ಕನ್ನಡದ ಜನಪ್ರಿಯ ನಟಿ ಬಂಧನ.. ಚಿನ್ನ ಕಳ್ಳ ಸಾಗಣೆ ಆರೋಪದಡಿ ಅರೆಸ್ಟ್‌!

Ranya Rao: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದಡಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡದ ಜನಪ್ರಿಯ ನಟಿಯನ್ನು ಬಂಧಿಸಲಾಗಿದೆ. 

Written by - Chetana Devarmani | Last Updated : Mar 5, 2025, 09:45 AM IST
  • ದುಬೈನಿಂದ ಚಿನ್ನ ಕಳ್ಳಸಾಗಣೆ ಆರೋಪ
  • ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರೆಸ್ಟ್
  • ಕನ್ನಡದ ಜನಪ್ರಿಯ ನಟಿಯ‌ ಬಂಧನ
ಕನ್ನಡದ ಜನಪ್ರಿಯ ನಟಿ ಬಂಧನ.. ಚಿನ್ನ ಕಳ್ಳ ಸಾಗಣೆ ಆರೋಪದಡಿ ಅರೆಸ್ಟ್‌!
Ranya Rao

ದುಬೈನಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದಡಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ.  ಚಿನ್ನದ ಕಳ್ಳಸಾಗಣೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಪ್ರಿಯ ಕನ್ನಡ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದೆ. ಸೋಮವಾರ ರಾತ್ರಿ ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಆಗಮಿಸಿದಾಗ ಅಧಿಕಾರಿಗಳು ಬಟ್ಟೆಯೊಳಗೆ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದು, ಅವರನ್ನು ಬಂಧಿಸಲಾಗಿದೆ.

Add Zee News as a Preferred Source

ರನ್ಯಾ ರಾವ್ ಅವರ ಆಗಾಗ್ಗೆ ದುಬೈಗೆ ಭೇಟಿ ನೀಡುತ್ತಿದ್ದರೆ. ಹೀಗಾಗಿ ಡಿಆರ್‌ಐ ಅಧಿಕಾರಿಗಳು ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ವರದಿಗಳ ಪ್ರಕಾರ, ರನ್ಯಾ ರಾವ್ ಕೇವಲ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ಇದು ಡಿಆರ್‌ಐ ಅಧಿಕಾರಿಗಳಲ್ಲಿ ಅನುಮಾನಗಳನ್ನು ಹುಟ್ಟುಹಾಕಿದೆ. ಗುಪ್ತಚರ ಮಾಹಿತಿಯ ನಂತರ, ಅಧಿಕಾರಿಗಳು ಬೆಂಗಳೂರಿನಲ್ಲಿ ಇಳಿದಾಗ ರನ್ಯಾ ರಾವ್ ಅವರನ್ನು ಪರಿಶೀಲಿಸಿದ್ದಾರೆ, ಅವರ ಬಳಿ 14.8 ಕೆಜಿ ಚಿನ್ನ ದೊರೆತಿದೆ ಎನ್ನಲಾಗಿದ್ದು, ಅರೆಸ್ಟ್‌ ಮಾಡಿದ್ದಾರೆ. 

ಇದನ್ನೂ ಓದಿ : ಶೀಘ್ರದಲ್ಲೇ ನಟ ಧನುಷ್‌ ಎರಡನೇ ಮದುವೆ?! ಈ ಖ್ಯಾತ ನಟಿಯ ಕೈ ಹಿಡಿಯಲಿದ್ದಾರೆ ಕಾಲಿವುಡ್‌ ಸ್ಟಾರ್..

ರನ್ಯಾ ಹೆಚ್ಚಿನ ಚಿನ್ನವನ್ನು ಧರಿಸಿದ್ದರು. ಅಲ್ಲದೇ ತನ್ನ ಉಡುಪಿನೊಳಗೆ ಚಿನ್ನದ ಬಾರ್‌ಗಳನ್ನು ಮರೆಮಾಡಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸುತ್ತಿವೆ.

ರನ್ಯಾ ರಾವ್ ಕರ್ನಾಟಕದಲ್ಲಿ ಡಿಜಿಪಿ ಹುದ್ದೆಯಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿಯ ಮಗಳು. ಆಕೆಯ ತಂದೆ ಅಥವಾ ಯಾವುದೇ ಸಿಬ್ಬಂದಿ ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ತಿಳಿದೋ ಅಥವಾ ತಿಳಿಯದೆಯೋ ಭಾಗಿಯಾಗಿದ್ದಾರೆಯೇ ಎಂದು ಅಧಿಕಾರಿಗಳು ಈಗ ತನಿಖೆ ನಡೆಸುತ್ತಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದ ನಂತರ ರನ್ಯಾ ತನ್ನನ್ನು ಡಿಜಿಪಿ ಮಗಳು ಎಂದು ಗುರುತಿಸಿಕೊಳ್ಳುತ್ತಿದ್ದರು. ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ತನ್ನ ಮನೆಗೆ ಕರೆದೊಯ್ಯಲು ಕರೆಸಿಕೊಳ್ಳುತ್ತಿದ್ದರು. ಬಹುಶಃ ಸಂಪೂರ್ಣ ಪರಿಶೀಲನೆಯನ್ನು ತಪ್ಪಿಸಲು ಇದನ್ನು ನೆಪವಾಗಿ ಬಳಸಿಕೊಳ್ಳುತ್ತಿದ್ದರು ಎಂದು ಆರಂಭಿಕ ವಿಚಾರಣೆಯಲ್ಲಿ ತಿಳಿದುಬಂದಿದೆ ಎನ್ನಲಾಗುತ್ತಿದೆ.  

ರನ್ಯಾಳನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಡಿಆರ್‌ಐ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು. ಪ್ರಕರಣದ ಕುರಿತು ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ರನ್ಯಾ ರಾವ್ ಯಾರು?

ರನ್ಯಾ ರಾವ್ ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿಯರಲ್ಲಿ ಒಬ್ಬರು. ಸುದೀಪ್ ಜೊತೆ ಮಾಣಿಕ್ಯ ಚಿತ್ರದಲ್ಲಿ ನಟಿಸಿದ್ದಾರೆ. ದಕ್ಷಿಣ ಭಾರತದ ಬೇರೆ ಭಾಷೆಗಳಲ್ಲಿಯೂ ರನ್ಯಾ ಅಭಿನಯಿಸಿದ್ದು, ಖ್ಯಾತಿ ಗಳಿಸಿದ್ದಾರೆ. 

ಇದನ್ನೂ ಓದಿ : ʼದೀಪಿಕಾ ನನಗೆ ದ್ರೋಹ ಬಗೆದಳುʼ.. ಕೊನೆಗೂ ವಿಚ್ಚೇದನದ ಬಗ್ಗೆ ಮೌನ ಮುರಿದ ನಟ! ಮಗು ಜನಿಸಿದ 9 ತಿಂಗಳಲ್ಲೇ ಶಾಕಿಂಗ್‌ ನಿರ್ಧಾರ..

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News