ಸ್ವರ್ಣಾಂಬಿಕಾ ಪಿಕ್ಚರ್ಸ್ ಬ್ಯಾನರ್ನಡಿ ಧನಲಕ್ಷ್ಮಿ ಬಿಕೆ ʼಕಮಲ್ ಶ್ರೀದೇವಿʼ ಚಿತ್ರವನ್ನು ನಿರ್ಮಿಸಲಿದ್ದಾರೆ. ರಾಜವರ್ದನ್ ಅವರ ಬಾರ್ನ್ ಸ್ವಾಲೋ ಸಹ ನಿರ್ಮಾಣದ ಹೊಣೆ ಹೊತ್ತಿದೆ. ಈ ಚಿತ್ರವನ್ನು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿದೆ.

ವಿ.ಎ.ಸುನೀಲ್ ಕುಮಾರ್ ನಿರ್ದೇಶನದ 'ಕಮಲ್ ಶ್ರೀದೇವಿ' ಚಿತ್ರವು ಈಗಾಗಲೇ ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ನಟ ಕಿಶೋರ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಚಿನ್ ಚೆಲುವರಾಯಸ್ವಾಮಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಚಿವ ಎನ್.ಚಲುವರಾಯಸ್ವಾಮಿ ಈ ಚಿತ್ರವನ್ನು ಪ್ರಸ್ತುತಪಡಿಸಿದ್ದು, ಇದು ತಂದೆ-ಮಗನ ಸಹಯೋಗವಾಗಿದೆ.
ಇದು ಸ್ವರ್ಣಾಂಬಿಕಾ ಪಿಚ್ಚರ್ಸ್ ಬ್ಯಾನರ್ನಡಿ ಬಿ.ಕೆ.ಧನಲಕ್ಷ್ಮೀ ನಿರ್ಮಾಣದ Barnswallow companyಯ ರಾಜವರ್ಧನ್ ಸಹ ನಿರ್ಮಾಣದ ಚಿತ್ರವಾಗಿದೆ. ಈ ಚಿತ್ರಕ್ಕೆ ʼಕಮಲ್ ಶ್ರೀದೇವಿʼ ಇಟ್ಟಿದ್ದರಿಂದ ಇದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡಿತ್ತು. ಏಕೆಂದರೆ ನಟ ಕಮಲ್ ಹಾಸನ್ ಕನ್ನಡ ವಿವಾದದ ಬೆನಲ್ಲೇ ಈ ಸಿನಿಮಾ ಟೈಟಲ್ ಕಾರಣಕ್ಕೆ ಸುದ್ದಿಯಾಗಿತ್ತು. ಈಗಾಗಲೇ ಚಿತ್ರತಂಡವೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಈ ಚಿತ್ರಕ್ಕೂ ಕಮಲ್ ಹಾಸನ್ಗೂ ಯಾವುದೇ ರೀತಿ ಸಂಬಂಧವಿಲ್ಲವೆಂದು ಹೇಳಿದೆ.
ನಟ ಕಿಶೋರ್ ಜೊತೆಗೆ ರಮೇಶ್ ಇಂದಿರಾ, ಸಂಗೀತಾ ಭಟ್ ಸೇರಿದಂತೆ ಅನೇಕ ಪ್ರತಿಭಾವಂತ ತಾರಾಬಳಗವನ್ನು ಹೊಂದಿರುವ ಈ ಚಿತ್ರದ ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನ ಸಹ ನಿರ್ಮಾಪಕ ರಾಜವರ್ಧನ್ ಹೊತ್ತಿಕೊಂಡಿದ್ದಾರೆ. ʼಕಮಲ್ ಶ್ರೀದೇವಿʼ ಅನ್ನೋ ಲೆಂಜಡರಿ ಜೋಡಿಯ ಹೆಸರಿಟ್ಟು, ಸಾಂಕೇತಿಕವಾಗಿ ಹಲವು ಆಯಾಮಗನ್ನ ಸೂಚಿಸೋ ವಿಭಿನ್ನ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡವು ಹಲವು ಪ್ರಶ್ನೆಗಳ ಜೊತೆಗೆ ಕೌತುಕವನ್ನು ಹುಟ್ಟಿಸಿದೆ.
ಇದಲ್ಲದೆ ಟೈಟಲ್ ಕೆಳಗೆ ಅಡಿ ಬರಹವಾಗಿ ಬರೆದಿರುವ ಕೇಸ್ ನಂಬರ್.. ಇದು ನೈಜ ಘಟನೆಯನ್ನಾಧರಿಸಿದ ಸಿನಿಮಾನಾ..? ಒಂದು ಹೆಣ್ಣಿನ ತಲೆಯನ್ನ ಪಾರಿವಾಳಗಳಿಂದ ಡಿಸೈನ್ ಮಾಡಿ, ಮೈಗೆ ಹಾವು, ಗೂಬೆ, ಕಾಗೆ, ಊಸರವಳ್ಳಿ, ನರಿ ಹೀಗೆ ಪ್ರಾಣಿಗಳು ಸುತ್ತಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಪ್ರಸ್ತುತ ನಟ ಕಮಲ್ ಹಾಸನ್ ಹೆಸರು ಕನ್ನಡಿಗರಿಗೆ ಕೆಂಡವಾಗಿರುವ ಹೊತ್ತಲ್ಲಿ ಈ ಟೈಟಲ್ ಏಕೆ ಅನ್ನೋ ಪ್ರಶ್ನೆ ಉದ್ಭವಿಸಿದೆ.
ಸದ್ದಿಲ್ಲದೇ ಸೆಟ್ಟೇರಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗ್ತಿರೋ ʼಕಮಲ್ ಶ್ರೀದೇವಿʼ ಪೋಸ್ಟರ್ ಕಾನ್ಸೆಪ್ಟ್ ಮತ್ತು ಕ್ವಾಲಿಟಿ ನೋಡಿ ಕನ್ನಡ ಉದ್ಯಮದ ಹಲವರು ಹುಬ್ಬೇರಿಸಿದ್ದು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಾಂತ್ರಿಕವಾಗಿ ಈ ಚಿತ್ರತಂಡ ದೊಡ್ಡ ಭರವಸೆ ಮೂಡಿಸಿದ್ದು, ಪೋಸ್ಟರ್ನಷ್ಟೇ ಸಿನಿಮಾನೂ ಗುಣಮಟ್ಟದಲ್ಲಿ ಅಕ್ಕಪಕ್ಕದವರು ತಿರುಗಿ ನೋಡುವಂತಿದೆಯಂತೆ. ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಬಿಡುಗಡೆ ಸಜ್ಜಾಗ್ತಿರೋ ʼಕಮಲ್ ಶ್ರೀದೇವಿʼ ಸದ್ಯ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಇಲ್ಲಿಂದ ಚಿತ್ರದ ಪ್ರಚಾರ ಕಾರ್ಯವನ್ನ ಅಧಿಕೃತವಾಗಿ ಆರಂಭಿಸಿದೆ. ಈ ಚಿತ್ರತಂಡವು ಸುದ್ದಿಗೋಷ್ಠಿ ನಡೆಸಿದ್ದು, ನಾಯಕ ಸಚಿನ್ ಚಲುವರಾಯಸ್ವಾಮಿ, ಕ್ರಿಯೇಟಿವ್ ಹೆಡ್ ಹಾಗೂ ಸಹ ನಿರ್ಮಾಪಕ ರಾಜವರ್ಧನ್, ಹಿರಿಯ ನಟ ಉಮೇಶ್, ಮಿತ್ರ, ರಾಘು ಶಿವಮೊಗ್ಗ, ಅಕ್ಷಿತಾ ಬೋಪಯ್ಯ ನಿರ್ದೇಶಕ ಸುನೀಲ್, ಛಾಯಾಗ್ರಹಕ ನಾಗೇಶ್ ಆಚಾರ್ಯ ಮತ್ತು ಸಂಗೀತ ನಿರ್ದೇಶಕ ಕೀರ್ತನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ʼಕಮಲ್ ಶ್ರೀದೇವಿʼ ಚಿತ್ರಕ್ಕೂ ಕಮಲ್ ಹಾಸನ್ ಮತ್ತು ಶ್ರೀದೇವಿ ಹೆಸರಿಗೂ ಹಾಗೂ ಇತ್ತೀಚಿನ ವಿಚಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಚಿತ್ರತಂಡವು ಸ್ಪಷ್ಟನೆ ನೀಡಿದೆ. ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಿ ಚಿತ್ರದ ವಿಶೇಷತೆಗಳನ್ನ ಹಂಚಿಕೊಂಡ ಚಿತ್ರತಂಡದ ಸದಸ್ಯರು ಪರಸ್ಪರ ಕೆಲಸಗಳನ್ನ ಗೌರವಿಸುವುದರ ಜೊತೆಗೆ ಪ್ರಶಂಸೆ ವ್ಯಕ್ತಪಡಿಸಿದರು. ʼಮಮ್ಮಿʼ ಖ್ಯಾತಿಯ ಲೋಹಿತ್ ಕಥೆಯ ಎಳೆ ಕೊಟ್ರೆ, ʼಗೊಂಬೆಗಳ ಲವ್ʼ ಸಂತೋಷ್ ʼಕಮಲ್ ಶ್ರೀದೇವಿʼ ಟೈಟಲ್ ಕೊಟ್ಟಿದ್ದಾರೆ.. ಇದನ್ನ ತಿಳಿಸಿದ ಕ್ರಿಯೇಟಿವ್ ಹೆಡ್ ರಾಜವರ್ಧನ್, ʼಎರಡು ವರ್ಷದ ಹಿಂದೆ ಯೋಜನೆಗೊಂಡ ಈ ಚಿತ್ರ ಇದೀಗ ಕೊನೆಯ ಹಂತದ ಚಿತ್ರೀಕರಣವನ್ನ ಉಳಿಸಿಕೊಂಡಿದ್ದು, ಬೇರೆ ಎಲ್ಲಾ ಕೆಲಸಗಳನ್ನ ಮುಗಿಸಿಕೊಂಡಿದೆ. ಇದೇ ವರ್ಷ ತೆರೆಗೆ ಬರುವುದಾಗಿʼ ಖಚಿತಪಡಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ