Kedarnath Temple avalanche : ಉತ್ತರಾಖಂಡದ ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥ ದೇವಾಲಯದ ಸುತ್ತಲಿನ ಪರ್ವತಗಳಲ್ಲಿ ಗುರುವಾರ ಭಾರಿ ಹಿಮಕುಸಿತ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ಇತ್ತೀಚಿಗೆ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ.


COMMERCIAL BREAK
SCROLL TO CONTINUE READING

ಜೂನ್ 4 ರಂದು ರಾಜ್ಯದಲ್ಲಿ ಇದೇ ರೀತಿಯ ಹಿಮ ಹಿಮಕುಸಿತ ಸಂಭವಿಸಿದೆ. ಇದು ಹೇಮಕುಂಡ್ ಸಾಹಿಬ್‌ಗೆ ಹೋಗುತ್ತಿದ್ದ ಯಾತ್ರಾರ್ಥಿಗಳ ಗುಂಪಿಗೆ ಅಪ್ಪಳಿಸಿತು. ಅವರಲ್ಲಿ ಐವರನ್ನು ರಾಜ್ಯ ವಿಪತ್ತು ಪರಿಹಾರ ಪಡೆ (ಎಸ್‌ಡಿಆರ್‌ಎಫ್) ತಂಡ ರಕ್ಷಿಸಿದೆ. ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ನಂತರ ಜೂನ್ 5 ರಂದು ಯಾತ್ರಿಗಳ ಮೃತದೇಹವನ್ನು ಹೊರತೆಗೆಯಲಾಯಿತು.


ಇದನ್ನೂ ಓದಿ: Karnataka ದಲ್ಲಿ ಭಾರಿ ಹಿನ್ನಡೆಯ ಬಳಿಕ ಬಿಜೆಪಿಗೆ ಆರ್ಎಸ್ಎಸ್ ಸಲಹೆ, ಕಾಂಗ್ರೆಸ್ ಗೆಲ್ಲಲು ಇದೇ ಕಾರಣ


ಮತ್ತೊಂದೆಡೆ, ಕೇದಾರನಾಥ ಧಾಮ ಯಾತ್ರೆಗೆ ಆಫ್‌ಲೈನ್ ನೋಂದಣಿಯನ್ನು ಜೂನ್ 10 ರವರೆಗೆ ಮತ್ತು ಆನ್‌ಲೈನ್ ನೋಂದಣಿಯನ್ನು ಜೂನ್ 15 ರವರೆಗೆ ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಭಕ್ತರು ಧಾಮಕ್ಕೆ ಭೇಟಿ ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Monsoon: ಕೇರಳ ಕದ ತಟ್ಟಿದ ಮಾನ್ಸೂನ್, ದೇಶದ ಬೇರೆ ಬೇರೆ ಭಾಗಗಳಲ್ಲಿ ಮುಂಗಾರಿನ ಸಿಂಚನ ಯಾವಾಗ?


ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥಗಳನ್ನು ಚಾರ್ ಧಾಮ್ ಎಂದು ಕರೆಯಲಾಗುತ್ತದೆ. ಗಂಗೋತ್ರಿ ಮತ್ತು ಯಮುನೋತ್ರಿಯ ದೇವಾಲಯದ ಬಾಗಿಲುಗಳನ್ನು ಭಕ್ತರ ದರ್ಶನಕ್ಕಾಗಿ ಅಕ್ಷಯ ತೃತೀಯ ಏಪ್ರಿಲ್ 22 ರಂದು ತೆರೆಯಲಾಯಿತು. ಕೇದಾರನಾಥ ಧಾಮದ ಬಾಗಿಲುಗಳನ್ನು ಏಪ್ರಿಲ್ 25 ರಂದು ಮತ್ತು ಬದರಿನಾಥ ಧಾಮದ ಬಾಗಿಲುಗಳನ್ನು ಏಪ್ರಿಲ್ 27 ರಂದು ತೆರೆಯಲಾಯಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.