'ಕಣಂಜಾರು'ನ ಪ್ರೇಮ ಶೃಂಗಾರಕ್ಕೆ ಮನಸೋತ ಫ್ಯಾನ್ಸ್

ಕ್ಯಾಚಿ ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ಕಣಂಜಾರು ಸದ್ಯ ರೋಮ್ಯಾಂಟಿಕ್ ಹಾಡಿನ ಮೂಲಕ ಸ್ಯಾಂಡಲ್ ನಲ್ಲಿ ಸಂಚಲನ ಮೂಡಿಸಿದೆ.  

Written by - Zee Kannada News Desk | Last Updated : Aug 27, 2024, 03:16 PM IST
  • ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾ
  • ಪ್ರೇಮ ಶೃಂಗಾರದ ಮೂಲಕ ಗಮನ ಸೆಳೆಯುತ್ತಿದೆ 'ಕಣಂಜಾರು'
  • ಚಿತ್ರೀಕರಣ ಮುಗಿಸಿ ರಿಲೀಸ್ ಗೆ ತಯಾರಿ
'ಕಣಂಜಾರು'ನ ಪ್ರೇಮ ಶೃಂಗಾರಕ್ಕೆ ಮನಸೋತ ಫ್ಯಾನ್ಸ್ title=

'ಕಣಂಜಾರು', 'ಪ್ರೇಮ ಶೃಂಗಾರದ' ಮೂಲಕ ಗಮನ ಸೆಳೆಯುತ್ತಿರುವ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿಯ ಸಿನಿಮಾಗಳಲ್ಲಿ ಒಂದು. ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್.ಬಾಲಚಂದ್ರ ಅವರು ನಿರ್ಮಿಸಿ, ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಸಿನಿಮಾ ಕಣಂಜಾರು. ಕ್ಯಾಚಿ ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ಕಣಂಜಾರು ಸದ್ಯ ರೋಮ್ಯಾಂಟಿಕ್ ಹಾಡಿನ ಮೂಲಕ ಸ್ಯಾಂಡಲ್ ನಲ್ಲಿ ಸಂಚಲನ ಮೂಡಿಸಿದೆ.

ಈಗಾಲೇ ಚಿತ್ರೀಕರಣ ಮುಗಿಸಿ ರಿಲೀಸ್ ಗೆ ತಯಾರಿ ಮಾಡಿಕೊಂಡಿರುವ ಕಣಂಜಾರು ಸದ್ಯ ಪ್ರಮೋಷನ್ ಚಟುವಟಿಕೆಯಲ್ಲಿ ಸಿಕ್ಕಾಪಟ್ಟೆ ಬಿಸಿಯಾಗಿದೆ. ಇದೀಗ ಸಿನಿಮಾ ತಂಡ ಅದ್ಭುತವಾದ ಹಾಡನ್ನು ರಿಲೀಸ್ ಮಾಡಿ  ಸದ್ದು ಮಾಡುತ್ತಿದೆ. 

ಅಂದಹಾಗೆ ಕಣಂಜಾರು ಚಿತ್ರದ ಸುಂದರವಾದ ಹಾಡನ್ನು ಸ್ಯಾಂಡಲ್ವುಡ್ ನ ಅನೇಕ ಗಣ್ಯರು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಕಾಟೇರ, ಭೀಮ ಸೇರಿದಂತೆ ಅನೇಕ ಹಿಟ್ ಸಿನಿಮಾಗಳಿಗೆ ಡೈಲಾಗ್ ಬರೆದಿರುವ ಖ್ಯಾತ ಡೈಲಾಗ್ ರೈಟರ್ ಮಾಸ್ತಿ, ನಟರಾದ ನಕುಲ್ ಗೌಡ, ಶ್ರೇಯಸ್ ಮಂಜು, ವಿಕ್ಕಿ,
ಹಾಗೂ ನಿರ್ದೇಶಕ ಮಹೇಶ್ ಗೌಡ, ನಟಿಯರಾದ ಕಾರುಣ್ಯ ರಾಮ್, ಅನುಷಾ ರೈ ಸೇರಿದಂತೆ ಅನೇಕ ಗಣ್ಯರು ಕಣಂಜಾರು ಸಿನಿಮಾದ ಹಾಡನ್ನು ರಿಲೀಸ್ ಮಾಡಿ ಸಿನಿಮಾಗೆ ಸಾಥ್ ನೀಡಿದರು.  

ಇದನ್ನೂ ಓದಿ: ʻನನ್ನನ್ನು ಹಿಂದಿನಿಂದ ತಬ್ಬಿಕೊಂಡು...ʼ ಸ್ಟಾರ್‌ ನಟನ ವಿರುದ್ಧ ನಟಿ ಗಂಭೀರ ಆರೋಪ ! 

ಕಣಂಜಾರು ಸಿನಿಮಾದಲ್ಲಿ ನಾಯಕ ಆರ್ ಬಾಲಚಂದ್ರನ್ ಜೊತೆ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಅಪೂರ್ವ ಸಿನಿಮಾ ಖ್ಯಾತಿಯ ನಟಿ ಅಪೂರ್ವಾ ನಾಯಕಿಯಾಗಿ ಮಿಂಚಿದ್ದಾರೆ. ಈ ಹಾಡಿನಲ್ಲಿ ಅಪೂರ್ವಾ ಸಿಕ್ಕಪಟ್ಟೆ ಗ್ಲಾಮರಾಗಿ ಕಾಣಿಸಿಕೊಂಡಿದ್ದು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. 'ಪ್ರೇಮ ಶೃಂಗಾರ...'  ಸಾಲುಗಳಿರುವ ಈ ಪ್ರೇಮ ಗೀತೆ ನಿಜಕ್ಕು ರವಿಚಂದ್ರನ್ ಅವರ ಸಿನಿಮಾಗಳ ಹಾಡುಗಳನ್ನು ನೆನಪಿಸುತ್ತಿದೆ.  ಅಂದಹಾಗೆ ಈ ಹಾಡಿಗೆ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆವಿದೆ, ಸಂತೋಷ್ ನಾಯಕ್ ಸಾಹಿತ್ಯ ರಚಿಸಿದ್ದು ಮೋಹನ್ ಮಾಸ್ಟರ್ ಕೊರಿಯೋಗ್ರಫಿವಿದೆ.

ಹಾಡು ರಿಲೀಸ್ ಬಳಿಕ ಮಾತನಾಡಿದ ನಾಯಕ, ನಿರ್ದೇಶಕ ಬಾಲಚಂದ್ರ, ‘ಯೂಟ್ಯೂಬ್ ನಲ್ಲಿ ರಿಲೋಸ್ ಮಾಡೋಣ ಅಂತ ಅಂದುಕೊಂಡಿದ್ದೆ. ಆದರೆ ಕೆಲವರು ಅದ್ಭುತವಾಗಿದೆ ಅಂತ ಹೇಳಿದ್ರು ಹಾಗಾಗಿ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಿದ್ದೀವಿ. ನನ್ನನ್ನು ಹೊಸಬ ಅಂತ ಅಂದುಕೊಳ್ಳದೆ ನಾಯಕಿ ಅಪೂರ್ವಾ ಕೂಡ ಒಪ್ಪಿಕೊಂಡು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು ತುಂಬಾ ಸಹಾಯ ಮಾಡಿದ್ದಾರೆ. ಇತ್ತೀಚಿಗಷ್ಟೇ ತರುಣ್ ಸುಧೀರ್ ಮತ್ತು ಸೋನಾಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಈ ಹಾಡನ್ನು ಅರ್ಪಿಸುತ್ತಿದ್ದೇನೆ' ಎಂದರು.

ನಾಯಕಿ ಅಪೂರ್ವ ಮಾತನಾಡಿ, 'ಸಿನಿಮಾದ ಟೀಸರ್ ರಿಲೀಸ್ ಆದ್ಮೇಲೆ ಅದ್ಭುತವಾದ ರೆಸ್ಪಾನ್ಸ್ ಬಂದಿದೆ. ಈ ಸಿನಿಮಾದ ಕಥೆ ತುಂಬಾ ಚೆನ್ನಾಗಿದೆ. ಹಾಗಾಗಿ ಈ ಸಿನಿಮಾವನ್ನು ನಾನು ಒಪ್ಪಿಕೊಂಡೆ. ನಾನು ಮೊದಲು ಕಥೆಗೆ ಆದ್ಯತೆ ನೀಡುತ್ತೇನೆ. ಜನ ಸಿನಿಮಾ ನೋಡಲ್ಲ ಅಂತ ಹೇಳ್ತಾರೆ ಆದ್ರೆ ಒಳ್ಳೆ ಸಿನಿಮಾ ಬಂದ್ರೆ ಖಂಡಿತ ಜನ ಥಿಯೇಟರಿಗೆ ಬರ್ತಾರೆ. ಈ ಸಿನಿಮಾ ಕೂಡ ಅದ್ಭುತವಾಗಿ ಮೂಡಿ ಬಂದಿದೆ. ದಯವಿಟ್ಟು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ' ಎಂದರು. ಸದಿಯ ಟೀಸರ್ ಮತ್ತು ಹಾಡಿನ ಮೂಲಕ ಸದ್ದು ಮಾಡುತ್ತಿರುವ ಕಣಂಜಾರು ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ: ಮೋಹನ್‌ ಬಾಬು ಮೊಮ್ಮಗ ಚಿತ್ರರಂಗಕ್ಕೆ ಎಂಟ್ರಿ.. ಮೊದಲ ಚಿತ್ರದ ಫಸ್ಟ್‌ ಲುಕ್‌ ಗೆ ಫ್ಯಾನ್ಸ್‌ ಫಿದಾ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News