ಅಧಿಕ ಮೊತ್ತಕ್ಕೆ ಮಾರಾಟವಾಯಿತು "ಮಾರ್ಟಿನ್" ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು 

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಮಾರ್ಟಿನ್" ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ "ಸರೆಗಮ", " ಮಾರ್ಟಿನ್ " ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

Written by - YASHODHA POOJARI | Edited by - Manjunath N | Last Updated : Jan 6, 2024, 04:37 PM IST
  • ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ
  • ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ
  • ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ
ಅಧಿಕ ಮೊತ್ತಕ್ಕೆ ಮಾರಾಟವಾಯಿತು "ಮಾರ್ಟಿನ್" ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು  title=

ಬೆಂಗಳೂರು: ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಮಾರ್ಟಿನ್" ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ "ಸರೆಗಮ", " ಮಾರ್ಟಿನ್ " ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

"ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ" ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.  ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ  ಉದಯ್ ಕೆ ಮೆಹ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಯುವ ನಿಧಿ ಯೋಜನೆಯಡಿ ಹೆಚ್ಚು ನೊಂದಣಿ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ "ಮಾರ್ಟಿನ್" ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್,  ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News