ನಂಬಿಕೆ ಅಪನಂಬಿಕೆಗಳ ಸುತ್ತ ʻಮಾಂತ್ರಿಕʼ... ಇದೇ ಅಕ್ಟೋಬರ್ 18 ಕ್ಕೆ‌ ತೆರೆಗೆ

Mantrika Movie: ನಕಾರಾತ್ಮಕ ಶಕ್ತಿಗಳ ಸತ್ಯಾಸತ್ಯತೆಯ ಬಗ್ಗೆ ಹುಡುಕಾಟ ನಡೆಸುವ ಘೋಸ್ಟ್ ಹಂಟರ್ ಒಬ್ಬನ ಕಥೆ ಇಟ್ಟುಕೊಂಡು ತಯಾರಾದ ಚಿತ್ರ "ಮಾಂತ್ರಿಕ". 

Written by - YASHODHA POOJARI | Last Updated : Oct 11, 2024, 01:22 PM IST
  • ನಂಬಿಕೆ ಅಪನಂಬಿಕೆಗಳ ಸುತ್ತ ʻಮಾಂತ್ರಿಕʼ
  • ಮಾಂತ್ರಿಕ ಸಿನಿಮಾ ರಿಲೀಸ್‌ ಡೇಟ್‌
  • ಘೋಸ್ಟ್ ಹಂಟರ್ ಒಬ್ಬನ ಕಥೆ
ನಂಬಿಕೆ ಅಪನಂಬಿಕೆಗಳ ಸುತ್ತ ʻಮಾಂತ್ರಿಕʼ... ಇದೇ ಅಕ್ಟೋಬರ್ 18 ಕ್ಕೆ‌ ತೆರೆಗೆ title=

Mantrika Movie: ನಕಾರಾತ್ಮಕ ಶಕ್ತಿಗಳ ಸತ್ಯಾಸತ್ಯತೆಯ ಬಗ್ಗೆ ಹುಡುಕಾಟ  ನಡೆಸುವ ಘೋಸ್ಟ್ ಹಂಟರ್ ಒಬ್ಬನ ಕಥೆ ಇಟ್ಟುಕೊಂಡು ತಯಾರಾದ ಚಿತ್ರ "ಮಾಂತ್ರಿಕ". ಇತ್ತೀಚೆಗೆ ಈ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾ ಗೋಷ್ಟಿ  ನಡೆಯಿತು. ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಘೋಸ್ಟ್ ಹಂಟರ್ ಪಾತ್ರವನ್ನು  ನಿರ್ವಹಿಸಿದ್ದಾರೆ.

ನಿರ್ಮಾಣ, ನಿರ್ದೇಶನ ಸೇರಿದಂತೆ 8 ವಿಭಾಗದಲ್ಲಿ ಕೆಲಸ ಮಾಡಿರುವ  ವ್ಯಾನ ವರ್ಣ ಜಮ್ಮುಲ ಚಿತ್ರದ ಕುರಿತಂತೆ ಮಾತನಾಡುತ್ತ, ಆಪನಂಬಿಕೆ ಮತ್ತು ಅಪನಂಬಿಕೆಗಳ ಸುತ್ತ ಸಾಗುವ ಕಥೆಯಿದು.  ಭ್ರಮೆಯನ್ನು  ಬಿಟ್ಟು ವಾಸ್ತವಕ್ಕೆ ಬನ್ನಿ ಎನ್ನುತ್ತಾ, ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುವ ಟೈಂ ಟ್ರಾವೆಲ್ ಕಥೆಯಿದು. ವ್ಯಾಸವಾನ್ ಕೃಷ್ಟ ಎಂಬ  ಪಾತ್ರ ನಿರ್ವಹಿಸಿದ್ದೇನೆ. ಕರ್ನಾಟಕ - ಮಹಾರಾಷ್ಟ್ರದ ಗಡಿ  ಮಾರ್ನುಡಿ ಎಅಮಬ ಸ್ಥಳದಲ್ಲಿ ನಡೆಯುವ ಕಥೆ. ಮಾರ್ನುಡಿ ಎಂದರೆ ಸಂಸ್ಕೃತ ದಲ್ಲಿ ಶಬ್ದ ಎನ್ನುವ  ಅರ್ಥವಿದೆ.ಮಾನವ ದಿನದ 24 ಘಂಟೆಯೂ ಮಾನವ ಭಯದಲ್ಲೇ ಬದುಕುತ್ತಿದ್ದಾನೆ. ಮೊದಲು ಅ ಭಯವನ್ನು ನಮ್ಮ‌ ಮನಸಿನಿಂದ ತೆಗೆದುಹಾಕಿ, ಕಮ್ ಟು ರಿಯಾಲಿಟಿ ಎಂದು ಈ  ಚಿತ್ರದಲ್ಲಿ ಹೇಳಿದ್ದೇವೆ. 

ಇದನ್ನೂ ಓದಿ: ನಟಿ ಸೌಂದರ್ಯಾ ನಿರ್ಮಾಣದ ಏಕೈಕ ಸಿನಿಮಾ ಇದು! ಎರಡು ರಾಷ್ಟ್ರ ಪ್ರಶಸ್ತಿ ಗಳಿಸಿದ ಕನ್ನಡದ ಆ ಸೂಪರ್‌ ಹಿಟ್‌ ಚಿತ್ರ ಯಾವುದು ಅಂತ ಗೆಸ್‌ ಮಾಡಿ!!

ಮೂಡನಂಬಿಕೆಯಿಂದ ಆಚೆ ಬನ್ನಿ ಎನ್ನುವ ಸಂದೇಶವನ್ನು ಚಿತ್ರದ ಮೂಲಕ ಹೇಳ ಹೊರಟಿದ್ದೇವೆ. ಹಾರರ್ ಜೊತೆಗೆ ಸಮಾಜಕ್ಕೆ ಸಂದೇಶ ಕೊಡುವ ಪ್ರಯತ್ನ ಮಾಡಲಾಗಿದೆ. ನಂಬಿಕೆ ಮತ್ತು ಮೂಡ ನಂಬಿಕೆ ಯಾವುದು ಎನ್ನುವುದು ಅರ್ಥ ಮಾಡಿಕೊಳ್ಳಿ ಎಂದು ಹೇಳುವ  ಜೊತೆಗೆ ಮಾಟ ಮಂತ್ರದ ಕುರಿತು ಕೂಡ ಚಿತ್ರದಲ್ಲಿ ಹೇಳಲಾಗಿದೆ ಎಂದರು. ವಿತರಕ ವಿಜಯ್ ಕುಮಾರ್  ಮಾತನಾಡಿ 40 ರಿಂದ 50 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ದೆವ್ವ ಅನ್ನೋದು ಇದೆಯೋ, ಇಲ್ಲವೋ ಅಥವಾ ಅದೆಲ್ಲಾ ನಮ್ಮ ಭ್ರಮೆಯೋ ಎನ್ನುವುದರ ಸುತ್ತ ಸಾಗುವ ಕಥೆ  ಈ ಚಿತ್ರದಲ್ಲಿದ್ದು, ರಾಧಿಕಾ ಮಾಲಿ ಪಾಟೀಲ ಹಾಗೂ ಮೈಥಿಲಿ ನಾಯಕ್  ನಾಯಕಿಯರಾಗಿ ನಟಿಸಿದ್ದಾರೆ. 

ಚಿತ್ರದ ಕಾರ್ಯಕಾರಿ ನಿರ್ಮಾಪಕಿ, ನಿರ್ದೇಶನದಲ್ಲೂ ಸಾಥ್  ನೀಡಿದ ವ್ಯಾನವರ್ಣ ಅವರ ಪತ್ನಿ ಆಯನ  ಮಾತನಾಡಿ, ನಾನು ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು. ಈಗಾಗಲೇ ಸಿನಿಮಾ ನೋಡಿದ್ದೇನೆ.  ಜಗತ್ತಿನಲ್ಲಿ ಮಾಟ, ಮಂತ್ರ ಅನ್ನೋದು ಇದೆಯಾ ಎಂಬುದರ ರಿಯಾಲಿಟಿ ಬಗ್ಗೆ ಹೇಳುವ ಚಿತ್ರವಿದು. ಅದೇ ಕಾರಣಕ್ಕೆ ಈ ಸಿನಿಮಾ ನಿರ್ಮಾಣದಲ್ಲಿ ನಾನೂ ಜೊತೆಯಾದೆ ಎಂದರು. 

ಇದನ್ನೂ ಓದಿ:  ಸ್ಪರ್ಧಿಗಳಿಗೆ ಶಾಕ್ ಮೇಲೆ ಶಾಕ್ !ಎಲಿಮಿನೇಶನ್ ನಲ್ಲಿ ಬಿಗ್ ಟ್ವಿಸ್ಟ್ !ಎರಡನೇ ವಾರವೇ ಯಾರೂ ಊಹಿಸದ ನಿರ್ಧಾರ ತೆಗೆದುಕೊಂಡ Biggboss

ಮೂಢನಂಬಿಕೆಗಳಿಂದ ಮೂಢರಾಗಬೇಡಿ, ಅದರ ಹಿಂದಿನ ಸತ್ಯಾಂಶ ಬೇರೇನೇ ಇರುತ್ತೆ, ಅದನ್ನು ನೋಡಿದ ಮೇಲೆ ನಿರ್ಧರಿಸಿ ಅಂತ ಇದರಲ್ಲಿ  ಹೇಳಿದ್ದೇವೆ. ಬೆಂಗಳೂರು, ಮಂಗಳೂರು ಅಲ್ಲದೆ ಬೆಂಗಳೂರಿನಲ್ಲಿ ಖಾಲಿ ಇದ್ದ  ಮಾಲ್‌ವೊಂದರಲ್ಲಿ ಪ್ರಮುಖ ಭಾಗದ  ಚಿತ್ರೀಕರಣ ಮಾಡಿದ್ದೇವೆ. ಮಾಲ್‌ನಲ್ಲಿ ಶೂಟ್ ಮಾಡುವಾಗ ಚಿತ್ರತಂಡಕ್ಕೆ ಸಾಕಷ್ಟು ವಿಚಿತ್ರ ಅನುಭವಗಳಾಗಿವೆ ಎಂದು ಹೇಳಿದರು. ಕೃಷ್ಣ ಸಂಕುಲ ಬ್ರಾಂಡಿಂಗ್ ಪಿಕ್ಚರ್ಸ್  ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸೆನ್ಸಾರ್ ನಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ.

ಇನ್ನು ಈ ಚಿತ್ರಕ್ಕೆ ನಿರ್ದೇಶಕರೇ ಸಂಕಲನ ಮಾಡಿದ್ದು, ಸ್ಟಾಲಿನ್ ಅವರ ಸಂಗೀತ ಸಂಯೋಜನೆ, ಅನಿಲ್ ಆಂಟೋನಿ ಹಾಗೂ ರಮೇಶ್ ಮರ‍್ರಿಪಲ್ಲಿ ಅವರ ಛಾಯಾಗ್ರಹಣ, ಲಯನ್ ಜಿ.ಗಂಗರಾಜು ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News