತಾರೆ ಹೊರತು, ಈ ಚಿತ್ರದ ಡೈಲಾಗ್ ಕೇಳಿ ಜನ ಹಾವುಗಳನ್ನು ಹೊಡೆದು ಸಾಯಿಸುತ್ತಾರೆ ಎನ್ನುವುದು ಹಾಸ್ಯಾಸ್ಪದ ಎನ್ನುತ್ತಿದ್ದಾರೆ. ಸಿನಿಮಾದಲ್ಲಿ ಬರುವ ಸನ್ನಿವೇಶಗಳು ಕಾಲ್ಪನಿಕವಾಗಿರುತ್ತಿದ್ದು, ನಮ್ಮ ನೆಚ್ಚಿನ ನಟ ದರ್ಶನ್ ಅವರಿಗೆ ಪ್ರಾಣಿ ಪಕ್ಷಿಗಳ ಮೇಲೆ ಎಷ್ಟು ಕಾಳಜಿ ಮತ್ತು ಪ್ರೀತಿ ಇದೆ ಎನ್ನುವುದು ಇಡೀ ನಾಡಿಗೆ ಗೊತ್ತು. ಚಿಕ್ಕ ವಿಷಯವನ್ನು ದೊಡ್ಡದು ಮಾಡಬೇಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. 

ಇತ್ತ ಡಿ-ಬಾಸ್‌ ಫ್ಯಾನ್ಸ್‌, 'KGF' ಚಿತ್ರದಲ್ಲಿ "ಒಂದು ಆನೆ ಹೊಡೀಬೇಕು" ಎನ್ನುವ ಡೈಲಾಗ್ ಇದ್ದು, ಆಗ ಅದರ ಬಗ್ಗೆ ಯಾಕೆ ಯಾರು ಕೇಳಲಿಲ್ಲ? ಎಂದು ಪ್ರಶ್ನಿಸಿದ್ದಾರೆ. ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸತ್ತಾಗ ಅದರ ಬಗ್ಗೆ ಸಾಕಷ್ಟು ಚರ್ಚೆ ನಡಿದಿದ್ದು, ಆದರೆ ಯಾರೂ ಕೂಡ ಅದರ ಬಗ್ಗೆ ದೂರು ನೀಡಲಿಲ್ಲ. ಈಗ 'ಕಾಟೇರ' ಚಿತ್ರದ ಡೈಲಾಗ್ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಕೇಳುತ್ತಿದ್ದಾರೆ. 'ಕಾಟೇರ' ಚಿತ್ರತಂಡ ಮಾತ್ರ ಈ ಡೈಲಾಗ್ ಚರ್ಚೆ ಬಗ್ಗೆ ಮೌನ ವಹಿಸಿದ್ದು, ಡಿಸೆಂಬರ್ 29ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಚಿತ್ರಕ್ಕೆ ಫೈನಲ್ ಟಚ್ ಕೊಡುವ ಜೊತೆಗೆ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿಯಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News