ಟಿ ಎಸ್ ನಾಗಾಭರಣ ನಿರ್ದೇಶನದಲ್ಲಿ ಬರಲಿದೆ ನಾಡಪ್ರಭು ಕೆಂಪೇಗೌಡ ಸಿನಿಮಾ , ಮುಖ್ಯ ಭೂಮಿಕೆಯಲ್ಲಿ ನಟ....?

Nadaprabhu Kempegowda : ಕನ್ನಡದ ಖ್ಯಾತ ನಿರ್ದೇಶಕ ಟಿ ಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬರುತ್ತಿದೆ.

Written by - Zee Kannada News Desk | Last Updated : Jun 21, 2024, 07:38 PM IST
  • ಈಗಾಗಲೇ ಪೋಸ್ಟರ್ ಬಿಡುಗಡೆಯಾಗಿದ್ದು, ಭರ್ಜರಿ ಪಾತ್ರದಲ್ಲಿ ಕಾಣಿಸಿದ್ದಾರೆ
  • ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
  • ಮುಂಚೆ ಸಿನಿಮಾದಲ್ಲಿ ದರ್ಶನ್ ಹಾಗೂ ಸುದೀಪ್ ನಟಿಸುವ ಕುರಿತು ಹಲವಾರು ಚರ್ಚೆಗಳು ಈಗಾಗಲೇ ನಡೆದಿದೆ.
ಟಿ ಎಸ್ ನಾಗಾಭರಣ ನಿರ್ದೇಶನದಲ್ಲಿ ಬರಲಿದೆ ನಾಡಪ್ರಭು ಕೆಂಪೇಗೌಡ ಸಿನಿಮಾ , ಮುಖ್ಯ ಭೂಮಿಕೆಯಲ್ಲಿ ನಟ....? title=

ಕನ್ನಡದ ಖ್ಯಾತ ನಿರ್ದೇಶಕ ಟಿ ಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬರುತ್ತಿದೆ.

ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಜೀವನ ಕುರಿತು ಸಿನಿಮಾ ಬರಲು ಸಿದ್ಧವಾಗಿದ್ದು, ಕೆಂಪೇಗೌಡ ಪಾತ್ರದಲ್ಲಿ ಯಾರು ಮುಖ್ಯ ಭೂಮಿಯಲ್ಲಿ ಇರಲಿದ್ದಾರೆ ಎಂಬುದು ಕುತೂಹಲಕರ ಸಂಗತಿಯಾಗಿದೆ. 

ಇದನ್ನು ಓದಿ : KGF-1 Re-Release : ಕೆಜಿಎಫ್ ಮರು ಬಿಡುಗಡೆ.. ಯಾವಾಗ? ಎಲ್ಲಿ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ!!

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ಅನುಭವಿ ನಿರ್ದೇಶಕ ಟಿಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಸಿನಿಮಾ ತೆರೆ ಕಾಣುತ್ತಿದ್ದು, ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ನಟ ಡಾಲಿ ಧನಂಜಯ್ ನಟಿಸಲಿದ್ದಾರೆ. 

ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ ಧನಂಜಯ್ ನಟಿಸಲಿದ್ದಾರೆ ಎಂದು ನಿರ್ಧಾರವಾಗುವ ಮುಂಚೆ ಸಿನಿಮಾದಲ್ಲಿ ದರ್ಶನ್ ಹಾಗೂ ಸುದೀಪ್ ನಟಿಸುವ ಕುರಿತು ಹಲವಾರು ಚರ್ಚೆಗಳು ಈಗಾಗಲೇ ನಡೆದಿದೆ. 

ಆದರೆ ಸದ್ಯ ಈಗ ಡಾಲಿ ಧನಂಜಯ್ ಪಾತ್ರದಲ್ಲಿ ಮಿಂಚುತ್ತಾರೆ ಎಂಬುದು ಪಕ್ಕ ಆಗಿದೆ ಮತ್ತು ಈಗಾಗಲೇ ಪೋಸ್ಟರ್ ಬಿಡುಗಡೆಯಾಗಿದ್ದು, ಧನಂಜಯ್ ಭರ್ಜರಿ ಪಾತ್ರದಲ್ಲಿ ಕಾಣಿಸಿದ್ದಾರೆ 

ಇದನ್ನು ಓದಿ : Darshan case : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ಗೆ ಐಟಿ ಸಂಕಷ್ಟ..! ನೋಟಿಸ್ ನೀಡುವ ಸಾಧ್ಯತೆ.?

ಟಿಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಸಿನಿಮಾ ತೆರೆ ಕಂಡರೆ, ಎಂ ಎನ್ ಶಿವರುದ್ರಪ್ಪ ಹಾಗೂ ಶುಭಂ ಗುಂಡಾಲ ನಿರ್ಮಾಣ ಮಾಡಿದ್ದಾರೆ. ಹಾಗೂ ಸಿನಿಮಾ ಚಿತ್ರಕಥೆಯನ್ನು ನಾಗಭರಣ ಅವರೇ ಬರೆದಿದ್ದು, ಸಾಹಿತಿ ಪ್ರತಿಭಾ ನಂದಕುಮಾರ್ ಈ ಬರವಣಿಗೆಯಲ್ಲಿ ಸಹಾಯ ಮಾಡಲಿದ್ದಾರೆ. 

ನಾಗಾಭರಣ ಅವರ ಪುತ್ರ ನಿರ್ದೇಶಕ ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News