ಹೈದರಾಬಾದ್‌ : ಖ್ಯಾತ ನಟ ಮಹೇಶ್‌ ಬಾಬು ಅವರ ತಂದೆ ಸೂಪರ್ ಸ್ಟಾರ್ ಕೃಷ್ಣ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯರಾತ್ರಿಯ ನಂತರ ಕೃಷ್ಣ ತೀವ್ರ ಅಸ್ವಸ್ಥಗೊಂಡಿದ್ದು, ಕುಟುಂಬ ಸದಸ್ಯರು ಅವರನ್ನು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, 24 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.


COMMERCIAL BREAK
SCROLL TO CONTINUE READING

ಆದರೆ, ಇದೀಗ ಕಾಂಟಿನೆಂಟಲ್ ವೈದ್ಯರು ಕೃಷ್ಣ ಅವರ ಸ್ಥಿತಿಗತಿ ಕುರಿತು ಪ್ರೆಸ್ ಮೀಟ್ ನಡೆಸಿದ್ದು, ಕಾರ್ಡಿಯಾಕ್ ಅರೆಸ್ಟ್ ಸಂಬಂಧ ಆಸ್ಪತ್ರೆಗೆ ಬಂದಿದ್ದು, ಐಸಿಯುಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಾಗೂ 24 ಗಂಟೆಯ ವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರು ಕೃಷ್ಣ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಪ್ರತಿ ಗಂಟೆಯೂ ನಿರ್ಣಾಯಕ. ಅವರ ದೇಹವು ಚಿಕಿತ್ಸೆಗೆ ಸಹಕರಿಸುತ್ತದೆಯೇ?  ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ.


ಇದನ್ನೂ ಓದಿ: Samantha : ಯಶೋದಾ ಆಕ್ಷನ್ ಸೀಕ್ವೆನ್ಸ್‌ ಹಿಂದಿನ ಬಿಗ್‌ ಸೀಕ್ರೇಟ್‌ ರಿವೀಲ್‌ ಮಾಡಿದ ಸಮಂತಾ!


ಮಧ್ಯರಾತ್ರಿ ಹೃದಯಾಘಾತವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. 24 ಗಂಟೆಗಳ ನಂತರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು, ಈಗಾಗಲೇ ಇಪ್ಪತ್ತು ನಿಮಿಷಗಳ ಕಾಲ ಸಿಪಿಆರ್ ಮಾಡಲಾಗಿದೆ, ಆದರೆ ಈಗ ಅವರ ಆರೋಗ್ಯ ಸ್ಥಿರವಾಗಿದ್ದರೂ ಸಹ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಕಾಂಟಿನೆಂಟರ್‌ ವೈದ್ಯರು ಮಾಹಿತಿ ನೀಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.