ಬೆಂಗಳೂರು: ಹಿರಿಯ ಸಾಹಿತಿ ಕುಂ.ವೀರಭದ್ರಪ್ಪನವರ ಕಥೆಯನ್ನಾಧರಿಸಿ ರಘು ರಾಮಚರಣ್ ಹೂವಿನ ಹಡಗಲಿ ‘ಕುಬುಸ’ ಸಿನಿಮಾ ನಿರ್ದೇಶಿಸಿದ್ದಾರೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ಈ ಚಿತ್ರ ಜನವರಿ ಕೊನೆಯಲ್ಲಿ ತೆರೆಗೆ ಬರಲು ಸಜ್ಜಾಗಿದೆ. ತಾಯಿ-ಮಗನ ಸೆಂಟಿಮೆಂಟ್ ಹೊತ್ತ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿ ಪಾಸ್ ಆಗಿದ್ದು ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡಲಿದೆ.


COMMERCIAL BREAK
SCROLL TO CONTINUE READING

‘ಕುಬುಸ’ ಆರ್.ಚಂದ್ರು ಶಿಷ್ಯ ರಘು ರಾಮಚರಣ್ ಹೂವಿನ ಹಡಗಲಿ ನಿರ್ದೇಶನದ ಮೊದಲ ಸಿನಿಮಾ. ನಿರ್ದೇಶಕರಾದ ಟಿ.ಎಸ್.ನಾಗಾಭರಣ, ಪ್ರೇಮ್, ಸತ್ಯ ಪ್ರಕಾಶ್ ಸಿನಿಮಾಗಳಲ್ಲೂ ಸಹಾಯಕ ನಿರ್ದೇಶಕನಾಗಿ, ಕಲಾವಿದನಾಗಿ ಗುರುತಿಸಿಕೊಂಡಿರುವ ಇವರು ‘ಕುಬುಸ’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.


ಇದನ್ನೂ ಓದಿ: ಹೊಸ ವರ್ಷದ ಆರಂಭದಲ್ಲೇ ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೆ ಬಿಗ್ ಬ್ರೇಕಿಂಗ್ ನ್ಯೂಸ್...?!


ಕಲ್ಲು ಒಡೆದು ಹಳ್ಳಿಯಲ್ಲಿ ಜೀವನ ಸಾಗಿಸುವ ತಾಯಿ ತನ್ನ ಮಗನನ್ನು ದೂರದ ಊರಿನಲ್ಲಿ ಓದಿಸುತ್ತಿರುತ್ತಾಳೆ. ಯಾವತ್ತೂ ಬೇರೆ ಊರಿಗೆ ಪಯಣ ಬೆಳೆಸದ, ಬಸ್ ಕೂಡ ಹತ್ತಿರದ ಆಕೆಯನ್ನು ಮಗ ಕೆಲಸ ಸಿಕ್ಕ ಮೇಲೆ ನಗರಕ್ಕೆ ಕರೆದುಕೊಂಡು ಬರುತ್ತಾನೆ. ಮೊದಲಿನಿಂದಲೂ ‘ಕುಬುಸ’ ಧರಿಸಿ ಅಭ್ಯಾಸವಿರದ ಆಕೆ ಈ ಕಾರಣದಿಂದ ನಗರಕ್ಕೆ ಬಂದಾಗ ಹೇಗೆಲ್ಲ ಜನರಿಂದ ಮುಜುಗರಕ್ಕೆ ಒಳಗಾಗುತ್ತಾಳೆ, ಮುಂದೆ ಏನಾಗುತ್ತೆ ಅನ್ನೋದೇ ಸಿನಿಮಾದ ಕಹಾನಿ.


ತಾಯಿ-ಮಗನ ಸೆಂಟಿಮೆಂಟ್ ಇರುವ ಈ ಚಿತ್ರದಲ್ಲಿ ‘ರಾಮ ರಾಮ ರೇ’ ಸಿನಿಮಾ ಖ್ಯಾತಿಯ ನಟರಾಜ್.ಎಸ್.ಭಟ್, ರಂಗಭೂಮಿ ಕಲಾವಿದೆ ಹನುಮಕ್ಕ ಮರಿಯಮ್ಮನ ಹಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ನಟರಾಜ್.ಎಸ್.ಭಟ್ ಚಿತ್ರದಲ್ಲಿ ಎರಡು ಶೇಡ್‍ನಲ್ಲಿ ನಟಿಸಿದ್ದು, ಆರ್ಯ ಮೈಸೂರು, ಅನಿಕ ರಮ್ಯ, ಮಹಾಲಕ್ಷ್ಮೀ ಕೂಡ ಚಿತ್ರದ ಲೀಡ್ ರೋಲ್‍ನಲ್ಲಿ ಬಣ್ಣ ಹಚ್ಚಿದ್ದಾರೆ.


ಇದನ್ನೂ ಓದಿ: pushpa 2 : ಅಲ್ಲು ಎದುರು ಅಬ್ಬರಿಸಲು ಜಾಲಿರೆಡ್ಡಿ ಸಿದ್ದ... ಪುಷ್ಪ 2ಗೆ ಡಾಲಿ ರೆಡಿ..!


ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದು, ದೊಡ್ಡ ಪಾತ್ರವೊಂದನ್ನು ಪೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಯುವ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗುಂಡಿ ರಮೇಶ್ ಹಾಗೂ ಪತ್ನಿ ಗುಂಡಿ ಭಾರತಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಹೊನ್ನಾವರ ಸ್ವಾಮಿ, ಹುಲಿಗೆಪ್ಪ ಕಟ್ಟಿಮನಿ, ಕನ್ನಡ ಕಲಾ ಸಂಘ ಹೊಸಪೇಟೆ ಕಲಾವಿದರು ಚಿತ್ರದ ತಾರಾ ಬಳಗದಲ್ಲಿದ್ದಾರೆ.  


ಕಲಾತ್ಮಕ ಸಿನಿಮಾಗಳಿಗಿಂತ ಭಿನ್ನವಾದ ಹೊಸತನ ಒಳಗೊಂಡ ಸಿನಿಮಾ ‘ಕುಬುಸ’. ಚಿತ್ರದಲ್ಲಿ ಮೂಲ ಕಥೆಯಲ್ಲಿರುವಂತೆ ಬಳ್ಳಾರಿ ಭಾಷೆಯ ಸೊಗಡನ್ನು ಕಾಣಬಹುದಾಗಿದೆ. ಮ್ಯೂಸಿಕಲ್ ಸಿನಿಮಾ ಕೂಡ ಆಗಿದ್ದು, ಸನ್ನಿವೇಶಕ್ಕೆ ತಕ್ಕಂತೆ 4 ಹಾಡುಗಳಿದ್ದು 3 ಬಿಟ್ ಗಳಿವೆ. ಜೋಗಿ ಪ್ರೇಮ್, ವಾಸುಕಿ ವೈಭವ್, ಶೃತಿ.ವಿ.ಎಸ್, ಶಿಲ್ಪ ಮುಡ್ಬಿ, ಪ್ರದೀಪ್ ಚಂದ್ರ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ.


ಪ್ರದೀಪ್ ಚಂದ್ರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಶರ್ಮಾ. ಎ ಕ್ಯಾಮೆರಾ ವರ್ಕ್, ಶಿವಮೂರ್ತಿ ಡೋಣಿಮಲೈ ಸಹ ನಿರ್ದೇಶನ ಚಿತ್ರಕ್ಕಿದೆ. ವಿ.ಶೋಭಾ ಸಿನಿಮಾಸ್ ಬ್ಯಾನರ್ ನಡಿ ವಿ.ಶೋಭಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜನವರಿ ಕೊನೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಟೀಸರ್ ಬಿಡುಗಡೆಗೆ ಚಿತ್ರತಂಡ ಸಜ್ಜಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.