ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಬಿಡುಗಡೆಯಾದ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಬಾಕ್ಸಾ ಆಫೀಸ್ ಧೂಳಿಪಟ ಮಾಡಿರುವ ಈ ಕನ್ನಡ ಸಿನಿಮಾ ಹಲವು ದಾಖಲೆಗಳನ್ನು ನಿರ್ಮಿಸಿದೆ. ಸೆಪ್ಟೆಂಬರ್ 30ರಂದು ಕೇವಲ ಕನ್ನಡ ಭಾಷೆಯಲ್ಲಿ ರಿಲೀಸ್ ಆಗಿದ್ದ ‘ಕಾಂತಾರ’ ಬಳಿಕ ಹಲವು ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಸಿನಿಮಾವಾಗಿಯೂ ಯಶಸ್ವಿಯಾಗಿದೆ.


COMMERCIAL BREAK
SCROLL TO CONTINUE READING

‘ಕಾಂತಾರ’ ಸಿನಿಮಾ ವೀಕ್ಷಿಸಿದ ಭಾರತೀಯ ಚಿತ್ರರಂಗದ ದಿಗ್ಗಜರು ರಿಷಬ್ ಶೆಟ್ಟಿಗೆ ಸಲಾಂ ಹೇಳಿದ್ದಾರೆ. ಕನ್ನಡ ಚಿತ್ರರಂಗಕ್ಕೆ ‘ಕಾಂತಾರ’ ಸಿನಿಮಾ ಮತ್ತೊಂದು ಮೈಲುಗಲ್ಲು ಸೃಷ್ಟಿಸಿದೆ. ಚಿತ್ರದ ಕೊನೆಯ 20 ನಿಮಿಷಗಳ ಬಗ್ಗೆಯೇ ಪ್ರತಿಯೊಬ್ಬರೂ ಮಾತನಾಡುವಂತಾಗಿದೆ. ‘ಕಾಂತಾರ’ ಕ್ಲೈಮ್ಯಾಕ್ಸ್ ಸಿನಿಮಾ ವೀಕ್ಷಿಸಿದ ಪ್ರತಿಯೊಬ್ಬರ ಮೈನವಿರೇಳಿಸುವಂತೆ ಮಾಡಿದೆ.


ಇದನ್ನೂ ಓದಿ: Banaras Movie Review: 'ಮುಕ್ತ'ವಾಗಿ ಬದುಕು ಕಟ್ಟಿಕೊಳ್ಳೋಕೆ 'ಬನಾರಸ್ 'ಗೆ ಹಾರಿದ ಜೈದ್ ಖಾನ್..!


ಸಮಂತಾ ಡೆಡಿಕೇಷನ್ ನೋಡಿ ಬೆರಗಾದ ಹಾಲಿವುಡ್ ಸಾಹಸ ನಿರ್ದೇಶಕ ಯಾನಿಕ್ ಬೆನ್!


ಎಬಿಡಿ ಭೇಟಿಯಾಗಿರುವ ಸಂತಸ ಹಂಚಿಕೊಂಡಿರುವ ರಿಷಬ್ ಶೆಟ್ಟಿ ವಿಡಿಯೋ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ. ‘ಇದು ಪಂದ್ಯ, ನಾನು ಇಂದು ನಿಜವಾದ 360ಯನ್ನು ಭೇಟಿಯಾದೆ. ಸೂಪರ್ ಹೀರೋ ಮತ್ತೆ ತಮ್ಮ ಮೂಲಸ್ಥಾನಕ್ಕೆ ಮರಳಿದ್ದಾರೆ. ನಮ್ಮ ಬೆಂಗಳೂರು’ ಎಂದು ಟ್ವೀಟ್ ಮಾಡಿದ್ದಾರೆ.


ಈ ವಿಡಿಯೋ ನೋಡಿದ ಆರ್‍ಸಿಬಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ರಿಶಬ್ ಶೆಟ್ಟಿ ಮತ್ತು ಹೊಂಬಾಳೆ ಪಿಲ್ಸ್ಂ ಜೊತೆ ಸೇರಿ ಎಬಿಡಿ ಕಂಬಳದ ಕೋಣ ಒಡಿಸ್ತಾರಾ ಅಂತಾ ಹಲವು ಪ್ರಶ್ನಿಸಿದ್ದಾರೆ. ಒಟ್ನಲ್ಲಿ ‘ಕಾಂತಾರ’ ಸಿನಿಮಾ ತಂಡದ ಜೊತೆಗೆ ಎಬಿಡಿ ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಹೆಚ್ಚಿಸಿದೆ.    


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.