Kireeti Reddy: ಸಿನಿಮಾ ಕ್ಷೇತ್ರಕ್ಕೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಗ್ರ್ಯಾಂಡ್ ಎಂಟ್ರಿ..!

Kireeti Reddy- G.Janardhan Reddy's Son: ಇನ್ನೂ ಹೆಸರಿಡದ ಕಿರೀಟಿ ಸಿನಿಮಾಗೆ ಭಾರಿ ದೊಡ್ಡ ಬಜೆಟ್‌ ಹೂಡಿಕೆ ಮಾಡಲಾಗುತ್ತಿದೆ. ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರು ‌ಕಿರೀಟಿ ಸಿನಿಮಾದ ಭಾಗವಾಗಿದ್ದಾರೆ.

Written by - Malathesha M | Edited by - Yashaswini V | Last Updated : Mar 3, 2022, 09:48 AM IST
  • 'ವಾರಾಹಿ ಪ್ರೊಡಕ್ಷನ್ ಹೌಸ್' ಅಡಿಯಲ್ಲಿ ಸದ್ಯ 15ನೇ ಸಿನಿಮಾ ಅನೌನ್ಸ್

    ಈ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿರುವ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ

    ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ
Kireeti Reddy: ಸಿನಿಮಾ ಕ್ಷೇತ್ರಕ್ಕೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಗ್ರ್ಯಾಂಡ್ ಎಂಟ್ರಿ..! title=
Kireeti Reddy- G.Janardhan Reddy's Son grand entry to film industry

Janardhan Reddy's son Kireeti Reddy: ರಾಜಕೀಯದಲ್ಲಿ ಸಖತ್‌ ಸದ್ದು ಮಾಡಿದ್ದ ಗಣಿದಣಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ ಸಿನಿಮಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಅಂದಹಾಗೆ 'ವಾರಾಹಿ ಪ್ರೊಡಕ್ಷನ್ ಹೌಸ್' ಅಡಿಯಲ್ಲಿ ಸದ್ಯ 15ನೇ ಸಿನಿಮಾ ಅನೌನ್ಸ್ ಆಗಿದ್ದು, ಕಿರೀಟಿ ರೆಡ್ಡಿ (Kireeti Reddy) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ವಾರಾಹಿ ಫಿಲ್ಮಂ ಪ್ರೊಡಕ್ಷನ್ ಟಾಲಿವುಡ್‌ನ ಜನಪ್ರಿಯ ಸಿನಿಮಾ ನಿರ್ಮಾಣ ಸಂಸ್ಥೆ. ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿರುವ ಹೆಮ್ಮೆ ಸಂಸ್ಥೆಗೆ ಇದೆ. ಇದೀಗ ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡ್ತಿದ್ದು, ಈ ಚಿತ್ರದ ಮೂಲಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ (Kireeti Reddy) ಅವರನ್ನು ನಾಯಕನಾಗಿ ಪರಿಚಯಿಸಲಾಗುತ್ತಿದೆ.

ಇದನ್ನೂ ಓದಿ- Puneeth Rajkumar : ಅಪ್ಪು ಸಾಂಗ್ ಎಲ್ಲೆಲ್ಲೂ ಟ್ರೆಂಡ್! ಸಿನಿಮಾಗೆ ಕಾಯುತ್ತಿದ್ದಾರೆ ಅಭಿಮಾನಿಗಳು!

ಸ್ಟಾರ್‌ಗಳ ಸಮಾಗಮ..!
ಇನ್ನೂ ಹೆಸರಿಡದ ಕಿರೀಟಿ ಸಿನಿಮಾಗೆ ಭಾರಿ ದೊಡ್ಡ ಬಜೆಟ್‌ ಹೂಡಿಕೆ ಮಾಡಲಾಗುತ್ತಿದೆ. ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ (Super Hit Films) ತಂತ್ರಜ್ಞರು ‌ಕಿರೀಟಿ ಸಿನಿಮಾದ ಭಾಗವಾಗಿದ್ದಾರೆ.

ಹಿಂದೆಯೇ ಈ ಬಗ್ಗೆ ಹಿಂಟ್‌ ಸಿಕ್ಕಿತ್ತಾದರೂ, ಕಿರೀಟಿ ಮೊದಲ ಸಿನಿಮಾ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಇದೀಗ ಕಂಪ್ಲೀಟ್‌ ಇನ್ಫರ್ಮೇಷನ್‌ ರಿವೀಲ್‌ ಆಗಿದ್ದು, ಗಣಿದಣಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ಪಕ್ಕಾ ಆಗಿದೆ.

ಇದನ್ನೂ ಓದಿ- ರಹಸ್ಯವಾಗಿ ಮದುವೆಯಾಗ್ತಾ ಇದ್ದಾರಾ ಸಲ್ಮಾನ್ ಖಾನ್- ಸೋನಾಕ್ಷಿ ಸಿನ್ಹಾ..?

ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ. ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News