Salman Khan V/s Lawrence Bishnoi: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ!

ಸಲ್ಮಾನ್ ಖಾನ್ ತಂಡಕ್ಕೆ ಶನಿವಾರ ಇ-ಮೇಲ್ ಬಂದಿದ್ದು, ಅದನ್ನು ರೋಹಿತ್ ಎಂಬ ವ್ಯಕ್ತಿ ಬರೆದಿದ್ದಾರೆ. ಗೋಲ್ಡಿ ಭಾಯ್ ನಿಮ್ಮ ಬಾಸ್ (ಸಲ್ಮಾನ್ ಖಾನ್) ಜೊತೆ ಮಾತನಾಡಬೇಕು ಎಂದು ಇ-ಮೇಲ್‌ನಲ್ಲಿ ಹೇಳಲಾಗಿದೆ. ಮುಂದಿನ ಬಾರಿ ನೇರ ಹೊಡೆತ ಬೀಳಲಿದೆ ಎಂದು ಎಚ್ಚರಿಕೆ ಸಹ ನೀಡಲಾಗಿದೆ.

Written by - Puttaraj K Alur | Last Updated : Mar 19, 2023, 11:03 PM IST
  • ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಮತ್ತೊಮ್ಮೆ ಜೀವ ಬೆದರಿಕೆ
  • ಸಲ್ಲುಬಾಯ್‍ಗೆ ಅವಾಜ್ ಹಾಕಿದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍
  • ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸದ ಸಲ್ಮಾನ್ ಖಾನ್ ಟೀಂ
Salman Khan V/s Lawrence Bishnoi: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ! title=
ಸಲ್ಮಾನ್ ಖಾನ್‍ಗೆ ಮತ್ತೊಮ್ಮೆ ಜೀವ ಬೆದರಿಕೆ!

ನವದೆಹಲಿ: ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಮತ್ತೊಮ್ಮೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನಿಂದ ಜೀವ ಬೆದರಿಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ಅವರು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಪಂಜಾಬ್‌ನ ಬಟಿಂಡಾ ಜೈಲಿನಲ್ಲಿ ಬಂಧಿಯಾಗಿರುವ ಇನ್ನೊಬ್ಬ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಸಲ್ಮಾನ್ ಖಾನ್‌ಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ನಂತರ ಅವರ ತಂಡ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್‍ಗೆ ಹಲವು ಬಾರಿ ಬೆದರಿಕೆ ಹಾಕಿದ್ದಾರೆ. ಸಲ್ಮಾನ್ ಖಾನ್ ತಂಡಕ್ಕೆ ಶನಿವಾರ ಇ-ಮೇಲ್ ಬಂದಿದ್ದು, ಅದನ್ನು ರೋಹಿತ್ ಎಂಬ ವ್ಯಕ್ತಿ ಬರೆದಿದ್ದಾರೆ. ಗೋಲ್ಡಿ ಭಾಯ್ ನಿಮ್ಮ ಬಾಸ್ (ಸಲ್ಮಾನ್ ಖಾನ್) ಜೊತೆ ಮಾತನಾಡಬೇಕು ಎಂದು ಇ-ಮೇಲ್‌ನಲ್ಲಿ ಹೇಳಲಾಗಿದೆ. ಮುಂದಿನ ಬಾರಿ ನೇರ ಹೊಡೆತ ಬೀಳಲಿದೆ ಎಂದು ಎಚ್ಚರಿಕೆ ಸಹ ನೀಡಿದೆ. ಇ-ಮೇಲ್ ಓದಿದ ಬಳಿಕ ಸಲ್ಮಾನ್ ಖಾನ್ ತಂಡವು ಗೋಲ್ಡಿ ಬ್ರಾರ್, ಲಾರೆನ್ಸ್ ಬಿಷ್ಣೋಯ್ ಮತ್ತು ಇ-ಮೇಲ್ ಬರೆದ ವ್ಯಕ್ತಿ ರೋಹಿತ್ ವಿರುದ್ಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ. ಸದ್ಯ ಸಲ್ಮಾನ್ ಖಾನ್ ಭದ್ರತೆಯನ್ನು ಪೊಲೀಸರು ಹೆಚ್ಚಿಸಿದ್ದಾರೆ. ಇತ್ತೀಚೆಗೆ ನಟ ಸಲ್ಮಾನ್ ಖಾನ್‍ಗೆ ಬೆದರಿಕೆ ಹಾಕಿರುವ 2ನೇ ಘಟನೆ ಇದಾಗಿದೆ. ಈ ಸಂಬಂಧ ಬಾಂದ್ರಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಪರಿಚಿತರಾಗಿರುವ ಸಲ್ಮಾನ್ ಖಾನ್ ಸ್ನೇಹಿತನಿಂದ ಬಾಂದ್ರಾ ಪೊಲೀಸರು ದೂರು ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಆಕಾಶದಲ್ಲಿರುವ ನಕ್ಷತ್ರಕ್ಕೆ ರಾಜರತ್ನ ʼಅಪ್ಪು' ಹೆಸರು..! ಇದಲ್ವಾ ಗುರು ಖುಷಿ ವಿಚಾರ

‘ಅವನ ಅಹಂ ಛಿದ್ರವಾಗುತ್ತದೆ’

ಇತ್ತೀಚೆಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೈಲಿನಿಂದ ಸಂದರ್ಶನವೊಂದರಲ್ಲಿ, ‘ಕೃಷ್ಣಮೃಗ, ಚಿಂಕಾರ ಬೇಟೆ ಪ್ರಕರಣದಲ್ಲಿ ದೋಷಮುಕ್ತವಾಗಿರುವ ನಟ ಸಲ್ಮಾನ್ ಖಾನ್ ಕ್ಷಮೆಯಾಚಿಸದಿದ್ದರೆ, ಅವನ ಅಹಂ ಛಿದ್ರವಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದರು. ಸಲ್ಮಾನ್ ನಮ್ಮ ಸಮಾಜಕ್ಕೆ ಹಾನಿ ಮಾಡಿದ್ದಾರೆ ಎಂದು ಬಿಷ್ಣೋಯ್ ಹೇಳಿದ್ದಾರೆ. ಬಿಕಾನೇರ್‌ನ ನೋಖಾ ಧಾಮ್‌ಗೆ ಬಂದ ನಂತರ ಕ್ಷಮೆಯಾಚಿಸದಿದ್ದರೆ, ಆತನ ಅಹಂ ಛಿದ್ರವಾಗುತ್ತದೆ’ ಅಂತಾ ಎಚ್ಚರಿಕೆ ಸಂದೇಶ ನೀಡಿದ್ದಾನೆ.

ಬಿಷ್ಣೋಯಿ ಸಮುದಾಯವನ್ನು ಚಿಂಕಾರದ ರಕ್ಷಕ ಎಂದು ಕರೆಯಲಾಗುತ್ತದೆ. ‘ಹಮ್ ಸಾಥ್ ಸಾಥ್ ಹೇ’ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಕೃಷ್ಣಮೃತ ಮತ್ತು ಚಿಂಕಾರವನ್ನು ಬೇಟೆಯಾಡಿದ್ದು ಬಿಷ್ಣೋಯ್ ಸಮುದಾಯವನ್ನು ಕೆರಳಿಸಿದೆ. ಏತನ್ಮಧ್ಯೆ ಇತ್ತೀಚೆಗೆ ಕಾಣಿಸಿಕೊಂಡ ಲಾರೆನ್ಸ್ ಬಿಷ್ಣೋಯ್ ಅವರ ಸಂದರ್ಶನದ ವಿಡಿಯೋವನ್ನು ಹೇಗೆ ಚಿತ್ರೀಕರಿಸಲಾಗಿದೆ ಎಂಬ ಪ್ರಶ್ನೆಗೆ ಅಧಿಕಾರಿಗಳು ಉತ್ತರಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಸಾರಾ ಅಲಿ ಖಾನ್ ಶೆಹನಾಜ್ ಗಿಲ್, ಲಿಪ್ ಟು ಲಿಪ್ ಕಿಸ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಸಖತ್ ವೈರಲ್

ಜೈಪುರ ಜೈಲಿನಲ್ಲಿ 6 ದಿನ ಸೆರೆವಾಸ ಅನುಭವಿಸಿದ್ದ ಲಾರೆನ್ಸ್

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‍ನನ್ನು ವರ್ಷದ ಹಿಂದಷ್ಟೇ 6 ದಿನಗಳ ಕಾಲ ಜೈಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಆದರೆ ಬಿಷ್ಣೋಯ್ ಯಾರನ್ನೂ ಭೇಟಿಯಾಗಿಲ್ಲ ಅಥವಾ ಅಲ್ಲಿ ಸಂದರ್ಶನ ನಡೆಸಿಲ್ಲವೆಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ಹೇಳಿದ್ದಾರೆ. ಕಾರಾಗೃಹ ಇಲಾಖೆಯ ಪ್ರಕಾರ, ಬಿಷ್ಣೋಯ್ ಅವರನ್ನು ಸೆಲ್‌ಗೆ ಕರೆತಂದಾಗ ಅವರು ಕ್ಲೀನ್ ಶೇವ್ ಮಾಡಿಸಿಕೊಂಡಿದ್ದರು. ಅವನ ಕೂದಲು ಕೂಡ ಚಿಕ್ಕದಾಗಿತ್ತು. ಆದರೆ ಸಂದರ್ಶನದಲ್ಲಿ ಅವರು ಗಡ್ಡ ಮತ್ತು ಉದ್ದನೆಯ ಕೂದಲಿನೊಂದಿಗೆ ಕಂಡಿದ್ದಾರೆ ಎಂದು ಹೇಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News