Nagbhushan car accident case: ನಾಗಭೂಷಣ್  ಮಾತನಾಡಿ, ಹಿಟ್ ಅಂಡ್ ರನ್ ಅಂತ ಹೇಳಬೇಡಿ, ಅಪಘಾತದ ಬಳಿಕ ನಾನೆ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದು ಎಂದು ಭಾವುಕರಾದರು. ಘಟನೆ ನಡೆದು ಅನೇಕ ದಿನಗಳ ಬಳಿಕ ನಿಮ್ಮ ಮುಂದೆ ಬಂದಿದ್ದೀನಿ, ನನಗೆ ಆ ಘಟನೆ ಅರಗಿಸಿಕೊಳ್ಳಲು ಇನ್ನೂ ಸಮಯ ಬೇಕು. ಹಾಗಾಗಿ ನಾನು ತಡವಾಗಿ ಮಾತನಾಡುತ್ತಿದ್ದೀನಿ ಎಂದು ಹೇಳಿದರು.   


COMMERCIAL BREAK
SCROLL TO CONTINUE READING

'ಕೋಣನಕುಂಟೆ  ಕ್ರಾಸ್ ಬಳಿ ಘಟನೆ ನಡೆದಿದ್ದು, ಅವರು ನನ್ನ ಕಾರಿಗೆ ದಿಢೀರ್ ಅಂತ ಅಡ್ಡ ಬಂದರುಅಪಘಾತವಾಯಿತು ಬಳಿಕ ನಾನೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದೆ. ಆಸ್ಪತ್ರೆಗೆ ಹೋಗುವಾಗ ಪೋಲಿಸರಿಗೆ ನಾನೆ ಫೋನ್ ಮಾಡಿ ಘಟನೆ ಬಗ್ಗೆ ವಿವರಿಸಿದೆ' ಎಂದು ಹೇಳಿದರು. ಪೊಲೀಸರು ಗಾಯಾಳುಗಳ ಸಂಬಂದಿಗಳ ಮುಂದೆಯೇ ಆಲ್ಕೋಹಾಲ್ ಪರೀಕ್ಷೆ ಹಾಗೂ ರಕ್ತ ಪರೀಕ್ಷೆ ಮಾಡಿಸಿದರು ನಂತರ ನಾನು ಆಸ್ಪತ್ರೆಯಿಂದ ಪೊಲೀಸ್ ಸ್ಟೇಷನ್‌ಗೆ ಹೋದೆ ಬೆಳಗ್ಗೆ ಸ್ಟೇಷನ್ ಬೇಲ್ ಮೂಲಕ ಹೊರಬಂದೆ' ಎಂದು ಘಟನೆ ವಿವರಿಸಿದರು.


ಇದನ್ನೂ ಓದಿ-ಬಿಗ್‌ ಬಾಸ್‌ ಮನೆಯಿಂದ ಅನಾರೋಗ್ಯದ ಕಾರಣ ಹೊರ ನಡೆದ ಸ್ಪರ್ಧಿ.!!


ನಮ್ಮಪ್ಪ ನಿಧನ ಹೊಂದಿದ್ದು ಹಿಟ್ ಅಂಡ್ ರನ್ ನಲ್ಲಿ 
ದುರಂತ ಎಂದರೆ ನಾಗಭೂಷಣ್ ತಂದೆ ಕೂಡ ಹಿಟ್ ಅಂಡ್ ರನ್ ಪ್ರಕರಣಲ್ಲಿಯೇ ನಿಧನಹೊಂದಿದ್ದು. ತಂದೆಯ ಸಾವನ್ನು ನೆನಪಿಸಿಕೊಂಡ ನಾಗಭೂಷಣ್ 'ಕಳೆದುಕೊಂಡ ನೋವು ಏನು ಅಂತ ನನಗೆ ಗೊತ್ತಿದೆ. ನನ್ನ ತಂದೆ ಕೂಡ ಅಪಘಾತದಲ್ಲಿಯೇ ನಿಧನರಾಗಿದ್ದು. ಅವರನ್ನು ಸಾಯಿಸಿದ್ದು ಯಾರು ಅಂತ ಇವತ್ತಿಗೂ ನಮಗೆ ಗೊತ್ತಿಲ್ಲ. ಆದರೀಗ ನಾನು ಅವರ ನೋವಿನಲ್ಲಿ ಭಾಗಿಯಾಗಿದ್ದೀನಿ' ಎಂದು ಬಾವುಕರಾದರು. 


ಅವರ ಕುಟುಂಬದ ಜೊತೆ ಸಂಪರ್ಕದಲ್ಲಿದ್ದೇವೆ. ನನ್ನ ಕೈಯಲ್ಲಿ ಏನು ಸಹಾಯ ಮಾಡಲು ಸಾಧ್ಯವಾಗುತ್ತೊ ನಾನು ಖಂಡಿತ  ಮಾಡುತ್ತೇನೆ. ಈ ಸಮಯದಲ್ಲಿ ನಾನು ಇನ್ನೇನು ಮಾಡಲು ಸಾಧ್ಯ ಎಂದು ನಾಗಭೂಷಣ್ ಭಾವುಕರಾದರು.  ಇದೇ ಸಮಯದಲ್ಲಿ ಅಪಘಾತ ಮಾಡಿದರೆ ದಯವಿಟ್ಟು ಯಾರು ಓಡಿ ಹೋಗಬೇಡಿ ಎಂದು ಮನವಿಮಾಡಿದರು. ಇದರಿಂದ ಹೊರಬರಲು ನನಗೆ ಸಮಯ ಬೇಕು . ನಂತರ ಮತ್ತೆ ನಿಮಗೆ ಸಿಗುತ್ತೇನೆ ಎಂದರು. 


ಇದನ್ನೂ ಓದಿ-Bigg Boss 10: ಬಿಗ್‌ ಬಾಸ್‌ನಲ್ಲಿ ಈ ಬಾರಿ ಜೈಲಿನಷ್ಟೇ ಶಿಕ್ಷೆ ಕೂಡ ಸ್ಪೆಷಲ್‌ ಆಗಿರಲಿದೆ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.