Chethan Ahimsa Post : ಸ್ಯಾಂಡಲ್‌ವುಡ್‌ ನಟ ಚೇತನ್‌ ಅಹಿಂಸಾ ಹಲವಾರು ವರ್ಷಗಳಿಂದ ಸಿನಿಮಾರಂಗದಿಂದ ದೂರವಿದ್ದು, ಸಾಮಾಜಿಕ ಕಳಕಳಿಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸೋಷಿಯಲ್‌ ಹಂಚಿಕೊಳ್ಳುವುದರ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮೀಡಿಯಾ ಪ್ರಿಯರಿಗೆ ಚೇತನ್ ಅಹಿಂಸಾ ಬಗ್ಗೆ, ಅವರು ಫೊಸ್ಟ್ ಮಾಡುವ ಕಾಮೆಂಟ್‌ಗಳ ಬಗ್ಗೆ ಹೊಸದಾಗಿ ಏನೂ ಹೇಳಬೇಕಿಲ್ಲ.ಹೆಚ್ಚುಕಡಿಮೆ ಎಲ್ಲ ವಿಷಯಕ್ಕೂ ಕಾಮೆಂಟ್ ಮಾಡುತ್ತಾರೆ.


COMMERCIAL BREAK
SCROLL TO CONTINUE READING

ಸದ್ಯ ನಟ ಚೇತನ್‌ ಅಹಿಂಸಾ ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ ಅಹಿಂಸಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್  ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



ಇದನ್ನೂ ಓದಿ: ಐಶ್ವರ್ಯಾ ರೈ ಅಭಿಷೇಕ್​ ಬಚ್ಚನ್ ಗಿಂತ ಎಷ್ಟು ವರ್ಷ ದೊಡ್ಡವರು ಗೊತ್ತೇ!


ನಟ ಚೇತನ್‌ ಅಹಿಂಸಾ ಸೋಷಿಯಲ್‌ ಮಿಡಿಯಾದಲ್ಲಿ ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು  ಬರೆದಿದ್ದರು.


ನಟ ಚೇತನ್‌ ಅಹಿಂಸಾ ಈ ರೀತಿ  ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಇದರಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಉಂಟಾಗಿದೆ ಎಂದು ಆರೋಪಿಸಿ ವಕೀಲ ಆರ್ ಎಲ್ ಎನ್ ಮೂರ್ತಿ ಅವರು ನೀಡಿರುವ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ಚೇತನ್ ನೇರ ನಿಷ್ಠುರದ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಿದ್ದು, ಇಂತಹ ವಿಚಾರಗಳಿಗಾಗಿ ಹಲವಾರು ಬಾರಿ ಇವರ ಮೇಲೆ ದೂರುಗಳು ದಾಖಲಾಗಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.