Paramvah Movie: ‘ಪರಂವಃ’ ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಲವ್ಲಿ ಸ್ಟಾರ್ ಪ್ರೇಮ್..!

Lovely Star Prem Released Song: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌. 

Written by - Zee Kannada News Desk | Last Updated : Jun 19, 2023, 06:01 PM IST
  • ‘ಪರಂವಃ’ ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಲವ್ಲಿ ಸ್ಟಾರ್ ಪ್ರೇಮ್
  • ಹಾಡು ಬಿಡುಗಡೆ ಮಾಡಿ ಮನಸ್ಸಾರೆ ಹಾರೈಸಿದ ಲವ್ಲಿ ಸ್ಟಾರ್
  • ದೇಸಿ ಕಲೆ ವೀರಗಾಸೆ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ
Paramvah Movie: ‘ಪರಂವಃ’ ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಲವ್ಲಿ ಸ್ಟಾರ್ ಪ್ರೇಮ್..!   title=

ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌. 

ಇತ್ತೀಚೆಗೆ "ಪರಂವಃ" ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ "ನೂರಾರೂ ರಂಗಿರೊ" ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್ ಪ್ರೇಮ್ ಬಿಡುಗಡೆ ಮಾಡಿದರು. ನಿರ್ದೇಶಕ ಜಡೇಶ್ ಕುಮಾರ್ ಸಹ ಅತಿಥಿಗಳಾಗಿ ಆಗಮಿಸಿದ್ದರು.

ಇದನ್ನೂ ಓದಿ: Hanuman Movie: ಆದಿಪುರುಷ’ ಆಯ್ತು ಇದೀಗ ಸದ್ಯದಲ್ಲೇ ತೆರೆಯ ಮೇಲೆ ‘ಹನುಮಾನ್​’ ಸಿನಿಮಾ!

ಈ ಚಿತ್ರದ ಬಗ್ಗೆ ಮಾತನಾಡಿದ ನಟ ಪ್ರೇಮ್,ಸುಮಾರು 200 ಜನ ಬಂಡವಾಳ ಹಾಕಿ ನಿರ್ಮಾಣ ಮಾಡಿರುವ ಸಿನಿಮಾವಿದು. ಇದು ನಿಜಕ್ಕೂ ಖುಷಿಯ ವಿಚಾರ. ನನಗೆ ಸಿನಿಮಾ ಬಗ್ಗೆ ಆಸಕ್ತಿಯಿರುವ ಪ್ರೇಕ್ಷಕರೆ ನಿರ್ಮಾಣ ಮಾಡಿದ್ದಾರೆ ಅನಿಸುತ್ತದೆ. ಈಗ ಹೊಸತಂಡದ ಹೊಸಪ್ರಯತ್ನವನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಆ ಸಾಲಿಗೆ "ಪರಂವಃ" ಚಿತ್ರ ಸಹ ಸೇರಲಿ ಎಂದು ನಟ ಪ್ರೇಮ್ ಮನಸ್ಸಾರೆ ಹಾರೈಸಿದರು.

ಪ್ರೇಮ್ ಸಿಡ್ಗಲ್ ನಾಯಕನಾಗಿ ಮತ್ತು ಮೈತ್ರಿ ಜೆ. ಕಶ್ಯಪ್ ನಾಯಕಿಯಾಗಿ ಅಭಿನಯಿಸಿದ್ದಾರೆ‌. ‘ಗಣೇಶ್ ಹೆಗ್ಗೋಡು, ನಾಜರ್, ಶ್ರುತಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.  ಸಂತೋಷ್ ಕೈದಾಳ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.  

ಇದನ್ನೂ ಓದಿ: Anand' Movie: ಶಿವಣ್ಣ& ಸುಧಾರಾಣಿ ನಟನೆಯ ʼಆನಂದ್‌ʼ ಚಿತ್ರಕ್ಕೆ 37 ವರ್ಷ ಸಂಭ್ರಮ; ಇಲ್ಲಿವೆ ಅಪರೂಪದ ಫೋಟೋಸ್
ಶಿವನ ಢಮರುಗದಿಂದ ಹೊಮ್ಮುವ ನಾದಕ್ಕೆ ‘ಪರಂವಃ’ ಎನ್ನುತ್ತಾರೆ. ನಮ್ಮ ಸಿನಿಮಾದ ಕಥೆಗೆ ಈ ಪದ  ಸೂಕ್ತವೆಂಬ ಕಾರಣಕ್ಕೆ ಇದೇ ಹೆಸರಿಟ್ಟಿದ್ದೇವೆ. ಸಿನಿಮಾದಲ್ಲಿ ವೀರಗಾಸೆ ಕಲೆಯ ಬಗ್ಗೆ ಮತ್ತು ತಂದೆ-ಮಗನ ಸಂಬಂಧದ ಬಗ್ಗೆ ಪ್ರಧಾನವಾಗಿ ಹೇಳಲಾಗಿದೆ. ಅಷ್ಟೇ  ಅಲ್ಲದೆ, ಪ್ರೀತಿ, ಸ್ನೇಹ,  ಸೆಂಟಿಮೆಂಟ್, ಥ್ರಿಲ್ಲರ್, ಆ್ಯಕ್ಷನ್ ಹೀಗೆ ಎಲ್ಲ ಥರದ ವಿಷಯಗಳು "ಪರಂವಃ" ಚಿತ್ರದಲ್ಲಿದೆ.  

ಪೀಪಲ್ಸ್ ವಲ್ಡ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಟ ಪ್ರೇಮ್, ನಿರ್ದೇಶಕ ಗುರು ದೇಶಪಾಂಡೆ ಅವರು ಸೇರಿದಂತೆ ಸ್ಯಾಂಡಲ್ ವಡ್ ನ ಗಣ್ಯರು ಹಾಗೂ ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮನತುಂಬಿ ಬಂದಿದೆ. ಸದ್ಯದಲ್ಲೇ ನಮ್ಮ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.ಎಂದರು ನಿರ್ದೇಶಕ ಸಂತೋಷ್ ಕೈದಾಳ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News