Kantara Rishabh Shetty National Award: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮದಲ್ಲಿ ಇಡೀ ವಿಶ್ವವೇ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿದ್ದ ಕನ್ನಡದ ಸೂಪರ್ ಡೂಪರ್ ಹಿಟ್ "ಕಾಂತಾರ" ಸಿನಿಮಾ ಎರಡು ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.  ಈ ಸಂದರ್ಭದಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ಸಿನಿಮಾ ನಿರ್ಮಾಣದಲ್ಲಿ ಎದುರಾದ ಸವಾಲುಗಳನ್ನು ನೆನೆದು ಭಾವುಕರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಹೌದು, 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2022 ರಲ್ಲಿ 'ಕಾಂತಾರ' ದೊಡ್ಡ ಯಶಸ್ಸನ್ನು ಗಳಿಸಿದೆ. ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. "ಕಾಂತಾರ" ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿರುವುದಷ್ಟೇ ಅಲ್ಲದೆ, ನಿರ್ದೇಶನವನ್ನೂ ಮಾಡಿರುವ ರಿಷಬ್ ಶೆಟ್ಟಿ, ಚಿತ್ರಕ್ಕೆ ಅತ್ಯುತ್ತಮ ಮನೋರಂಜನಾ ಚಿತ್ರ ಹಾಗೂ ತಮ್ಮ ಅದ್ಭುತ ಅಮೋಘ ಅಭಿನಯಕ್ಕಾಗಿ "ಅತ್ಯುತ್ತಮ ನಟ" ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಿಷಬ್ ಶೆಟ್ಟಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ. 


ಇದನ್ನೂ ಓದಿ- ಇಡೀ ವಿಶ್ವವೇ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ್ದ "ಕಾಂತಾರ", "ಕೆ‌ಜಿ‌ಎಫ್" ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಗರಿ


ಈ ವಿಶೇಷ ಸಂದರ್ಭದಲ್ಲಿ "ಕಾಂತಾರ" ಯಶಸ್ಸಿನ ಬಗ್ಗೆ ಮಾತನಾಡಿದ ಚಿತ್ರದ ನಾಯಕ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ‘ಕಾಂತಾರ’ ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅತ್ಯುತ್ತಮ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಈ ಜಯ ಕೇವಲ ನನ್ನೊಬ್ಬನಿಂದ ಸಾಧ್ಯವಿಲ್ಲ. ಇದು ಇಡೀ ತಂಡದ ಯಶಸ್ಸು ಎಂದರು. 


ಕಾಂತಾರ ಮೇಕಿಂಗ್ ಜರ್ನಿ: 
ಕಾಂತಾರ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಬಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸುವ ಭರದಲ್ಲಿ ಈ ಸಿನಿಮಾ ನಿರ್ಮಾಣಕ್ಕೆ ಎದುರಾದ ಸವಾಲುಗಳನ್ನೂ ನೆನಪಿಸಿಕೊಂಡಿರುವ ರಿಷಬ್ ಶೆಟ್ಟಿ, ಈ ಸಿನಿಮಾ ಮಾಡಿದ ಅನುಭವ ಹೇಗಿತ್ತು ಎಂಬುದನ್ನೂ ಹೇಳಿದ್ದಾರೆ. 


ಇದನ್ನೂ ಓದಿ- ಸಮಂತಾ ಜೊತೆ ಡಿವೋರ್ಸ್‌ ಆಗಿದ್ದು ಇದೇ ಕಾರಣಕ್ಕೆ...! ದೂರವಾದ ಕುರಿತು ಕೊನೆಗೂ ಮೌನ ಮುರಿದ ನಾಗ ಚೈತನ್ಯ!


"ಕಾಂತಾರ" ನನ್ನ ಉತ್ಸಾಹದಿಂದ ಸೃಷ್ಟಿಯಾದ ಕಥೆ, ಇದು ನನ್ನ ತವರೂರಿನ ನನ್ನ ವೈಯಕ್ತಿಕ ಕಥೆಯಾಗಿದೆ. ರಾಷ್ಟ್ರಪ್ರಶಸ್ತಿ ಗೆಲ್ಲುವುದು ಸಾಮಾನ್ಯ ವಿಷಯವಲ್ಲ.  ಕಾಂತಾರ ಯಶಸ್ಸು ಮತ್ತು ಪ್ರೇಕ್ಷಕರ ಬೆಂಬಲವು ದೈವದ ನಿಜವಾದ ಆಶೀರ್ವಾದವಾಗಿದೆ. ಈ ಚಿತ್ರದ ಮೂಲಕ ಪ್ರತಿಯೊಂದು ಪ್ರದೇಶದ ಜನರು ತಮ್ಮ ಬೇರುಗಳೊಂದಿಗೆ ಸಂಪರ್ಕ ಸಾಧಿಸಬಹುದು, ಇದು ಪ್ರಾದೇಶಿಕ ಕಥೆಗಳು ಸಾರ್ವತ್ರಿಕವಾಗಿವೆ ಎಂದು ತೋರಿಸುತ್ತದೆ. ಇಲ್ಲಿಯವರೆಗಿನ ನನ್ನ ಅತ್ಯಂತ ದುಬಾರಿ ಚಿತ್ರವಾಗಿರುವ ಈ ವಿಶಿಷ್ಟ ಚಿತ್ರದಲ್ಲಿ ಯಾವಾಗಲೂ ನನ್ನೊಂದಿಗೆ ಇರುವ ಹೊಂಬಳೆ ಅವರಂತಹ ಪಾಲುದಾರರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಭಾವುಕರಾಗಿ ನುಡಿದಿದ್ದಾರೆ. 


ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ರಾಷ್ಟ್ರ ಪ್ರಶಸ್ತಿ ಸ್ವೀಕರಿಸುವಾಗಲೂ ಪಂಚೆ ಧರಿಸಿ, ದಕ್ಷಿಣ ಭಾರತದ ಸಾಂಪ್ರದಾಯಿಕ ಗೆಟಪ್​ನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.