‘ಗರುಡ ಗಮನ ವೃಷಭ ವಾಹನ’ಕ್ಕೆ ಕಿಚ್ಚನ ಮೆಚ್ಚುಗೆ.. ಸುದೀಪ್‌ ಮನಗೆದ್ದ ಆ ವಿಚಾರವೇನು?

Kiccha Sudeep: ರಿಷಬ್​ ಶೆಟ್ಟಿ ಮತ್ತು ರಾಜ್​ ಬಿ. ಶೆಟ್ಟಿ ಅವರ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾಗೆ ನಟ ಕಿಚ್ಚ ಸುದೀಪ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದ ಕುರಿತು ಅಭಿನಯ ಚಕ್ರವರ್ತಿ ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ. 

Written by - Chetana Devarmani | Last Updated : May 6, 2022, 04:57 PM IST
  • ರಿಷಬ್​ ಶೆಟ್ಟಿ ಮತ್ತು ರಾಜ್​ ಬಿ. ಶೆಟ್ಟಿ ಅವರ ನಟನೆಯ ‘ಗರುಡ ಗಮನ ವೃಷಭ ವಾಹನ’
  • ‘ಗರುಡ ಗಮನ ವೃಷಭ ವಾಹನ’ ಸಿನಿಮಾಗೆ ನಟ ಕಿಚ್ಚ ಸುದೀಪ್​ ಮೆಚ್ಚುಗೆ
  • ಸಿನಿಮಾದಲ್ಲಿ ಸುದೀಪ್‌ ಮನಗೆದ್ದ ಆ ವಿಚಾರವೇನು?
‘ಗರುಡ ಗಮನ ವೃಷಭ ವಾಹನ’ಕ್ಕೆ ಕಿಚ್ಚನ  ಮೆಚ್ಚುಗೆ..  ಸುದೀಪ್‌ ಮನಗೆದ್ದ ಆ ವಿಚಾರವೇನು? title=
ಗರುಡ ಗಮನ ವೃಷಭ ವಾಹನ

ರಿಷಬ್​ ಶೆಟ್ಟಿ ಮತ್ತು ರಾಜ್​ ಬಿ. ಶೆಟ್ಟಿ ಅವರ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾಗೆ ನಟ ಕಿಚ್ಚ ಸುದೀಪ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದ ಕುರಿತು ಅಭಿನಯ ಚಕ್ರವರ್ತಿ ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ. ನಟ-ನಿರ್ದೇಶಕ ರಾಜ್​ ಬಿ. ಶೆಟ್ಟಿ ಸಿನಿಮಾದಲ್ಲಿ ಒಂದಲ್ಲೊಂದು ವಿಶೇಷತೆ ಇದ್ದೇ ಇರುತ್ತದೆ.‘ಒಂದು ಮೊಟ್ಟೆಯ ಕಥೆ’ ಸಿನಿಮಾದಿಂದ ಶುರುವಾದ ಸಿನಿರಂಗದ ಪಯಣ ಇದೀಗ ಅವರನ್ನು ಯಶಸ್ಸಿನೆಡೆಗೆ ಕೊಂಡೊಯ್ದಿದೆ. ಕಳೆದ ವರ್ಷ ರಾಜ್​ ಬಿ. ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಗರುಡ ಗಮನ ವೃಷಭ ವಾಹನʼ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಇದೀಗ ಈ ಸಿನಿಮಾ ಕಿಚ್ಚನ ಮನವನ್ನು ಸಹ ಗೆದ್ದಿದೆ. 

ಇದನ್ನೂ ಓದಿ: ಆನ್ ಲೈನ್ ನಲ್ಲಿ ಸೋರಿಕೆಯಾದ Doctor Strange ಸಿನಿಮಾ ..!

ರಿಷಬ್​ ಶೆಟ್ಟಿ ಮತ್ತು ರಾಜ್​ ಬಿ. ಶೆಟ್ಟಿ ಅವರ ಕಾಂಬಿನೇಷನ್‌ನಲ್ಲಿ ಈ ಚಿತ್ರ ಸಖತ್‌ ಆಗಿ ಮೂಡಿಬಂದಿದ್ದು, ಒಟಿಟಿಯಲ್ಲೂ ಈ ಚಿತ್ರ ಪ್ರದರ್ಶನವಾಗಿ ಜನಮೆಚ್ಚುಗೆ ಪಡೆದುಕೊಂಡಿದೆ. ನಟ ಶಿವರಾಜ್​ಕುಮಾರ್ ಸೇರಿದಂತೆ ಅನೇಕ ಸ್ಯಾಂಡಲ್‌ವುಡ್‌ ಸ್ಟಾರ್‌ಗಳು ಈ ಚಿತ್ರಕ್ಕೆ ಭೇಷ್‌ ಅಂದಿದ್ದರು. 

ಇದೀಗ ‘ಗರುಡ ಗಮನ ವೃಷಭ ವಾಹನ’ ಚಿತ್ರವನ್ನು ಕಿಚ್ಚ ಸುದೀಪ್​ ನೋಡಿದ್ದು, ಒಂದು ಸುದೀರ್ಘ ಪತ್ರದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದಿನಿಂದಲೂ ಒಳ್ಳೆಯ ಸಿನಿಮಾಗಳಿಗೆ ಕಿಚ್ಚ ಸುದೀಪ್​ ಬೆನ್ನು ತಟ್ಟುತ್ತಲೇ ಬಂದಿದ್ದಾರೆ. ಇದೀಗ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಬಗ್ಗೆ ಒಂದು ದೀರ್ಘವಾದ ಮೆಚ್ಚುಗೆಯ ಪತ್ರವನ್ನು ಬರೆದು, ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

 

 

ʻಮೇಕಿಂಗ್​ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಎಲ್ಲರನ್ನೂ ಮತ್ತು ಪ್ರೇಕ್ಷಕರನ್ನು ಎಕ್ಸೈಟ್​ ಆಗಿಸುವಂತಹ ಸ್ಕ್ರಿಪ್ಟ್​ಗಾಗಿ ಹುಡುಕಾಟ ನಡೆಸುವುದು ಪ್ರತಿ ಕ್ರಿಯೇಟರ್​ನ ಭಾಗ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಈ ರೀತಿಯ ಸಿನಿಮಾ ಮಾಡಿದ ಇಡೀ ತಂಡಕ್ಕೆ ನನ್ನ ಮೆಚ್ಚುಗೆʼ ಎಂದು ಹೇಳಿದ್ದಾರೆ. 

ಇದನ್ನೂ ಓದಿ:ವಿಜಯ್ ರಾಘವೇಂದ್ರ ನಟನೆಯ ರಾಘು ಸಿನಿಮಾದ ಮುಹೂರ್ತ...ಅಣ್ಣನ ಸಿನಿಮಾಗೆ ತಮ್ಮ ಶ್ರೀಮುರಳಿ ಕ್ಲ್ಯಾಪ್

ʻನನಗೆ ಸಿನಿಮಾ ನೋಡಲು ಅವಕಾಶ ಸಿಗುವುದು ಕಡಿಮೆ. ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿದ ಬಳಿಕ ಪ್ರಾಮಾಣಿಕವಾಗಿ ನನ್ನ ಮನಸ್ಸಿನಿಂದ ಬಂದಿದ್ದು, ವಾವ್​... ಬರವಣಿಗೆ ಬ್ರಿಲಿಯಂಟ್​, ತಾಂತ್ರಿಕವಾಗಿ ಇದೊಂದು ಪಾಠದಂತಿದೆ. ಮ್ಯೂಸಿಕ್​ ಅಂತೂ ಅದ್ಭುತವಾಗಿದೆ. ಈ ಸಿನಿಮಾದ ದೊಡ್ಡ ಪ್ಲಸ್​ ಪಾಯಿಂಟ್‌ ಅಂದರೆ ಸರಳತೆʼ ಎಂದು ಸುದೀಪ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News