Langoti Man Trailer Release : ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ "ಲಂಗೋಟಿ ಮ್ಯಾನ್" ಚಿತ್ರದ ಟ್ರೇಲರ್ ಬಿಡುಗಡೆ ಆಗಸ್ಟ್ 19 ರಂದು ನಡೆಯಲಿದೆ. ಈ ಸಮಾರಂಭಕ್ಕೆ ಸನ್ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಓ.ಮಂಜುನಾಥ್ ಸೌತ್ ಡಿಸಿಸಿ ಪ್ರೆಸಿಡೆಂಟ್ ಬೆಂಗಳೂರು ಹಾಗೂ ನಟ ಶರಣ್ ಅವರನ್ನು ಚಿತ್ರತಂಡ ಆತ್ಮೀಯವಾಗಿ ಆಹ್ವಾನಿಸಿದೆ. 


COMMERCIAL BREAK
SCROLL TO CONTINUE READING

ಹೊಸತಂಡದ ಪ್ರೀತಿಯ ಆಹ್ವಾನವನ್ನು ಒಪ್ಪಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಓ.ಮಂಜುನಾಥ್ ಸೌತ್ ಡಿಸಿಸಿ ಪ್ರೆಸಿಡೆಂಟ್ ಹಾಗೂ ನಟ ಶರಣ್ ಅವರು ಸಮಾರಂಭಕ್ಕೆ ಬರುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ರಿಷಬ್‌ ಶೆಟ್ಟಿ ಅಷ್ಟೆ ಅಲ್ಲ.. ಕನ್ನಡದ ಈ ನಟರಿಗೂ ಕೂಡ ಸಿಕ್ಕಿತ್ತು ನ್ಯಾಷನಲ್‌ ಅವಾರ್ಡ್‌..!


ಕರ್ನಾಟಕದ ಉಪ ಮುಖ್ಯಮಂತ್ರಿಗಳು ತಮ್ಮ ಕಾರ್ಯದ ಒತ್ತಡದ ನಡುವೆಯೂ ನಮ್ಮನ್ನು ಪ್ರೀತಿಯಿಂದ ಮಾತನಾಡಿಸಿ, ಸಮಾರಂಭಕ್ಕೆ ಬರುತ್ತೇನೆ ಎಂದು ಹೇಳಿರುವುದು. ನಟ ಶರಣ್ ಕೂಡ ನಮ್ಮ ಆತ್ಮೀಯ ಆಹ್ವಾನಕ್ಕೆ ಸ್ಪಂದಿಸಿ ಸಮಾರಂಭಕ್ಕೆ ತಪ್ಪದೇ ಬರುವುದಾಗಿ ಹೇಳಿರುವುದು ನಮ್ಮ ತಂಡಕ್ಕೆ ಸಂತೋಷ ತಂದಿದೆ. ಇಂತಹ ದಿಗ್ಗಜರು ನಮ್ಮ ಆಹ್ವಾನಕ್ಕೆ ತೋರಿದ ಪ್ರೀತಿಗೆ ಮನತುಂಬಿ ಬಂದಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.


ಆಕಾಶ್ ರಾಂಬೋ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಗಿಲ್ಲಿ ನಟ, ಸಂಹಿತ ವಿನ್ಯ, ಸ್ನೇಹ ಖುಷಿ, ಪವನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.


ಇದನ್ನೂ ಓದಿ: Rishab Shetty: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಮುಡಿಗೇರಿದ ರಾಷ್ಟ್ರ ಪ್ರಶಸ್ತಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.