Karataka Damanaka: ಮುಕ್ತಾಯ ಹಂತದಲ್ಲಿ ಶಿವಣ್ಣ-ಪ್ರಭುದೇವರ ‘ಕರಟಕ ದಮನಕ’ ಚಿತ್ರೀಕರಣ

Karataka Damanaka: ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ತಿಳಿಸಿದರು.

Written by - YASHODHA POOJARI | Edited by - Puttaraj K Alur | Last Updated : Aug 24, 2023, 02:40 PM IST
  • ಮುಕ್ತಾಯ ಹಂತದಲ್ಲಿದೆ ಶಿವರಾಜಕುಮಾರ್-ಪ್ರಭುದೇವರ ‘ಕರಟಕ ದಮನಕ’ ಚಿತ್ರೀಕರಣ
  • ಶೇ.90ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದೆ ಎಂದು ನಿರ್ದೇಶಕ ಯೋಗರಾಜ್ ಭಟ್
  • ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ & ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪ್ರಮುಖರು ನಟಿಸಿರುವ ಚಿತ್ರ
Karataka Damanaka: ಮುಕ್ತಾಯ ಹಂತದಲ್ಲಿ ಶಿವಣ್ಣ-ಪ್ರಭುದೇವರ ‘ಕರಟಕ ದಮನಕ’ ಚಿತ್ರೀಕರಣ title=
ಮುಕ್ತಾಯ ಹಂತದಲ್ಲಿ ‘ಕರಟಕ ದಮನಕ’ ಚಿತ್ರೀಕರಣ

ಬೆಂಗಳೂರು: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಅಭಿನಯದ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಹೊಸ ಅಪ್‍ಡೇಟ್‍ ನೀಡಿದೆ.  

ಇಂದಿಗೆ ಈ ಚಿತ್ರ ಪ್ರಾರಂಭವಾಗಿ 1 ವರ್ಷವಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, "ಕರಟಕ ದಮನಕ" ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ "ಕರಟಕ ದಮನಕ" ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್‍ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ

ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ 7 ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್‍ಲೈನ್ ವೆಂಕಟೇಶ್ ಸಹ ಈ ಚಿತ್ರದಲ್ಲಿ ನಟಿಸಿದ್ದೇವೆ. ಶೇ.90ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು.

ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ...!

ರಾಕ್‍ಲೈನ್ ಪ್ರೊಡಕ್ಷನ್ಸ್ ನನ್ನ ಕುಟುಂಬವಿದ್ದಂತೆ. ಇನ್ನು ಯೋಗರಾಜ್ ಭಟ್ ಅವರ ಚಿತ್ರಗಳು ನನಗೆ ಇಷ್ಟ. ಅವರ ಎಷ್ಟೋ ಚಿತ್ರಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿದ್ದೇನೆ. ಅವರ ನಿರ್ದೇಶನದಲ್ಲಿ ನಟಿಸುತ್ತಿರುವುದು ಸಂತೋಷ. ಗೆಳೆಯ ಪ್ರಭುದೇವ ಹಾಗೂ ನಾನು ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದೇವೆ. ಈ ಚಿತ್ರದಲ್ಲೂ ನಾವಿಬ್ಬರು ಸ್ನೇಹಿತರಾಗಿಯೇ ನಟಿಸುತ್ತಿದ್ದೇವೆ ಎಂದು ಶಿವರಾಜಕುಮಾರ್ ತಿಳಿಸಿದರು.

ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದು ಪ್ರಭುದೇವ ಮೆಚ್ಚುಗೆ ವ್ಯಕ್ತಪಡಿಸಿದರು. ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್, ಹಿರಿಯ ಕಲಾವಿದರಾದ  ಮುಖ್ಯಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ತಿಳಿಸಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News