ʼಸನಾತನ ಧರ್ಮʼ ಡೆಂಗ್ಯೂ, ಮಲೇರಿಯಾದಂತೆ ಅದನ್ನು ನಿರ್ಮೂಲನೆ ಮಾಡಬೇಕು : ಉದಯನಿಧಿ

Udhayanidhi stalin on Sanatana dharma : ಡೆಂಗ್ಯೂ, ಮಲೇರಿಯಾ ಮತ್ತು ಮಾರಣಾಂತಿಕ ಕೊರೊನಾ ವೈರಸ್‌ನಂತಹ ಸೊಳ್ಳೆಗಳಿಂದ ಹರಡುವ ರೋಗಗಳ ಹರಡುವಿಕೆಯಂತಹ ಅನೇಕ ಸಾಮಾಜಿಕ ಅನಿಷ್ಟಗಳಿಗೆ ಸನಾತನ ಧರ್ಮ ಕಾರಣವಾಗಿದೆ ಎಂದು ನಾನು ನಂಬುತ್ತೇನೆ ಎಂದು ನಟ, ಸಚಿವ ಉದಯನಿಧಿ ಹೇಳಿದ್ದಾರೆ.

Written by - Krishna N K | Last Updated : Sep 3, 2023, 07:43 PM IST
  • ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ
  • ಸನಾತನ ಧರ್ಮ ಕುರಿತು ಸಚಿವ ಉದಯನಿಧಿ ವಿವಾದಾತ್ಮಕ ಹೇಳಿಕೆ
  • ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಅವರ ಮಗ ಉದಯನಿಧಿ
ʼಸನಾತನ ಧರ್ಮʼ ಡೆಂಗ್ಯೂ, ಮಲೇರಿಯಾದಂತೆ ಅದನ್ನು ನಿರ್ಮೂಲನೆ ಮಾಡಬೇಕು : ಉದಯನಿಧಿ title=

Udhayanidhi stalin : ಹೇಗೆ ಸೊಳ್ಳೆ, ಡೆಂಗ್ಯೂ, ಮಲೇರಿಯಾ, ಕರೋನಾ ಇತ್ಯಾದಿಗಳನ್ನು ನಿರ್ಮೂಲನೆ ಮಾಡಬೇಕೇ ಹೊರತು ಅವುಗಳನ್ನು ವಿರೋಧಿಸಲು ಸಾಧ್ಯವಿಲ್ಲವೊ, ಅದರಂತೆ ಸನಾತನವೂ ಹಾಗೆಯೇ, ಅದನ್ನು ವಿರೋಧಿಸಬಾರದು ನಿರ್ಮೂಲನೆ ಮಾಡಬೇಕು ಎಂದು ಸಚಿವ ಉದಯನಿಧಿ ಹೇಳಿರುವ ಹೇಳಿಕೆಗೆ ಬಿಜೆಪಿ ತೀರ್ವ ವಿರೋಧ ವ್ಯಕ್ತಪಡಿಸಿದೆ.

ತಮಿಳು ನಟ, ಸಚಿವ ಉದಯನಿಧಿ ಸ್ಟಾಲಿನ್ ಅವರು ಚೆನ್ನೈನ ತೇನಂಪೇಟೆಯಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ, ಈ ಸಮ್ಮೇಳನಕ್ಕೆ ಸನಾತನ ವಿರೋಧಿ ಸಮಾವೇಶ ಎಂದು ಹೆಸರಿಡದೆ ಸನಾತನ ನಿರ್ಮೂಲನಾ ಸಮಾವೇಶ ಎಂದು ಹೆಸರಿಸಿರುವ ಸಂಘಟಕರನ್ನು ಅಭಿನಂದಿಸುತ್ತೇನೆ. ಕೆಲವನ್ನು ವಿರೋಧಿಸಲು ಸಾಧ್ಯವಿಲ್ಲ, ಸೊಳ್ಳೆ, ಡೆಂಗ್ಯೂ, ಮಲೇರಿಯಾ, ಕರೋನಾ ಇತ್ಯಾದಿಗಳನ್ನು ನಿರ್ಮೂಲನೆ ಮಾಡಬೇಕೆ ಹೊರತು ಅವುಗಳನ್ನು ವಿರೋಧಿಸಲು ಸಾಧ್ಯವಿಲ್ಲ ಎಂದು ಹೇಳಿದರು. 

ಇದನ್ನೂ ಓದಿ:5 ಅಫೇರ್, 2 ಮದುವೆ.. ಆದರೂ‌ ಒಂಟಿ ಜೀವನ ಕಳೆಯುತ್ತಿರುವ ಖ್ಯಾತ ನಟಿ

ಸನಾತನ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಸನಾತನ ಎಂಬ ಪದವು ಸಂಸ್ಕೃತದಿಂದ ಬಂದಿದೆ, ಅಂದರೆ ಸ್ಥಿರ ಮತ್ತು ಬದಲಾಗುವುದಿಲ್ಲ ಎಂದು ಅರ್ಥೈಸುತ್ತದೆ. ಆದರೆ ನಾವು ಎಲ್ಲವನ್ನೂ ಬದಲಾಯಿಸಬೇಕಾಗಿದೆ. ಯಾವುದೂ ಶಾಶ್ವತವಲ್ಲ. ಕಮ್ಯುನಿಸ್ಟ್ ಚಳವಳಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಎಲ್ಲವನ್ನು ಪ್ರಶ್ನಿಸಿ ಹುಟ್ಟು ಹಾಕಿರುವ ಚಳವಳಿ ಎಂದು ಹೇಳಿದರು. ಸಚಿವ ಉದಯನಿಧಿ ಭಾಷಣದ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. 

'ಸುಳ್ಳು ಸುದ್ದಿ ಹಬ್ಬಿಸಬೇಡಿ' : ಇನ್ನು ತಮ್ಮ ಹೇಳಿಕೆಗೆ ವಿರೋಧ ವ್ಯಕ್ತವಾದ ಹಿನ್ನೆಲೆ, ನನ್ನ ಭಾಷಣದ ಮುಖ್ಯ ವಿಷಯವನ್ನು ನಾನು ಪುನರುಚ್ಚರಿಸುತ್ತೇನೆ: ಡೆಂಗ್ಯೂ, ಮಲೇರಿಯಾ ಮತ್ತು ಮಾರಣಾಂತಿಕ ಕೊರೊನಾ ವೈರಸ್‌ನಂತಹ ಸೊಳ್ಳೆಗಳಿಂದ ಹರಡುವ ರೋಗಗಳ ಹರಡುವಿಕೆಯಂತಹ ಅನೇಕ ಸಾಮಾಜಿಕ ಅನಿಷ್ಟಗಳಿಗೆ ಸನಾತನ ಧರ್ಮ ಕಾರಣವಾಗಿದೆ ಎಂದು ನಾನು ನಂಬುತ್ತೇನೆ. ನ್ಯಾಯಾಲಯವಾಗಲಿ, ಜನತಾ ವೇದಿಕೆಯಾಗಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧನಿದ್ದೇನೆ. ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಿ ಎಂದು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:  ಸೋನು ಶ್ರೀನಿವಾಸ್ ಗೌಡ ಹಾಟ್‌ ಅವತಾರ.. ಕೈಯಲ್ಲಿ ಗ್ಲಾಸ್‌, ಸಿಗರೇಟು.!

ನಿಮ್ಮ ಅಭಿಪ್ರಾಯ ಕ್ರಿಶ್ಚಿಯನ್‌ ಮಿಷನರಿಗಳಿಂದ ಹುಟ್ಟಿಕೊಂಡಿದೆ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡ ಉದಯನಿಧಿ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟ್ಟರ್ ಪೋಸ್ಟ್‌ನಲ್ಲಿ, “ಗೋಪಾಲಪುರಂ ಕುಟುಂಬದ ಏಕೈಕ ಗುರಿ ರಾಜ್ಯದ ಜಿಡಿಪಿಯನ್ನು ಮೀರಿ ಸಂಪತ್ತನ್ನು ಸಂಗ್ರಹಿಸುವುದು. ಉದಯನಿಧಿ ಸ್ಟಾಲಿನ್ ಅವರ ನಿಮ್ಮ, ನಿಮ್ಮ ತಂದೆ ಅಥವಾ ನಿಮ್ಮಿಬ್ಬರ ಅಭಿಪ್ರಾಯಗಳು ಕ್ರಿಶ್ಚಿಯನ್ ಮಿಷನರಿಗಳಿಂದ ಹುಟ್ಟಿಕೊಂಡಿವೆ ಎಂದು ಗುಡುಗಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News