ನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ 

Krishna Mukherjee news : ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ತಮ್ಮ ಜೀವನದಲ್ಲಿ ನಡೆದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಕೃಷ್ಣಾ ನಿರ್ಮಾಪಕರೊಂದಿಗಿನ ಕಹಿ ಅನುಭವವನ್ನು ಬಹಿರಂಗಪಡಿಸಿದ್ದಾರೆ.

Written by - Krishna N K | Last Updated : Apr 28, 2024, 07:17 PM IST
    • ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.
    • ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ.
    • ಇದೇ ಸಾಲಿಗೆ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಸೇರಿಕೊಂಡಿದ್ದಾರೆ.
ನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ  title=

Krishna Mukherjee : ದಿನದಿಂದ ದಿನಕ್ಕೆ ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಬಗ್ಗೆ ಈಗಾಗಲೇ ಹಲವು ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ತಾವು ಅನುಭವಿಸಿದ ಕಹಿ ಘಟನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಇದೇ ಸಾಲಿಗೆ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಸೇರಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ತಮ್ಮ ಜೀವನದಲ್ಲಿ ನಡೆದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಕೃಷ್ಣಾ ನಿರ್ಮಾಪಕರೊಂದಿಗಿನ ಕಹಿ ಅನುಭವವನ್ನು ಬಹಿರಂಗಪಡಿಸಿದ್ದಾರೆ. ‘ಯೇ ಹೈ ಮೊಹಬ್ಬತೆ’ ಧಾರಾವಾಹಿಯಿಂದ ಖ್ಯಾತ ಗಳಿಸಿದ ನಟಿ ನಿರ್ಮಾಪಕರೊಬ್ಬರು ನೀಡಿದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:"ನಿನ್ನ ಕ್ಯಾಮೆರಾ ಕಣ್ಣು ನನ್ನ ಶರೀರದ ಈ ಅಂಗ..." ಕ್ಯಾಮೆರಾಮನ್ ಕ್ಲಾಸ್ ತೆಗೆದುಕೊಂಡ Rakhi Sawant, Watch Video

ಕೃಷ್ಣ ಮುಖರ್ಜಿ ‘ಶುಭ ಶಕುನ್’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದೀಗ ನಟಿ ಈ ಸೀರಿಯಲ್ ಹಿಂದೆ ಸರಿದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ನೀಡಿದ ಕಿರುಕುಳ ಎಂದು ಸ್ವತಃ ನಟಿ ಹೇಳಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಫೋಸ್ಟ್‌ನಲ್ಲಿ ಅವರು, ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿದ್ದವು. ಆದರೆ ನಾನು ಬರೆಯಲೇಬೇಕು. ಅವರಿಂದಲೇ ನಾನು ಖಿನ್ನತೆಗೆ ಒಳಗಾಗಿದ್ದೆ. ನಾವು ನಮ್ಮ ಜೀವನದ ಕೆಟ್ಟ ಭಾಗವನ್ನು ಬದಿಗಿಟ್ಟು ನಮ್ಮ ಉತ್ತಮ ಜೀವನವನ್ನು ಸಾಮಾಜಿಕ ಮಾಧ್ಯಮದಲ್ಲಿ ಮಾತ್ರ ತೋರಿಸುತ್ತೇವೆ. ಆದರೆ ವಾಸ್ತವ ಬೇರೆಯೇ ಇದೆ’ ಎಂದರು.

ಈ ಕುರಿತು ಪೋಸ್ಟ್ ಮಾಡಬೇಡ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ನಾನೇಕೆ ಹೆದರಬೇಕು? ನ್ಯಾಯ ಕೇಳುವುದು ನನ್ನ ಹಕ್ಕು’ ಎಂದು ನಿರ್ಮಾಪಕ ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಕಳೆದ ಒಂದೂವರೆ ವರ್ಷ ನನ್ನ ಪಾಲಿಗೆ ಅಷ್ಟು ಸಲೀಸಾಗಿ ಹೋಗಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ದಂಗಲ್ ಟಿವಿಯಲ್ಲಿ ಶುಭ್ ಶಗುನ್ ಧಾರಾವಾಹಿಯನ್ನು ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಇದೆ. 

ಇದನ್ನೂ ಓದಿ:ಸೌತ್‌ ನಟಿ ಶ್ರೀದೇವಿ ಸಾಯುವ ಮುನ್ನ ಆಕೆಯ ಸಹೋದರಿ ಮಾಡಿದ್ದೇನು ಗೊತ್ತಾ? ಕೊನೆ ಕ್ಷಣದಲ್ಲಿ ಸ್ವಂತ ತಂಗಿಯೇ ಶತ್ರು?!

ಧಾರಾವಾಹಿಯನ್ನು ಒಪ್ಪಿಕೊಳ್ಳುವುದು ತನ್ನ ಜೀವನದ ಅತ್ಯಂತ ಕೆಟ್ಟ ನಿರ್ಧಾರ ಎಂದು ನಟಿ ಬೇಸರ ವ್ಯಕ್ತಪಡಿಸಿದ್ದಾರೆ.ಅಷ್ಟೇ ಅಲ್ಲ ಪ್ರೊಡಕ್ಷನ್ ಹೌಸ್, ನಿರ್ಮಾಪಕ ಕುಂದನ್ ಸಿಂಗ್ ಆಕೆಗೆ ಕಿರುಕುಳ ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಬಟ್ಟೆ ಬದಲಾಯಿಸುವಾಗ ಬಾಗಿಲು ಹಾಕಿಕೊಂಡು ಹಲವು ಬಾರಿ ಬೆದರಿಕೆ ಹಾಕಿದ್ದಾಗಿಯೂ ನಟ ಕೃಷ್ಣಾ ಅಳಲು ತೋಡಿಕೊಂಡಿದ್ದಾರೆ. ಆ ಧಾರಾವಾಹಿಯಲ್ಲಿ ನಟಿಸಿದ್ದಕ್ಕೆ ಸಂಭಾವನೆಯನ್ನೂ ನೀಡಿಲ್ಲ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News