Entertainment News : "ಕುಲದಲ್ಲಿ ಕೀಳ್ಯಾವುದೋ" ಸರ್ವಕಾಲಿಕ ಜನಪ್ರಿಯ ಗೀತೆ. ಇಂತಹ ಜನಪ್ರಿಯ ಗೀತೆಯ ಸಾಲನಿಟ್ಟುಕೊಂಡು ಹಾಡು ಬರೆಯುವುದು ಅಷ್ಟು ಸುಲಭದ ಮಾತಲ್ಲ. ಈ ಹಾಡನ್ನು ಯೋಗರಾಜ್ ಭಟ್ ಅವರ ಹತ್ತಿರ ಬರೆಸುವುದು ಅಂತ ನಿರ್ಧಾರವಾಯಿತು. ಆದರೆ ಅವರು "ಮನದ ಕಡಲು" ಚಿತ್ರದ ಬಿಡುಗಡೆಯ ಬ್ಯುಸಿಯಲ್ಲಿದ್ದರು. ಹಾಗಾಗಿ ಅವರೆ ನನಗೆ ಈ ಹಾಡನ್ನು ಬರೆಯುವಂತೆ ಹೇಳಿದರು. ಆನಂತರ ನಾನೇ ಈ ಹಾಡು ಬರೆದೆ. ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೂ ಈ ಹಾಡು ಇಷ್ಟವಾಯಿತು. ಚೇತನ್ ಅವರು ಹಾಡಿರುವ ಈ ಶೀರ್ಷಿಕೆಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಮಾಪಕರು ಯಾವುದೇ ಕೊರತೆ ಬಾರೆದ ಹಾಗೆ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೇ 23 ರಂದು ನಿಮ್ಮ ಮುಂದೆ ಬರೆಲಿದೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದರು.
ಡಾ||ರಾಜಕುಮಾರ್ ಅವರ ಜನ್ಮದಿನದಂದು ಹಿರಿಯರಾದ ಸಾಲುಮರದ ತಿಮ್ಮಕ್ಕ ಅವರು ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಅವರಿಗೆ ವಿಶೇಷ ಧನ್ಯವಾದ ಎಂದು ಮಾತನಾಡಿದ ಯೋಗರಾಜ್ ಭಟ್, ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಅವರ ಸೂಪರ್ ಹಿಟ್ ಗೀತೆಯನ್ನೇ ಶೀರ್ಷಿಕೆಯಾಗಿ ಹೊಂದಿರುವ ಈ ಚಿತ್ರದ ಟೈಟಲ್ ಸಾಂಗ್ ಇಂದು ಬಿಡುಗಡೆಯಾಗಿದೆ. ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರು ಏನು ಹೇಳಿದಾರೊ ಅದನ್ನು ಮಾಡಿದ್ದೇನೆ. ಇತ್ತೀಚೆಗೆ ಈ ಚಿತ್ರವನ್ನು ನೋಡಿದಾಗ ಎಲ್ಲಾ ಕಲಾವಿದರ ಅಭಿನಯ ಮನಸ್ಸಿಗೆ ಹತ್ತಿರವಾಯಿತು. ತಂತ್ರಜ್ಞರ ಕಾರ್ಯವೈಖರಿಯೂ ಇಷ್ಟವಾಯಿತು. ರಾಮ್ ನಾರಾಯಣ್ ಅವರ ನಿರ್ದೇಶನದ ಬಗ್ಗೆ ಹೇಳುವ ಹಾಗೆ ಇಲ್ಲ. ಇನ್ನೂ, ಗ್ರಾಮೀಣ ಪ್ರತಿಭೆ ಮಡೆನೂರ್ ಮನು. ಆತನನ್ನು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿರುವ ನಿರ್ಮಾಪಕರಾದ ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ಎಂದರು.
ಚಿತ್ರ ಆರಂಭದಿಂದಲೂ ನಮಗೆ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರ ಮೇ 23 ತೆರೆಗೆ ಬರಲಿದೆ. ನಿಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಂತೋಷ್ ಕುಮಾರ್.
ಇಂದು ನಮ್ಮ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಚಿತ್ರ ಮೇ 23 ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ಹಾಗೂ ನಿರ್ಮಾಪಕರ ಸಂತೋಷ್ ಕುಮಾರ್ ಅವರಿಗೆ ನಾನು ಆಬಾರಿ. ನಿರ್ದೇಶಕ ರಾಮ್ ನಾರಾಯಣ್ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಮಡೆನೂರ್ ಮನು. ಅಲ್ಲದೆ, ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ಖುಷಿಯಿದೆ ಎಂದರು ನಾಯಕಿ ಮೌನ ಗುಡ್ಡಮನೆ.
ಇದನ್ನೂ ಓದಿ:'ಮುಸ್ಲಿಂ ಆಗಿ, ನಾನು ಹಿಂದೂಗಳ..' : ಪಹಲ್ಗಾಮ್ ದಾಳಿಯ ಕುರಿತು ಹಿನಾ ಖಾನ್ ಪೋಸ್ಟ್ ವೈರಲ್
ಹಿರಿಯ ನಟರಾದ ಉಮೇಶ್, ಕರಿಸುಬ್ಬು, ಡ್ರ್ಯಾಗನ್ ಮಂಜು, ಸೀನ, ಸಂಭಾಷಣೆ ಬರೆದಿರುವ ವಿಜಯಾನಂದ್ ಹಾಗೂ ಹಾಡಿನಲ್ಲಿ ಅಭಿನಯಿಸಿರುವ ನಟಿ ಯಶಸ್ವಿನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









