ಕೆಂಡ ಟ್ರೈಲರ್ ಬಿಡುಗಡೆ : ಹಿಂದೆದೂ ಕಂಡು ಕೇಳರಿಯದ ಕಥೆಯ ಸುಳಿವು ನೀಡಿದ ಚಿತ್ರ ತಂಡ

ಪತ್ರಿಕಾ ಗೋಷ್ಠಿಯ ಮೂಲಕ ಕೆಂಡದ ಟ್ರೈಲರ್ ಅನ್ನು ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್ ಬಿಡುಗಡೆ ಮಾಡಿದ್ದಾರೆ.ಇದೇ ಹೊತ್ತಿನಲ್ಲಿ ಕೆಂಡದ ಬಗೆಗಿನ ಒಂದಷ್ಟು ಬೆರಗಿನ ವಿಚಾರಗಳನ್ನು ಚಿತ್ರತಂಡ ಹಂಚಿಕೊಂಡಿದೆ.  

Written by - Ranjitha R K | Last Updated : Jul 11, 2024, 01:32 PM IST
  • ಕೆಂಡ ಚಿತ್ರ ಇದೇ ತಿಂಗಳ 26ರಂದು ಬಿಡುಗಡೆಗೊಳ್ಳಲಿದೆ.
  • ಚಿತ್ರ ಅಂತಾರಾಷ್ಟ್ರೀಯ ಸಿನಿಮಾ ಫೆಸ್ಟಿವಲ್‍ಗಳಲ್ಲಿ ಬಿಡುಗಡೆ
  • ಟ್ರೈಲರ್ ಬಿಡುಗಡೆ ಮಾಡಿದ ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್
ಕೆಂಡ ಟ್ರೈಲರ್ ಬಿಡುಗಡೆ : ಹಿಂದೆದೂ ಕಂಡು ಕೇಳರಿಯದ ಕಥೆಯ ಸುಳಿವು ನೀಡಿದ ಚಿತ್ರ ತಂಡ  title=

ಬೆಂಗಳೂರು : ಸಹದೇವ್ ಕೆಲವಡಿ ನಿರ್ದೇಶನದ ಕೆಂಡ ಚಿತ್ರ ಇದೇ ತಿಂಗಳ 26ರಂದು ಬಿಡುಗಡೆಗೊಳ್ಳಲಿದೆ.ಈಗಾಗಲೇ ಈ ಚಿತ್ರ ಅಂತಾರಾಷ್ಟ್ರೀಯ ಸಿನಿಮಾ ಫೆಸ್ಟಿವಲ್‍ಗಳಲ್ಲಿ ಬಿಡುಗಡೆಗೊಂಡಿದೆ.ಹಲವಾರು ಪ್ರಶಸ್ತಿಗಳನ್ನೂ ಪಡೆದುಕೊಂಡಿದೆ.ಇಷ್ಟೆಲ್ಲ ಖುಷಿಯ ಪುಳಕಗಳೊಂದಿಗೆ ಚಿತ್ರತಂಡವೀಗ ಪ್ರೇಕ್ಷಕರ ಮುಂದೆ ಪ್ರತ್ಯಕ್ಷವಾಗಿದೆ. 

ಪತ್ರಿಕಾ ಗೋಷ್ಠಿಯ ಮೂಲಕ ಕೆಂಡದ ಟ್ರೈಲರ್ ಅನ್ನು ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್ ಬಿಡುಗಡೆ ಮಾಡಿದ್ದಾರೆ.ಇದೇ ಹೊತ್ತಿನಲ್ಲಿ ಕೆಂಡದ ಬಗೆಗಿನ ಒಂದಷ್ಟು ಬೆರಗಿನ ವಿಚಾರಗಳನ್ನು ಚಿತ್ರತಂಡ ಹಂಚಿಕೊಂಡಿದೆ.

ಇದನ್ನೂ ಓದಿ : 'ಈ' ಖ್ಯಾತ ಟೀ ಇಂಡಿಯಾ ಕ್ರಿಕೆಟಿಗನನ್ನು ಹುಚ್ಚಿಯಂತೆ ಪ್ರೀತಿಸಿದ್ದರಂತೆ ನಟಿ ಮಾಧುರಿ ದೀಕ್ಷಿತ್! ಆತ ಬೇರಾರೂ ಅಲ್ಲ..

ಸೂಕ್ಷ್ಮ ಮನಃಸ್ಥಿತಿಯ ನಿರ್ದೇಶಕನ ಕೈಗೆ ಭೂಗತ ಜಗತ್ತಿನ ಕಥೆ ಸಿಕ್ಕರೆ,ಅಲ್ಲಿ ಬೇರೊಂದು ಆಯಾಮದ ದೃಷ್ಯಕಾವ್ಯ ರೂಪುಗೊಳ್ಳೋದು ಖಚಿತ. ಕೆಂಡದಲ್ಲಿರೋದೂ ಕೂಡಾ ಅಂಥಾದ್ದೇ ರೌಡಿಸಮ್ಮಿನ ಸುತ್ತ ಜರುಗುವ ಕಥನ. ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡೋ ಯುವಕನೋರ್ವ, ಪರಿಸ್ಥಿತಿಗಳ ಸೆಳವಿಗೆ ಸಿಕ್ಕು ಭೂಗತದ ತೆಕ್ಕೆಗೆ ಬೀಳುವ ಕಥೆ ಇಲ್ಲಿದೆ.ಹಾಗಂತ ಅದು ಸಿದ್ಧ ಸೂತ್ರಗಳ ಸುತ್ತ ಗಿರಕಿ ಹೊಡೆಯುವಂಥಾದ್ದಲ್ಲ. 

ಕೈಗೆ, ಮೈ ಮನಸಿಗೆ ಮೆತ್ತಿಕೊಂಡ ರಕ್ತದ ಕಲೆಗಳನ್ನ ಕಲಾತ್ಮಕವಾಗಿ ತೋರಿಸಲು ಸಾಧ್ಯವಾ? ಸುಡುವ ಕ್ರೌರ್ಯವನ್ನು ಸೂಕ್ಷ್ಮ ಸಂವೇದನೆಯ ಒಳಗಣ್ಣಿನಿಂದ ನೋಡಲು ಹೇಗೆ ಸಾಧ್ಯ? ಇದು ಸಿನಿಮಾಸಕ್ತರನ್ನು ಕಾಡುವ ಗೊಂದಲ ಬೆರೆತ ಅಚ್ಚರಿ. ಅಂಥಾ ಅಚ್ಚರಿಗಳೇ ಬೆರಗುಗೊಳ್ಳುವಂತೆ ಕೆಂಡ ಚಿತ್ರ ಮೂಡಿ ಬಂದಿದೆ ಎಂಬ ಮುನ್ಸೂಚನೆ ಈ ಟ್ರೈಲರಿನಲ್ಲಿ ಸ್ಪಷ್ಟವಾಗಿ ಸಿಕ್ಕಿಬಿಟ್ಟಿದೆ.

ಇದನ್ನೂ ಓದಿ : ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು!

ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ದೇಶಕ ಸಹದೇವ್ ಕೆಲವಡಿ, ನಿರ್ಮಾಪಕಿ ರೂಪಾ ರಾವ್, ಸಂಗೀತ ನಿರ್ದೇಶಕ ರಿತ್ವಿಕ್ ಕಾಯ್ಕಿಣಿ, ರಂಗಭೂಮಿಯಿಂದ ಬಂದಿರುವ, ಈ ಚಿತ್ರದ ನಾಯಕ ಬಿ.ವಿ ಭರತ್, ಪ್ರಣವ್ ಶ್ರೀಧರ್, ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್, ಸತೀಶ್, ಫೃಥ್ವಿ, ದೀಪ್ತಿ ಮುಂತಾದವರು ಪಾಲ್ಗೊಂಡಿದ್ದರು. 
ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ.ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕೆಂಡ ಶೀಘ್ರದಲ್ಲೇ ತೆರೆಗಾಣಲಿದೆ.ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ, ರೇಖಾ ಕೂಡ್ಲಿಗಿ, ಪ್ರಭಾಕರ್ ಜೋಶಿ ಮುಂತಾದವರ ತಾರಾಗಣವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

 

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News