ದೀಪಾವಳಿಗೆ 'ಬಘೀರ'ನ ಅಬ್ಬರ... ಬಹುನಿರೀಕ್ಷಿತ ಸಿನಿಮಾದ ಹಾಡು ಬಿಡುಗಡೆಗೆ ಡೇಟ್‌ ಫಿಕ್ಸ್... ಈ ದಿನ ರಿಲೀಸ್‌ ಆಗಲಿದೆ ʼರುಧೀರ ಧಾರಾʼ!

Bagheera Movie Song: ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಚಿತ್ರ ಈಗಾಗಲೇ ಸಾಕಷ್ಟು ಹೈಪ್‌ ಕ್ರಿಯೇಟ್‌ ಮಾಡಿದೆ. ಈ ಚಿತ್ರಕ್ಕೆ ಕೆಜಿಎಫ್‌ ಮತ್ತು ಸಲಾರ್‌ ಸಿನಿಮಾ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ ಎಂಬುದು ಇನ್ನೊಂದು ಬಲ.

Written by - Bhavishya Shetty | Last Updated : Oct 15, 2024, 06:53 PM IST
    • ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಚಿತ್ರ‌ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌
    • ಹೈ ಬಜೆಟ್‌ ಸಿನಿಮಾಗಳನ್ನು ನೀಡಿದ ಕೀರ್ತಿ ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರು ಅವರದ್ದು
    • ಹೊಸ ಸಿನಿಮಾ ʼಬಘೀರʼ ಇದೇ ಮಾಸಾಂತ್ಯಕ್ಕೆ ತೆರೆಗೆ ಬರಲಿದೆ
ದೀಪಾವಳಿಗೆ 'ಬಘೀರ'ನ ಅಬ್ಬರ... ಬಹುನಿರೀಕ್ಷಿತ ಸಿನಿಮಾದ ಹಾಡು ಬಿಡುಗಡೆಗೆ ಡೇಟ್‌ ಫಿಕ್ಸ್... ಈ ದಿನ ರಿಲೀಸ್‌ ಆಗಲಿದೆ ʼರುಧೀರ ಧಾರಾʼ! title=
File Photo

ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಚಿತ್ರ‌ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌... ಇನ್ನು ಭಾರತೀಯ ಚಿತ್ರೋದ್ಯಮಕ್ಕೆ ಹೈ ಬಜೆಟ್‌ ಸಿನಿಮಾಗಳನ್ನು ನೀಡಿದ ಕೀರ್ತಿ ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರು ಅವರದ್ದು. ಕೆಜಿಎಫ್‌, ಕೆಜಿಎಫ್‌ 2, ಕಾಂತಾರ, ಸಲಾರ್‌ ಸಿನಿಮಾ ಮೂಲಕ ಬ್ಲಾಕ್‌ ಬಸ್ಟರ್‌ ಹಿಟ್‌ ನೀಡಿದ್ದು ಸಹ ಇದೇ ಸಂಸ್ಥೆ. ಇದೀಗ ಇದೇ ಹೊಂಬಾಳೆ ಬತ್ತಳಿಕೆಯ ಮತ್ತೊಂದು ಹೊಸ ಸಿನಿಮಾ ʼಬಘೀರʼ. ಈ ಸಿನಿಮಾ ಇನ್ನೇನು ಇದೇ ಮಾಸಾಂತ್ಯಕ್ಕೆ ತೆರೆಗೆ ಬರಲಿದೆ. ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಶ್ರೇಷ್ಠತೆಗಾಗಿ ಮೈದಾನದಲ್ಲಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದ ಭಾರತದ ದಿಗ್ಗಜ

ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಚಿತ್ರ ಈಗಾಗಲೇ ಸಾಕಷ್ಟು ಹೈಪ್‌ ಕ್ರಿಯೇಟ್‌ ಮಾಡಿದೆ. ಈ ಚಿತ್ರಕ್ಕೆ ಕೆಜಿಎಫ್‌ ಮತ್ತು ಸಲಾರ್‌ ಸಿನಿಮಾ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ ಎಂಬುದು ಇನ್ನೊಂದು ಬಲ. ಆಕ್ಷನ್‌ ಟೀಸರ್‌ ಮೂಲಕವೇ ನಿರೀಕ್ಷೆ ಮೂಡಿಸಿರುವ ಈ ಸಿನಿಮಾದ ಮೊದಲ ಹಾಡು ʼರುಧೀರ ಧಾರಾʼ ಸಾಂಗ್‌ ಅಕ್ಟೋಬರ್‌ 17ರ ಬೆಳಗ್ಗೆ 10.35ಕ್ಕೆ ಬಿಡುಗಡೆ ಆಗಲಿದೆ. ಈ ಮೂಲಕ ಸಿನಿಮಾ ಪ್ರಚಾರಕ್ಕೆ ಧುಮುಕಲಿದೆ.

ಡಾಕ್ಟರ್‌ ಸೂರಿ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವ ಬಘೀರ ಚಿತ್ರದಲ್ಲಿ ಪೊಲೀಸ್‌ ಅವತಾರದಲ್ಲಿ ಶ್ರೀಮುರಳಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್‌ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್‌ ರಾಜ್‌, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗರುಡ ರಾಮ್ ಸೇರಿ ಇನ್ನೂ ಹತ್ತಾರು ಕಲಾವಿದರು ನಟಿಸಿದ್ದಾರೆ. ತಾಂತ್ರಿಕ ಬಳಗದಲ್ಲಿ ಎ.ಜೆ ಶೆಟ್ಟಿ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ, ಪ್ರಣವ್‌ ಶ್ರೀ ಪ್ರಸಾದ್‌ ಸಂಕಲನ, ರವಿ ಸಂತೆಹಕ್ಲು ಕಲಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಆಕ್ಷನ್‌ ಸಿನಿಮಾ ಆಗಿರೋದ್ರಿಂದ ಚೇತನ್‌ ಡಿಸೋಜ್‌ ಈ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ದೀಪಾವಳಿಗೆ ಮಹಿಳೆಯರ ಖಾತೆಗೆ 3 ಸಾವಿರ ರೂಪಾಯಿ !ಹಬ್ಬಕ್ಕೆ ಸಿಗುವುದು ಬಂಪರ್ ಬೋನಸ್ 

ಅಕ್ಟೋಬರ್‌ 31ರ ದೀಪಾವಳಿ ಹಬ್ಬದ ಪ್ರಯುಕ್ತ ಹೊಂಬಾಳೆ ಫಿಲಂಸ್‌ನ ವಿಜಯ ಕಿರಗಂದೂರು ನಿರ್ಮಾಣ ಮಾಡಿರುವ ಬಘೀರ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರದ ಮೊದಲ ಹಾಡಿನ ಮೂಲಕ ಆಗಮಿಸುತ್ತಿರುವ ಬಘೀರ, ಮುಂದಿನ ಎರಡು ವಾರಗಳ ಕಾಲ ಪ್ರಮೋಷನ್‌ ಕೆಲಸದಲ್ಲಿ ಬಿಜಿಯಾಗಲಿದೆ. ಸಾಲು ಸಾಲು ಸರ್ಪ್ರೈಸ್‌ಗಳು ಸಿನಿಮಾ ಪ್ರಿಯರಿಗೆ ಸಿಗಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News