ಬೆಂಗಳೂರು: ‘ವಿಕ್ರಾಂತ್ ರೋಣ’ ಸದ್ಯ ಸಿನಿ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ ಚಿತ್ರ. ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಸಿದ್ಧವಾಗಿದ್ದು, ಸಖತ್ ಸೌಂಡ್ ಮಾಡುತ್ತಿದೆ. ಈ ಚಿತ್ರದ ನಿರ್ಮಾಪಕ ಹಾಗೂ ಸುದೀಪ್ ಆಪ್ತರಾದಂತಹ ಜ್ಯಾಕ್ ಮಂಜು ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.


COMMERCIAL BREAK
SCROLL TO CONTINUE READING

ಜ್ಯಾಕ್ ಮಂಜು ಆರೋಗ್ಯದಲ್ಲಿ ಚೇತರಿಕೆ


ಜ್ಯಾಕ್ ಮಂಜು ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜ್ಯಾಕ್ ಮಂಜುರವರಿಗೆ ವೈದ್ಯರು ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಇದೀಗ ಅವರ ಆರೋಗ್ಯದ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.   


ಇದನ್ನೂ ಓದಿ: ‘777 ಚಾರ್ಲಿ’ ನೋಡಿ ಗಳಗಳನೆ ಅತ್ತ ಸಿಎಂ ಬೊಮ್ಮಾಯಿ..!


ಐಶ್ವರ್ಯಾ ರೈ ಪಾಸ್‌ಪೋರ್ಟ್‌ನಲ್ಲಿರೋ ಫೋಟೋ ಸ್ಪೆಶಾಲಿಟಿ ಏನ್‌ ಗೊತ್ತಾ?


ಒಟ್ಟಿನಲ್ಲಿ ಜ್ಯಾಕ್ ಮಂಜುರವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಮುಂದಿನ ತಿಂಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದು, ಇದರ ಪ್ರಚಾರ ಕಾರ್ಯದಲ್ಲಿ ಅವರು ಭಾಗಿಯಾಗಲಿದ್ದಾರೆ. ದಿಢೀರ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಜ್ಯಾಕ್ ಮಂಜು ಶೀಘ್ರವೇ ಚೇತರಿಕೆ ಕಾಣಲಿ ಎಂದು ಚಿತ್ರರಂಗದ ಅನೇಕರು ಹಾರೈಸಿದ್ದರು.     


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.