ಬೆಂಗಳೂರು : ಟಾಲಿವುಡ್ ಇತಿಹಾಸದಲ್ಲಿ ಇದೊಂದು ಕೆಟ್ಟ ದಿನದಂತೆ ಕಾಣುತ್ತಿದೆ. ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ ಇಂದು ಬೆಳಗ್ಗೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ನಟ ನಾಗಶೌರ್ಯ ಕೆಲ ನಿಮಿಷಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


COMMERCIAL BREAK
SCROLL TO CONTINUE READING

ಇತ್ತೀಚಿನ ವರದಿಗಳ ಪ್ರಕಾರ, ಯುವ ಮತ್ತು ಭರವಸೆಯ ನಾಯಕ ನಾಗ ಶೌರ್ಯ ಶೂಟಿಂಗ್ ಸ್ಪಾಟ್‌ನಲ್ಲಿ ಮೂರ್ಛೆ ಹೋಗಿದ್ದಾರೆ. ಕಳೆದ 3 ದಿನಗಳಿಂದ ಅವರು ತಮ್ಮ ಪಾತ್ರಕ್ಕಾಗಿ ಡಯಟ್‌ನಲ್ಲಿದ್ದರು ಎಂದು ಚಿತ್ರತಂಡ ತಿಳಿಸಿದೆ. ಕೂಡಲೇ ಅವರನ್ನು ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಎಐಜಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ನಿರ್ಜಲೀಕರಣಗೊಂಡಿದ್ದು, ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಾಳೆ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ನಟ ಮಹೇಶ್‌ ಬಾಬು ತಂದೆ ಆಸ್ಪತ್ರೆಗೆ ದಾಖಲು : ಆರೋಗ್ಯ ಸ್ಥಿತಿ ಚಿಂತಾಜನಕ...!


ಮತ್ತೊಂದೆಡೆ, ನಾಗ ಶೌರ್ಯ ಇದೇ ಭಾನುವಾರ ಬೆಂಗಳೂರಿನಲ್ಲಿ ಅನುಷಾ ಶೆಟ್ಟಿ ಅವರನ್ನು ಮದುವೆಯಾಗಲಿದ್ದಾರೆ. ಇನ್ನು ಖ್ಯಾತ ನಟ ಮಹೇಶ್‌ ಬಾಬು ಅವರ ತಂದೆ ಸೂಪರ್‌ ಸ್ಟಾರ್‌ ಕೃಷ್ಣ ಅವರು ಅಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. 24 ಗಂಟೆ ಬಳಿಕವಷ್ಟೇ ಅವರ ಆರೋಗ್ಯದ ಸ್ಥಿತಿ ಕುರಿತು ಹೇಳಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


ಮಧ್ಯರಾತ್ರಿ ಹೃದಯಾಘಾತವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. 24 ಗಂಟೆಗಳ ನಂತರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು, ಈಗಾಗಲೇ ಇಪ್ಪತ್ತು ನಿಮಿಷಗಳ ಕಾಲ ಸಿಪಿಆರ್ ಮಾಡಲಾಗಿದೆ, ಆದರೆ ಈಗ ಅವರ ಆರೋಗ್ಯ ಸ್ಥಿರವಾಗಿದ್ದರೂ ಸಹ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಕಾಂಟಿನೆಂಟರ್‌ ವೈದ್ಯರು ಮಾಹಿತಿ ನೀಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.